ಬ್ರೇಕಿಂಗ್ ನ್ಯೂಸ್
22-12-23 06:31 pm Mangalore Correspondent ಕರಾವಳಿ
ಮಂಗಳೂರು, ಡಿ.22: ಮೂಲ್ಕಿ ಮತ್ತು ಮೂಡಬಿದ್ರೆ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಡಯಾಲಿಸಿಸ್ ಕೇಂದ್ರಗಳನ್ನು ಶೀಘ್ರದಲ್ಲೇ ಸ್ಥಾಪಿಸಲಾಗುವುದು ಎಂದು ಆರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಅವರು ಬುಧವಾರ ಮೂಲ್ಕಿ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿ ಮಾತನಾಡಿದರು. ಮೂಲ್ಕಿ ಸಮುದಾಯ ಆಸ್ಪತ್ರೆಗೆ ಈಗಾಗಲೇ ಎಂ.ಆರ್.ಪಿ.ಎಲ್ ಸಂಸ್ಥೆಯು ಒಂದು ಡಯಾಲಿಸಿಸ್ ಯಂತ್ರವನ್ನು ನೀಡಿದೆ. ರಾಜ್ಯ ಸರಕಾರದಿಂದ ಎರಡು ಡಯಾಲಿಸಿಸ್ ಯಂತ್ರಗಳನ್ನು ನೀಡಲಾಗುವುದು. ಇದಕ್ಕಾಗಿ ಎರಡೂ ಆಸ್ಪತ್ರೆಗಳಿಗೆ ಅಗತ್ಯ ವೈದ್ಯರನ್ನು ಮತ್ತು ತಂತ್ರಜ್ಞರನ್ನು ನೇಮಿಸಲಾಗುವುದು ಎಂದು ಸಚಿವರು ಹೇಳಿದರು. ಇದರಿಂದ ಇಲ್ಲಿನ ರೋಗಿಗಳು ಡಯಾಲಿಸಿಸ್ ಗೆ ಮಂಗಳೂರಿಗೆ ಹೋಗಬೇಕಾದ ಅನಿವಾರ್ಯತೆ ತಪ್ಪಲಿದೆ ಎಂದರು.

ಆಸ್ಪತ್ರೆಯಲ್ಲಿ ಡಯಾಬಿಟಿಸ್ ಗೆ ಸಂಬಂಧಿಸಿದ ಎಲ್ಲ ಔಷಧಗಳನ್ನು ಸಂಗ್ರಹಿಸಿಡಬೇಕು. ಆಸ್ಪತ್ರೆಯ ಅಭಿವೃದ್ಧಿಗೆ ಬೇಕಾದ ಅನುದಾನ ನೀಡಲಾಗುವುದು. ಇಲ್ಲಿಗೆ ಮಕ್ಕಳು, ಸ್ತ್ರೀರೋಗ ತಜ್ಞರನ್ನು ನೇಮಿಸಬೇಕೆಂಬ ಬೇಡಿಕೆಯಿದ್ದು, ಈ ಬಗ್ಗೆ ಪರಿಶೀಲಿಸಲಾಗುವುದು. ಆಸ್ಪತ್ರೆಯ ಸಂಪೂರ್ಣ ಬಳಕೆಗೆ ಒತ್ತು ನೀಡಲಾಗುವುದು ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.
ಈ ಸಂದರ್ಭದಲ್ಲಿ ಶಾಸಕ ಉಮಾನಾಥ ಕೋಟ್ಯಾನ್, ಮಂಗಳೂರು ಉಪವಿಭಾಗಾಧಿಕಾರಿ ಹರ್ಷವರ್ಧನ್, ತಹಶೀಲ್ದಾರ್ ಪ್ರದೀಪ್ ಕುರ್ಡೇಕರ್ ಮತ್ತಿತರರು ಉಪಸ್ಥಿತರಿದ್ದರು.
ಪ್ರವಾಸಿ ಮಂದಿರ ಕಾಮಗಾರಿ
ಸಚಿವರು ಇದಕ್ಕೂ ಮೊದಲು ಮೂಲ್ಕಿ ರಾಷ್ಟ್ರೀಯ ಹೆದ್ದಾರಿ ಸಮೀಪ ನಿರ್ಮಾಣಗೊಳ್ಳುತ್ತಿರುವ ಪ್ರವಾಸಿ ಮಂದಿರ ನಿವೇಶನಕ್ಕೆ ಭೇಟಿ ನೀಡಿ ಕಾಮಗಾರಿಯನ್ನು ಪರಿಶೀಲಿಸಿದರು. ಬಳಿಕ ಮೂಲ್ಕಿ ಮಿನಿ ವಿಧಾನಸೌಧ ಕಾಮಗಾರಿಯನ್ನು ಪರಿಶೀಲಿಸಿದರು. ಮೂಲ್ಕಿ ನಗರ ಪಂಚಾಯತ್ ನೂತನ ಕಾರ್ಯಾಲಯ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದರು.
Health and District In-charge Minister Dinesh Gundu Rao has said that dialysis centres will be set up at Mulki and Moodabidri Community Health Centres (CHCs) soon.
07-08-26 04:18 pm
HK News Staffer
ತಂದೆಯನ್ನು ವೃದ್ಧಾಶ್ರಮಕ್ಕೆ ಸೇರಿಸಿ ಸಾವಿಗೂ ಬಾರದ ಪ...
06-08-26 03:49 pm
ಕಲಬುರಗಿಯಲ್ಲಿ SIR ಪರಿಷ್ಕರಣೆ ಶಾಕ್ ; 5.36 ಲಕ್ಷ...
06-08-26 02:19 pm
'ಮಂತ್ರಿ ಸ್ಥಾನಕ್ಕೆ ಕೋಟಿ ಕೋಟಿ ಡೀಲ್?' ಮಾಜಿ ಸಚಿವರ...
05-08-26 10:56 pm
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅಸಮರ್ಥ, ಛಲವಾದಿ...
04-08-26 09:12 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
06-08-26 11:03 pm
Mangaluru Staffer
ಅಯೋಧ್ಯೆ ಕಾಣಿಕೆ ಹಣ ಕಳವು ತೀವ್ರ ಆಘಾತಕಾರಿ, ಯಾವುದೇ...
06-08-26 10:22 pm
ಹಿಂದೂ ದೇವಸ್ಥಾನಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ...
06-08-26 09:33 pm
ಹೆದ್ದಾರಿ ಬದಿ ವ್ಯಾಪಾರಿಗಳ ವಿರುದ್ಧ ಕಾರ್ಯಾಚರಣೆಗಿಳ...
06-08-26 08:09 pm
ಸುರತ್ಕಲ್ ಎನ್ಐಟಿಕೆ ಕಾಲೇಜು ಹಾಸ್ಟೆಲ್ನಲ್ಲಿ ಸ್ವಯ...
05-08-26 08:08 pm
07-08-26 08:44 pm
HK News Staffer
Udupi Murder, David Dsouza: ಕುಂದಾಪುರ ಶೂಟೌಟ್ ಮ...
07-08-26 06:00 pm
ಬಟ್ಟೆ ವಿಚಾರಕ್ಕೆ ಸಹೋದರಿಯರ ಸಣ್ಣ ಜಗಳ; ತಾಯಿ ಬೈದಿದ...
07-08-26 04:22 pm
ಒಂದೇ ಮರಕ್ಕೆ ನೇಣು ಬಿಗಿದುಕೊಂಡ ಇಬ್ಬರು ಯುವತಿಯರ ಪ್...
07-08-26 12:35 pm
ಲವ್ - ಸೆಕ್ಸ್..ದೋಖಾ ; ಬಳ್ಳಾರಿಯಲ್ಲಿ ಬೆಚ್ಚಿಬೀಳಿಸ...
06-08-26 09:31 pm