ಬ್ರೇಕಿಂಗ್ ನ್ಯೂಸ್
23-12-23 10:18 pm Mangalore Correspondent ಕರಾವಳಿ
ಮಂಗಳೂರು, ಡಿ.23: ಮಂಗಳೂರಿನಿಂದ ಬೆಂಗಳೂರಿಗೆ ರಾತ್ರಿ 8.15ಕ್ಕೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ಕೊನೆಕ್ಷಣದಲ್ಲಿ ರದ್ದಾದ ಕಾರಣ ಪ್ರಯಾಣಿಕರು ಆಕ್ರೋಶಿತರಾಗಿ ಏರ್ಪೋರ್ಟ್ ಸಿಬಂದಿಯನ್ನು ತರಾಟೆಗೆತ್ತಿಕೊಂಡ ಘಟನೆ ನಡೆದಿದೆ.
ಬಜ್ಪೆ ವಿಮಾನ ನಿಲ್ದಾಣದಿಂದ ರಾತ್ರಿ 8.15ಕ್ಕೆ ಏರ್ ಇಂಡಿಯಾ ವಿಮಾನ ನಿಗದಿಯಾಗಿತ್ತು. ಆದರೆ ವಿಮಾನ ಬಂದಿರಲಿಲ್ಲ. ಸಮಯ ಕಳೆದರೂ ವಿಮಾನ ಬಾರದೇ ಇದ್ದುದರಿಂದ ಪ್ರಯಾಣಿಕರು ಆಕ್ರೋಶಗೊಂಡಿದ್ದು ಏರ್ ಇಂಡಿಯಾ ಸಿಬಂದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ನಾವು ಅಮೆರಿಕಕ್ಕೆ ಹೋಗಬೇಕು. ಬೆಂಗಳೂರಿಗೆ ಸಕಾಲಕ್ಕೆ ತಲುಪದೇ ಇದ್ದಲ್ಲಿ ವಿಮಾನ ಸಿಗಲ್ಲ. ನೀವು ಕೊನೆಯ ಕ್ಷಣದಲ್ಲಿ ವಿಮಾನ ಇಲ್ಲಾಂದ್ರೆ ಏನು ಮಾಡಬೇಕೆಂದು ಪ್ರಯಾಣಿಕರೊಬ್ಬರು ತೀವ್ರ ತರಾಟೆಗೆತ್ತಿಕೊಂಡಿದ್ದಾರೆ. ಇನ್ನು ಕೆಲವರು ಬೆಂಗಳೂರಿನಲ್ಲಿ ಪರೀಕ್ಷೆ ಬರೆಯಲು ಹೊರಟವರಿದ್ದರು. ವಿಮಾನ ಇಲ್ಲಾಂದ್ರೆ ಮೊದಲೇ ಹೇಳಬೇಕಲ್ಲ. ಹೀಗೆ ಮಾಡಿದರೆ ನಾವೇನು ಮಾಡಬೇಕು. ಇದಕ್ಕೆ ಯಾರು ಹೊಣೆ ಎಂದು ಪ್ರಶ್ನೆ ಮಾಡಿದ್ದಾರೆ.


ಕ್ರಿಸ್ಮಸ್ ಆಗಿದ್ದರಿಂದ ತುರ್ತು ಪ್ರಯಾಣಕ್ಕೆ ಹೊರಟವರೂ ಇದ್ದರು. ವಿಮಾನ ಇಲ್ಲದೆ ಕಂಗಾಲಾಗಿದ್ದರು. ಅರ್ಜೆಂಟ್ ಹೋಗಲೇಬೇಕು, ನೀವು ಪರ್ಯಾಯ ವ್ಯವಸ್ಥೆ ಮಾಡಿ. ಬೇರೆ ವಿಮಾನ ವ್ಯವಸ್ಥೆ ಮಾಡಿ. ಈಗ ರದ್ದಾಗಿದೆ ಎಂದರೆ ಆಗೋದಿಲ್ಲ ಎಂದು ಆಕ್ರೋಶ ತೋರಿದ್ದಾರೆ. ಸಿಬಂದಿ ಪ್ರಯಾಣಿಕರನ್ನು ಸಮಾಧಾನ ಮಾಡಲೆತ್ನಿಸಿದರೂ ಕೇಳಲಿಲ್ಲ. ಕೊನೆಗೆ, ಏರ್ ಇಂಡಿಯಾ ಸಿಬಂದಿ ವಿಮಾನವು ತಾಂತ್ರಿಕ ತೊಂದರೆಗೀಡಾಗಿದ್ದು ಬೆಂಗಳೂರಿನಲ್ಲಿ ಉಳಿದಿದೆ. ಪರ್ಯಾಯ ವ್ಯವಸ್ಥೆ ಮಾಡಿದ್ದು ರಾತ್ರಿ 2.15ಕ್ಕೆ ಬೇರೊಂದು ವಿಮಾನದಲ್ಲಿ ಪ್ರಯಾಣಕ್ಕೆ ವ್ಯವಸ್ಥೆ ಮಾಡಿದ್ದೇವೆ ಎಂದಿದ್ದಾರೆ. ಎಂಟು ಗಂಟೆಯ ವಿಮಾನಕ್ಕಾಗಿ ಬಂದಿದ್ದ ಪ್ರಯಾಣಿಕರು ಬದಲಿ ವ್ಯವಸ್ಥೆಗಾಗಿ ಕಾದು ಕುಳಿತಿದ್ದಾರೆ.
Mangalore Bangalore airindia flight of 8:10 cancelled at last moment, passengers go angry, fight, video viral.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 10:50 pm
Mangalore Correspondent
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm