ಬ್ರೇಕಿಂಗ್ ನ್ಯೂಸ್
23-12-23 10:18 pm Mangalore Correspondent ಕರಾವಳಿ
ಮಂಗಳೂರು, ಡಿ.23: ಮಂಗಳೂರಿನಿಂದ ಬೆಂಗಳೂರಿಗೆ ರಾತ್ರಿ 8.15ಕ್ಕೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ಕೊನೆಕ್ಷಣದಲ್ಲಿ ರದ್ದಾದ ಕಾರಣ ಪ್ರಯಾಣಿಕರು ಆಕ್ರೋಶಿತರಾಗಿ ಏರ್ಪೋರ್ಟ್ ಸಿಬಂದಿಯನ್ನು ತರಾಟೆಗೆತ್ತಿಕೊಂಡ ಘಟನೆ ನಡೆದಿದೆ.
ಬಜ್ಪೆ ವಿಮಾನ ನಿಲ್ದಾಣದಿಂದ ರಾತ್ರಿ 8.15ಕ್ಕೆ ಏರ್ ಇಂಡಿಯಾ ವಿಮಾನ ನಿಗದಿಯಾಗಿತ್ತು. ಆದರೆ ವಿಮಾನ ಬಂದಿರಲಿಲ್ಲ. ಸಮಯ ಕಳೆದರೂ ವಿಮಾನ ಬಾರದೇ ಇದ್ದುದರಿಂದ ಪ್ರಯಾಣಿಕರು ಆಕ್ರೋಶಗೊಂಡಿದ್ದು ಏರ್ ಇಂಡಿಯಾ ಸಿಬಂದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ನಾವು ಅಮೆರಿಕಕ್ಕೆ ಹೋಗಬೇಕು. ಬೆಂಗಳೂರಿಗೆ ಸಕಾಲಕ್ಕೆ ತಲುಪದೇ ಇದ್ದಲ್ಲಿ ವಿಮಾನ ಸಿಗಲ್ಲ. ನೀವು ಕೊನೆಯ ಕ್ಷಣದಲ್ಲಿ ವಿಮಾನ ಇಲ್ಲಾಂದ್ರೆ ಏನು ಮಾಡಬೇಕೆಂದು ಪ್ರಯಾಣಿಕರೊಬ್ಬರು ತೀವ್ರ ತರಾಟೆಗೆತ್ತಿಕೊಂಡಿದ್ದಾರೆ. ಇನ್ನು ಕೆಲವರು ಬೆಂಗಳೂರಿನಲ್ಲಿ ಪರೀಕ್ಷೆ ಬರೆಯಲು ಹೊರಟವರಿದ್ದರು. ವಿಮಾನ ಇಲ್ಲಾಂದ್ರೆ ಮೊದಲೇ ಹೇಳಬೇಕಲ್ಲ. ಹೀಗೆ ಮಾಡಿದರೆ ನಾವೇನು ಮಾಡಬೇಕು. ಇದಕ್ಕೆ ಯಾರು ಹೊಣೆ ಎಂದು ಪ್ರಶ್ನೆ ಮಾಡಿದ್ದಾರೆ.


ಕ್ರಿಸ್ಮಸ್ ಆಗಿದ್ದರಿಂದ ತುರ್ತು ಪ್ರಯಾಣಕ್ಕೆ ಹೊರಟವರೂ ಇದ್ದರು. ವಿಮಾನ ಇಲ್ಲದೆ ಕಂಗಾಲಾಗಿದ್ದರು. ಅರ್ಜೆಂಟ್ ಹೋಗಲೇಬೇಕು, ನೀವು ಪರ್ಯಾಯ ವ್ಯವಸ್ಥೆ ಮಾಡಿ. ಬೇರೆ ವಿಮಾನ ವ್ಯವಸ್ಥೆ ಮಾಡಿ. ಈಗ ರದ್ದಾಗಿದೆ ಎಂದರೆ ಆಗೋದಿಲ್ಲ ಎಂದು ಆಕ್ರೋಶ ತೋರಿದ್ದಾರೆ. ಸಿಬಂದಿ ಪ್ರಯಾಣಿಕರನ್ನು ಸಮಾಧಾನ ಮಾಡಲೆತ್ನಿಸಿದರೂ ಕೇಳಲಿಲ್ಲ. ಕೊನೆಗೆ, ಏರ್ ಇಂಡಿಯಾ ಸಿಬಂದಿ ವಿಮಾನವು ತಾಂತ್ರಿಕ ತೊಂದರೆಗೀಡಾಗಿದ್ದು ಬೆಂಗಳೂರಿನಲ್ಲಿ ಉಳಿದಿದೆ. ಪರ್ಯಾಯ ವ್ಯವಸ್ಥೆ ಮಾಡಿದ್ದು ರಾತ್ರಿ 2.15ಕ್ಕೆ ಬೇರೊಂದು ವಿಮಾನದಲ್ಲಿ ಪ್ರಯಾಣಕ್ಕೆ ವ್ಯವಸ್ಥೆ ಮಾಡಿದ್ದೇವೆ ಎಂದಿದ್ದಾರೆ. ಎಂಟು ಗಂಟೆಯ ವಿಮಾನಕ್ಕಾಗಿ ಬಂದಿದ್ದ ಪ್ರಯಾಣಿಕರು ಬದಲಿ ವ್ಯವಸ್ಥೆಗಾಗಿ ಕಾದು ಕುಳಿತಿದ್ದಾರೆ.
Mangalore Bangalore airindia flight of 8:10 cancelled at last moment, passengers go angry, fight, video viral.
13-02-26 10:41 am
HK News Desk
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
12-02-26 10:51 pm
HK News Desk
ನಕಲಿ ಷೇರು ಹೂಡಿಕೆ ಆ್ಯಪ್ ಹೆಸರಲ್ಲಿ ದುಪ್ಪಟ್ಟು ಲಾಭ...
12-02-26 09:31 pm
ಅಮೆರಿಕದಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ...
12-02-26 09:19 pm
260 ಜನರನ್ನು ಬಲಿ ಪಡೆದ ಅಹಮದಾಬಾದ್ ವಿಮಾನ ಪತನ ; ಇಂ...
12-02-26 01:40 pm
ಡಿಕೆ - ಸಿದ್ದು ಪವರ್ ಫೈಟ್ ; ‘ರಾಜಕಾರಣ ಮಾಡೋಕೆ ಬಂದ...
12-02-26 01:09 pm
13-02-26 06:38 pm
Giridhar Shetty, Mangaluru Staffer
ಪರ್ಸೆಂಟೇಜ್ ಈಗ ಹೆಚ್ಚಾಗಿದೆ, ರಾಜ್ಯದಲ್ಲಿ 37 ಸಾವಿರ...
13-02-26 01:28 pm
ಶಾಲಾ ಮಕ್ಕಳನ್ನು ಟಿಪ್ಪರ್ ನಲ್ಲಿ ತುಂಬಿಸಿ ಅಧ್ಯಯನ ಪ...
13-02-26 01:06 am
ಮೋದಿ ಹೆಸರಲ್ಲಿ ಹತ್ತು ನಮೋ ಕುಟೀರ ನಿರ್ಮಾಣ ಯೋಜನೆ ;...
12-02-26 10:36 pm
ಲವ್ ಜಿಹಾದ್ ಆರೋಪ ; ಸುರತ್ಕಲ್ ಲೇಡಿಸ್ ಪಿಜಿಯಲ್ಲಿ ಹ...
12-02-26 05:55 pm
13-02-26 03:35 pm
Mangalore Correspondent
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am
ರೌಡಿ ಶೀಟರ್ ಬಿಕ್ಲು ಶಿವ ಕೊಲೆ ; ಕೊನೆಗೂ ಭೈರತಿ ಬ...
13-02-26 12:54 am
ವಿಷದ ಲಡ್ಡು ತಿನ್ನಿಸಿ 6 ಜನರ ಹತ್ಯೆ ; ದೆಹಲಿಯಲ್ಲಿ...
12-02-26 02:34 pm
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm