ಬ್ರೇಕಿಂಗ್ ನ್ಯೂಸ್
22-12-23 06:31 pm Mangalore Correspondent ಕರಾವಳಿ
ಮಂಗಳೂರು, ಡಿ.22: ಮೂಲ್ಕಿ ಮತ್ತು ಮೂಡಬಿದ್ರೆ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಡಯಾಲಿಸಿಸ್ ಕೇಂದ್ರಗಳನ್ನು ಶೀಘ್ರದಲ್ಲೇ ಸ್ಥಾಪಿಸಲಾಗುವುದು ಎಂದು ಆರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಅವರು ಬುಧವಾರ ಮೂಲ್ಕಿ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿ ಮಾತನಾಡಿದರು. ಮೂಲ್ಕಿ ಸಮುದಾಯ ಆಸ್ಪತ್ರೆಗೆ ಈಗಾಗಲೇ ಎಂ.ಆರ್.ಪಿ.ಎಲ್ ಸಂಸ್ಥೆಯು ಒಂದು ಡಯಾಲಿಸಿಸ್ ಯಂತ್ರವನ್ನು ನೀಡಿದೆ. ರಾಜ್ಯ ಸರಕಾರದಿಂದ ಎರಡು ಡಯಾಲಿಸಿಸ್ ಯಂತ್ರಗಳನ್ನು ನೀಡಲಾಗುವುದು. ಇದಕ್ಕಾಗಿ ಎರಡೂ ಆಸ್ಪತ್ರೆಗಳಿಗೆ ಅಗತ್ಯ ವೈದ್ಯರನ್ನು ಮತ್ತು ತಂತ್ರಜ್ಞರನ್ನು ನೇಮಿಸಲಾಗುವುದು ಎಂದು ಸಚಿವರು ಹೇಳಿದರು. ಇದರಿಂದ ಇಲ್ಲಿನ ರೋಗಿಗಳು ಡಯಾಲಿಸಿಸ್ ಗೆ ಮಂಗಳೂರಿಗೆ ಹೋಗಬೇಕಾದ ಅನಿವಾರ್ಯತೆ ತಪ್ಪಲಿದೆ ಎಂದರು.

ಆಸ್ಪತ್ರೆಯಲ್ಲಿ ಡಯಾಬಿಟಿಸ್ ಗೆ ಸಂಬಂಧಿಸಿದ ಎಲ್ಲ ಔಷಧಗಳನ್ನು ಸಂಗ್ರಹಿಸಿಡಬೇಕು. ಆಸ್ಪತ್ರೆಯ ಅಭಿವೃದ್ಧಿಗೆ ಬೇಕಾದ ಅನುದಾನ ನೀಡಲಾಗುವುದು. ಇಲ್ಲಿಗೆ ಮಕ್ಕಳು, ಸ್ತ್ರೀರೋಗ ತಜ್ಞರನ್ನು ನೇಮಿಸಬೇಕೆಂಬ ಬೇಡಿಕೆಯಿದ್ದು, ಈ ಬಗ್ಗೆ ಪರಿಶೀಲಿಸಲಾಗುವುದು. ಆಸ್ಪತ್ರೆಯ ಸಂಪೂರ್ಣ ಬಳಕೆಗೆ ಒತ್ತು ನೀಡಲಾಗುವುದು ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.
ಈ ಸಂದರ್ಭದಲ್ಲಿ ಶಾಸಕ ಉಮಾನಾಥ ಕೋಟ್ಯಾನ್, ಮಂಗಳೂರು ಉಪವಿಭಾಗಾಧಿಕಾರಿ ಹರ್ಷವರ್ಧನ್, ತಹಶೀಲ್ದಾರ್ ಪ್ರದೀಪ್ ಕುರ್ಡೇಕರ್ ಮತ್ತಿತರರು ಉಪಸ್ಥಿತರಿದ್ದರು.
ಪ್ರವಾಸಿ ಮಂದಿರ ಕಾಮಗಾರಿ
ಸಚಿವರು ಇದಕ್ಕೂ ಮೊದಲು ಮೂಲ್ಕಿ ರಾಷ್ಟ್ರೀಯ ಹೆದ್ದಾರಿ ಸಮೀಪ ನಿರ್ಮಾಣಗೊಳ್ಳುತ್ತಿರುವ ಪ್ರವಾಸಿ ಮಂದಿರ ನಿವೇಶನಕ್ಕೆ ಭೇಟಿ ನೀಡಿ ಕಾಮಗಾರಿಯನ್ನು ಪರಿಶೀಲಿಸಿದರು. ಬಳಿಕ ಮೂಲ್ಕಿ ಮಿನಿ ವಿಧಾನಸೌಧ ಕಾಮಗಾರಿಯನ್ನು ಪರಿಶೀಲಿಸಿದರು. ಮೂಲ್ಕಿ ನಗರ ಪಂಚಾಯತ್ ನೂತನ ಕಾರ್ಯಾಲಯ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದರು.
Health and District In-charge Minister Dinesh Gundu Rao has said that dialysis centres will be set up at Mulki and Moodabidri Community Health Centres (CHCs) soon.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 10:50 pm
Mangalore Correspondent
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm