ಬ್ರೇಕಿಂಗ್ ನ್ಯೂಸ್
23-12-23 10:18 pm Mangalore Correspondent ಕರಾವಳಿ
ಮಂಗಳೂರು, ಡಿ.23: ಮಂಗಳೂರಿನಿಂದ ಬೆಂಗಳೂರಿಗೆ ರಾತ್ರಿ 8.15ಕ್ಕೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ಕೊನೆಕ್ಷಣದಲ್ಲಿ ರದ್ದಾದ ಕಾರಣ ಪ್ರಯಾಣಿಕರು ಆಕ್ರೋಶಿತರಾಗಿ ಏರ್ಪೋರ್ಟ್ ಸಿಬಂದಿಯನ್ನು ತರಾಟೆಗೆತ್ತಿಕೊಂಡ ಘಟನೆ ನಡೆದಿದೆ.
ಬಜ್ಪೆ ವಿಮಾನ ನಿಲ್ದಾಣದಿಂದ ರಾತ್ರಿ 8.15ಕ್ಕೆ ಏರ್ ಇಂಡಿಯಾ ವಿಮಾನ ನಿಗದಿಯಾಗಿತ್ತು. ಆದರೆ ವಿಮಾನ ಬಂದಿರಲಿಲ್ಲ. ಸಮಯ ಕಳೆದರೂ ವಿಮಾನ ಬಾರದೇ ಇದ್ದುದರಿಂದ ಪ್ರಯಾಣಿಕರು ಆಕ್ರೋಶಗೊಂಡಿದ್ದು ಏರ್ ಇಂಡಿಯಾ ಸಿಬಂದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಾವು ಅಮೆರಿಕಕ್ಕೆ ಹೋಗಬೇಕು. ಬೆಂಗಳೂರಿಗೆ ಸಕಾಲಕ್ಕೆ ತಲುಪದೇ ಇದ್ದಲ್ಲಿ ವಿಮಾನ ಸಿಗಲ್ಲ. ನೀವು ಕೊನೆಯ ಕ್ಷಣದಲ್ಲಿ ವಿಮಾನ ಇಲ್ಲಾಂದ್ರೆ ಏನು ಮಾಡಬೇಕೆಂದು ಪ್ರಯಾಣಿಕರೊಬ್ಬರು ತೀವ್ರ ತರಾಟೆಗೆತ್ತಿಕೊಂಡಿದ್ದಾರೆ. ಇನ್ನು ಕೆಲವರು ಬೆಂಗಳೂರಿನಲ್ಲಿ ಪರೀಕ್ಷೆ ಬರೆಯಲು ಹೊರಟವರಿದ್ದರು. ವಿಮಾನ ಇಲ್ಲಾಂದ್ರೆ ಮೊದಲೇ ಹೇಳಬೇಕಲ್ಲ. ಹೀಗೆ ಮಾಡಿದರೆ ನಾವೇನು ಮಾಡಬೇಕು. ಇದಕ್ಕೆ ಯಾರು ಹೊಣೆ ಎಂದು ಪ್ರಶ್ನೆ ಮಾಡಿದ್ದಾರೆ.
ಕ್ರಿಸ್ಮಸ್ ಆಗಿದ್ದರಿಂದ ತುರ್ತು ಪ್ರಯಾಣಕ್ಕೆ ಹೊರಟವರೂ ಇದ್ದರು. ವಿಮಾನ ಇಲ್ಲದೆ ಕಂಗಾಲಾಗಿದ್ದರು. ಅರ್ಜೆಂಟ್ ಹೋಗಲೇಬೇಕು, ನೀವು ಪರ್ಯಾಯ ವ್ಯವಸ್ಥೆ ಮಾಡಿ. ಬೇರೆ ವಿಮಾನ ವ್ಯವಸ್ಥೆ ಮಾಡಿ. ಈಗ ರದ್ದಾಗಿದೆ ಎಂದರೆ ಆಗೋದಿಲ್ಲ ಎಂದು ಆಕ್ರೋಶ ತೋರಿದ್ದಾರೆ. ಸಿಬಂದಿ ಪ್ರಯಾಣಿಕರನ್ನು ಸಮಾಧಾನ ಮಾಡಲೆತ್ನಿಸಿದರೂ ಕೇಳಲಿಲ್ಲ. ಕೊನೆಗೆ, ಏರ್ ಇಂಡಿಯಾ ಸಿಬಂದಿ ವಿಮಾನವು ತಾಂತ್ರಿಕ ತೊಂದರೆಗೀಡಾಗಿದ್ದು ಬೆಂಗಳೂರಿನಲ್ಲಿ ಉಳಿದಿದೆ. ಪರ್ಯಾಯ ವ್ಯವಸ್ಥೆ ಮಾಡಿದ್ದು ರಾತ್ರಿ 2.15ಕ್ಕೆ ಬೇರೊಂದು ವಿಮಾನದಲ್ಲಿ ಪ್ರಯಾಣಕ್ಕೆ ವ್ಯವಸ್ಥೆ ಮಾಡಿದ್ದೇವೆ ಎಂದಿದ್ದಾರೆ. ಎಂಟು ಗಂಟೆಯ ವಿಮಾನಕ್ಕಾಗಿ ಬಂದಿದ್ದ ಪ್ರಯಾಣಿಕರು ಬದಲಿ ವ್ಯವಸ್ಥೆಗಾಗಿ ಕಾದು ಕುಳಿತಿದ್ದಾರೆ.
Mangalore Bangalore airindia flight of 8:10 cancelled at last moment, passengers go angry, fight, video viral.
16-09-25 11:00 pm
Bangalore Correspondent
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
16-09-25 07:48 pm
Mangalore Correspondent
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
17-09-25 12:25 pm
Bangalore Correspondent
Vijayapura Bank Robbery: ಮಹಾರಾಷ್ಟ್ರ ಗಡಿಭಾಗದ ವ...
16-09-25 10:40 pm
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm