ಬ್ರೇಕಿಂಗ್ ನ್ಯೂಸ್
24-12-23 08:49 pm Mangaluru Correspondent ಕರಾವಳಿ
ಮಂಗಳೂರು, ಡಿ.24: ಮಂಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿ ಬಹಳಷ್ಟು ಕಡಿಮೆಯಾಗಿದೆ ಎಂದು ನನಗೆ ಮಾಹಿತಿ ಬಂದಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ.
ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮಂಗಳೂರಿಗೆ ಆಗಮಿಸಿದ್ದ ಅವರಲ್ಲಿ ಆ್ಯಂಟಿ ಕಮ್ಯೂನಲ್ ವಿಂಗ್ ವಿಫಲವಾಗಿದೆಯೇ ಎಂದು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ್ದಾರೆ. ಅಂತಹ ಪ್ರಕರಣಗಳ ನಂಬರ್ ಗಳು ಕಡಿಮೆ ಆಗಿರೋದಂತು ಸತ್ಯ. ನಾವು ಅದರ ಬಗ್ಗೆ ಬಹಳ ಎಚ್ಚರಿಕೆ ವಹಿಸುತ್ತಿದ್ದೇವೆ. ಪೊಲೀಸ್ ಕಮಿಷನರ್, ಎಸ್ಪಿ, ಐ.ಜಿಯವರಿಗೆ ಸೂಚನೆ ಕೊಟ್ಟಿದ್ದೇನೆ. ಸಮಾಜದಲ್ಲಿ ಸಾಮರಸ್ಯ ಇರಬೇಕು. ಅಹಿತಕರ ಘಟನೆಗಳಿಗೆ ಅವಕಾಶ ಕೊಡಬೇಡಿ ಎಂದು ಸೂಚನೆ ನೀಡಿದ್ದೇನೆ.
ಹಾಗಂತ ಎಲ್ಲರ ಮೇಲೆ ಕೇಸು ಹಾಕಬೇಕೆಂದಿಲ್ಲ. ನೈತಿಕ ಪೊಲೀಸ್ ಗಿರಿ ಮಾಡುವವರ ವಿರುದ್ಧ ಕ್ರಮಕ್ಕೆ ಸೂಚಿಸಿದ್ದೇನೆ. ಅಂತಹ ಕೃತ್ಯ ಮಾಡದವರು ಭಯ ಪಡುವ ಅಗತ್ಯವಿಲ್ಲ ಎಂದರು. ಆ್ಯಂಟಿ ಕಮ್ಯೂನಲ್ ವಿಂಗ್ ಗೆ ನೇಮಕಾತಿ ಪ್ರಕ್ರಿಯೆ ಆಗ್ತಿದೆ. ಅವರಿಗೆ ಇನ್ನು ಹೆಚ್ಚಿನ ಸಿಬ್ಬಂದಿ ಕೊಡಬೇಕಾಗಿದೆ ಎಂದು ಕೇಳಿದ್ದಾರೆ. ಸಿಬಂದಿ ಪೂರೈಸುತ್ತೇವೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ.
ಹಿಜಾಬ್ ನಿಷೇಧ ವಾಪಸು ಪಡೆಯುವ ಬಗ್ಗೆ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಸಚಿವರು, ಬೊಮ್ಮಾಯಿಯವರು ಈಗಾಗಲೇ ಸ್ಪಷ್ಟಪಡಿಸಿದ್ದಾರೆ, ನಾವು ಆದೇಶ ಮಾಡಿಲ್ಲ ಎಂದು ಹೇಳಿದ್ದಾರೆ. ಒಂದು ವೇಳೆ ಮಾಡಿದ್ರೂ ನಾವು ಪರಿಶೀಲನೆ ಮಾಡ್ತೇವೆ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ. ಸಾಧಕ ಬಾಧಕ ನೋಡಿಕೊಂಡು ಸರ್ಕಾರ ತೀರ್ಮಾನ ತೆಗೆದುಕೊಳ್ಳುತ್ತೆ. ಗೊಂದಲ ಮೂಡಿಸುವ ಅವಶ್ಯಕತೆಯಿಲ್ಲ ಎಂದರು.
ಆ ಸಮುದಾಯವದವರು ಹಿಂದಿನಿಂದಲೂ ಸಹ ಹಿಜಾಬ್ ಹಾಕಿಕೊಂಡು ಶಾಲೆಗೆ ಬರ್ತಿದ್ದಾರೆ. ಇತ್ತಿಚೇಗಷ್ಟೇ ಬಿಜೆಪಿ ಸರ್ಕಾರ ಬಂದಾಗ ಅದರ ಬಗ್ಗೆ ಬೇರೆ ಬೇರೆ ವ್ಯಾಖ್ಯಾನ ಆಗಿದೆ. ಸಂವಿಧಾನವನ್ನು ಬಿಟ್ಟು ನಾವು ಯಾವುದೇ ಕೆಲಸ ಮಾಡೋದಿಲ್ಲ. ಸಂವಿಧಾನದ ಚೌಕಟ್ಟಿನಲ್ಲಿ ಏನೇ ತೀರ್ಮಾನ ಮಾಡಿದ್ರೂ ಕೆಲವರಿಗೆ ನೋವಾಗಬಹುದು, ಕೆಲವರಿಗೆ ಸಂತೋಷವಾಗಬಹುದು. ಆದ್ರೆ ಸಂವಿಧಾನದ ಚೌಕಟ್ಟಿನಲ್ಲಿ ಮಾತ್ರ ತೀರ್ಮಾನ ತೆಗೆದುಕೊಳ್ತೇವೆ ಎಂದು ಪರಮೇಶ್ವರ್ ಹೇಳಿದರು.
Moral policing rates are much lesser than before in Mangalore says Home Minister
07-08-26 04:18 pm
HK News Staffer
ತಂದೆಯನ್ನು ವೃದ್ಧಾಶ್ರಮಕ್ಕೆ ಸೇರಿಸಿ ಸಾವಿಗೂ ಬಾರದ ಪ...
06-08-26 03:49 pm
ಕಲಬುರಗಿಯಲ್ಲಿ SIR ಪರಿಷ್ಕರಣೆ ಶಾಕ್ ; 5.36 ಲಕ್ಷ...
06-08-26 02:19 pm
'ಮಂತ್ರಿ ಸ್ಥಾನಕ್ಕೆ ಕೋಟಿ ಕೋಟಿ ಡೀಲ್?' ಮಾಜಿ ಸಚಿವರ...
05-08-26 10:56 pm
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅಸಮರ್ಥ, ಛಲವಾದಿ...
04-08-26 09:12 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
06-08-26 11:03 pm
Mangaluru Staffer
ಅಯೋಧ್ಯೆ ಕಾಣಿಕೆ ಹಣ ಕಳವು ತೀವ್ರ ಆಘಾತಕಾರಿ, ಯಾವುದೇ...
06-08-26 10:22 pm
ಹಿಂದೂ ದೇವಸ್ಥಾನಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ...
06-08-26 09:33 pm
ಹೆದ್ದಾರಿ ಬದಿ ವ್ಯಾಪಾರಿಗಳ ವಿರುದ್ಧ ಕಾರ್ಯಾಚರಣೆಗಿಳ...
06-08-26 08:09 pm
ಸುರತ್ಕಲ್ ಎನ್ಐಟಿಕೆ ಕಾಲೇಜು ಹಾಸ್ಟೆಲ್ನಲ್ಲಿ ಸ್ವಯ...
05-08-26 08:08 pm
07-08-26 08:44 pm
HK News Staffer
Udupi Murder, David Dsouza: ಕುಂದಾಪುರ ಶೂಟೌಟ್ ಮ...
07-08-26 06:00 pm
ಬಟ್ಟೆ ವಿಚಾರಕ್ಕೆ ಸಹೋದರಿಯರ ಸಣ್ಣ ಜಗಳ; ತಾಯಿ ಬೈದಿದ...
07-08-26 04:22 pm
ಒಂದೇ ಮರಕ್ಕೆ ನೇಣು ಬಿಗಿದುಕೊಂಡ ಇಬ್ಬರು ಯುವತಿಯರ ಪ್...
07-08-26 12:35 pm
ಲವ್ - ಸೆಕ್ಸ್..ದೋಖಾ ; ಬಳ್ಳಾರಿಯಲ್ಲಿ ಬೆಚ್ಚಿಬೀಳಿಸ...
06-08-26 09:31 pm