ಬ್ರೇಕಿಂಗ್ ನ್ಯೂಸ್
23-12-23 10:18 pm Mangalore Correspondent ಕರಾವಳಿ
ಮಂಗಳೂರು, ಡಿ.23: ಮಂಗಳೂರಿನಿಂದ ಬೆಂಗಳೂರಿಗೆ ರಾತ್ರಿ 8.15ಕ್ಕೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ಕೊನೆಕ್ಷಣದಲ್ಲಿ ರದ್ದಾದ ಕಾರಣ ಪ್ರಯಾಣಿಕರು ಆಕ್ರೋಶಿತರಾಗಿ ಏರ್ಪೋರ್ಟ್ ಸಿಬಂದಿಯನ್ನು ತರಾಟೆಗೆತ್ತಿಕೊಂಡ ಘಟನೆ ನಡೆದಿದೆ.
ಬಜ್ಪೆ ವಿಮಾನ ನಿಲ್ದಾಣದಿಂದ ರಾತ್ರಿ 8.15ಕ್ಕೆ ಏರ್ ಇಂಡಿಯಾ ವಿಮಾನ ನಿಗದಿಯಾಗಿತ್ತು. ಆದರೆ ವಿಮಾನ ಬಂದಿರಲಿಲ್ಲ. ಸಮಯ ಕಳೆದರೂ ವಿಮಾನ ಬಾರದೇ ಇದ್ದುದರಿಂದ ಪ್ರಯಾಣಿಕರು ಆಕ್ರೋಶಗೊಂಡಿದ್ದು ಏರ್ ಇಂಡಿಯಾ ಸಿಬಂದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ನಾವು ಅಮೆರಿಕಕ್ಕೆ ಹೋಗಬೇಕು. ಬೆಂಗಳೂರಿಗೆ ಸಕಾಲಕ್ಕೆ ತಲುಪದೇ ಇದ್ದಲ್ಲಿ ವಿಮಾನ ಸಿಗಲ್ಲ. ನೀವು ಕೊನೆಯ ಕ್ಷಣದಲ್ಲಿ ವಿಮಾನ ಇಲ್ಲಾಂದ್ರೆ ಏನು ಮಾಡಬೇಕೆಂದು ಪ್ರಯಾಣಿಕರೊಬ್ಬರು ತೀವ್ರ ತರಾಟೆಗೆತ್ತಿಕೊಂಡಿದ್ದಾರೆ. ಇನ್ನು ಕೆಲವರು ಬೆಂಗಳೂರಿನಲ್ಲಿ ಪರೀಕ್ಷೆ ಬರೆಯಲು ಹೊರಟವರಿದ್ದರು. ವಿಮಾನ ಇಲ್ಲಾಂದ್ರೆ ಮೊದಲೇ ಹೇಳಬೇಕಲ್ಲ. ಹೀಗೆ ಮಾಡಿದರೆ ನಾವೇನು ಮಾಡಬೇಕು. ಇದಕ್ಕೆ ಯಾರು ಹೊಣೆ ಎಂದು ಪ್ರಶ್ನೆ ಮಾಡಿದ್ದಾರೆ.


ಕ್ರಿಸ್ಮಸ್ ಆಗಿದ್ದರಿಂದ ತುರ್ತು ಪ್ರಯಾಣಕ್ಕೆ ಹೊರಟವರೂ ಇದ್ದರು. ವಿಮಾನ ಇಲ್ಲದೆ ಕಂಗಾಲಾಗಿದ್ದರು. ಅರ್ಜೆಂಟ್ ಹೋಗಲೇಬೇಕು, ನೀವು ಪರ್ಯಾಯ ವ್ಯವಸ್ಥೆ ಮಾಡಿ. ಬೇರೆ ವಿಮಾನ ವ್ಯವಸ್ಥೆ ಮಾಡಿ. ಈಗ ರದ್ದಾಗಿದೆ ಎಂದರೆ ಆಗೋದಿಲ್ಲ ಎಂದು ಆಕ್ರೋಶ ತೋರಿದ್ದಾರೆ. ಸಿಬಂದಿ ಪ್ರಯಾಣಿಕರನ್ನು ಸಮಾಧಾನ ಮಾಡಲೆತ್ನಿಸಿದರೂ ಕೇಳಲಿಲ್ಲ. ಕೊನೆಗೆ, ಏರ್ ಇಂಡಿಯಾ ಸಿಬಂದಿ ವಿಮಾನವು ತಾಂತ್ರಿಕ ತೊಂದರೆಗೀಡಾಗಿದ್ದು ಬೆಂಗಳೂರಿನಲ್ಲಿ ಉಳಿದಿದೆ. ಪರ್ಯಾಯ ವ್ಯವಸ್ಥೆ ಮಾಡಿದ್ದು ರಾತ್ರಿ 2.15ಕ್ಕೆ ಬೇರೊಂದು ವಿಮಾನದಲ್ಲಿ ಪ್ರಯಾಣಕ್ಕೆ ವ್ಯವಸ್ಥೆ ಮಾಡಿದ್ದೇವೆ ಎಂದಿದ್ದಾರೆ. ಎಂಟು ಗಂಟೆಯ ವಿಮಾನಕ್ಕಾಗಿ ಬಂದಿದ್ದ ಪ್ರಯಾಣಿಕರು ಬದಲಿ ವ್ಯವಸ್ಥೆಗಾಗಿ ಕಾದು ಕುಳಿತಿದ್ದಾರೆ.
Mangalore Bangalore airindia flight of 8:10 cancelled at last moment, passengers go angry, fight, video viral.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm