ಬ್ರೇಕಿಂಗ್ ನ್ಯೂಸ್
23-12-23 10:18 pm Mangalore Correspondent ಕರಾವಳಿ
ಮಂಗಳೂರು, ಡಿ.23: ಮಂಗಳೂರಿನಿಂದ ಬೆಂಗಳೂರಿಗೆ ರಾತ್ರಿ 8.15ಕ್ಕೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ಕೊನೆಕ್ಷಣದಲ್ಲಿ ರದ್ದಾದ ಕಾರಣ ಪ್ರಯಾಣಿಕರು ಆಕ್ರೋಶಿತರಾಗಿ ಏರ್ಪೋರ್ಟ್ ಸಿಬಂದಿಯನ್ನು ತರಾಟೆಗೆತ್ತಿಕೊಂಡ ಘಟನೆ ನಡೆದಿದೆ.
ಬಜ್ಪೆ ವಿಮಾನ ನಿಲ್ದಾಣದಿಂದ ರಾತ್ರಿ 8.15ಕ್ಕೆ ಏರ್ ಇಂಡಿಯಾ ವಿಮಾನ ನಿಗದಿಯಾಗಿತ್ತು. ಆದರೆ ವಿಮಾನ ಬಂದಿರಲಿಲ್ಲ. ಸಮಯ ಕಳೆದರೂ ವಿಮಾನ ಬಾರದೇ ಇದ್ದುದರಿಂದ ಪ್ರಯಾಣಿಕರು ಆಕ್ರೋಶಗೊಂಡಿದ್ದು ಏರ್ ಇಂಡಿಯಾ ಸಿಬಂದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ನಾವು ಅಮೆರಿಕಕ್ಕೆ ಹೋಗಬೇಕು. ಬೆಂಗಳೂರಿಗೆ ಸಕಾಲಕ್ಕೆ ತಲುಪದೇ ಇದ್ದಲ್ಲಿ ವಿಮಾನ ಸಿಗಲ್ಲ. ನೀವು ಕೊನೆಯ ಕ್ಷಣದಲ್ಲಿ ವಿಮಾನ ಇಲ್ಲಾಂದ್ರೆ ಏನು ಮಾಡಬೇಕೆಂದು ಪ್ರಯಾಣಿಕರೊಬ್ಬರು ತೀವ್ರ ತರಾಟೆಗೆತ್ತಿಕೊಂಡಿದ್ದಾರೆ. ಇನ್ನು ಕೆಲವರು ಬೆಂಗಳೂರಿನಲ್ಲಿ ಪರೀಕ್ಷೆ ಬರೆಯಲು ಹೊರಟವರಿದ್ದರು. ವಿಮಾನ ಇಲ್ಲಾಂದ್ರೆ ಮೊದಲೇ ಹೇಳಬೇಕಲ್ಲ. ಹೀಗೆ ಮಾಡಿದರೆ ನಾವೇನು ಮಾಡಬೇಕು. ಇದಕ್ಕೆ ಯಾರು ಹೊಣೆ ಎಂದು ಪ್ರಶ್ನೆ ಮಾಡಿದ್ದಾರೆ.


ಕ್ರಿಸ್ಮಸ್ ಆಗಿದ್ದರಿಂದ ತುರ್ತು ಪ್ರಯಾಣಕ್ಕೆ ಹೊರಟವರೂ ಇದ್ದರು. ವಿಮಾನ ಇಲ್ಲದೆ ಕಂಗಾಲಾಗಿದ್ದರು. ಅರ್ಜೆಂಟ್ ಹೋಗಲೇಬೇಕು, ನೀವು ಪರ್ಯಾಯ ವ್ಯವಸ್ಥೆ ಮಾಡಿ. ಬೇರೆ ವಿಮಾನ ವ್ಯವಸ್ಥೆ ಮಾಡಿ. ಈಗ ರದ್ದಾಗಿದೆ ಎಂದರೆ ಆಗೋದಿಲ್ಲ ಎಂದು ಆಕ್ರೋಶ ತೋರಿದ್ದಾರೆ. ಸಿಬಂದಿ ಪ್ರಯಾಣಿಕರನ್ನು ಸಮಾಧಾನ ಮಾಡಲೆತ್ನಿಸಿದರೂ ಕೇಳಲಿಲ್ಲ. ಕೊನೆಗೆ, ಏರ್ ಇಂಡಿಯಾ ಸಿಬಂದಿ ವಿಮಾನವು ತಾಂತ್ರಿಕ ತೊಂದರೆಗೀಡಾಗಿದ್ದು ಬೆಂಗಳೂರಿನಲ್ಲಿ ಉಳಿದಿದೆ. ಪರ್ಯಾಯ ವ್ಯವಸ್ಥೆ ಮಾಡಿದ್ದು ರಾತ್ರಿ 2.15ಕ್ಕೆ ಬೇರೊಂದು ವಿಮಾನದಲ್ಲಿ ಪ್ರಯಾಣಕ್ಕೆ ವ್ಯವಸ್ಥೆ ಮಾಡಿದ್ದೇವೆ ಎಂದಿದ್ದಾರೆ. ಎಂಟು ಗಂಟೆಯ ವಿಮಾನಕ್ಕಾಗಿ ಬಂದಿದ್ದ ಪ್ರಯಾಣಿಕರು ಬದಲಿ ವ್ಯವಸ್ಥೆಗಾಗಿ ಕಾದು ಕುಳಿತಿದ್ದಾರೆ.
Mangalore Bangalore airindia flight of 8:10 cancelled at last moment, passengers go angry, fight, video viral.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 05:01 pm
Mangaluru Staffer
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm