ಬ್ರೇಕಿಂಗ್ ನ್ಯೂಸ್
24-12-23 08:59 pm Mangaluru Correspondent ಕರಾವಳಿ
ಬಂಟ್ವಾಳ, ಡಿ.24: ಹಣ ಡಬ್ಬಲ್ ಆಗುತ್ತೆ ಎಂದು ದಲ್ಲಾಳಿಗಳ ಮಾತು ನಂಬಿ ಆ್ಯಪ್ ಒಂದಕ್ಕೆ ಹೂಡಿಕೆ ಮಾಡಿ ಸುಮಾರು 21 ಲಕ್ಷ ರೂಪಾಯಿ ಕಳಕೊಂಡಿದ್ದ ಮಹಿಳೆಯೊಬ್ಬರು ಸಂಗಬೆಟ್ಟು ಸಮೀಪದ ಪುಚ್ಚಮೊಗರು ಎಂಬಲ್ಲಿ ಫಲ್ಗುಣಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕುಕ್ಕಿಪಾಡಿ ಗ್ರಾಮದ ಏರೋಡಿಯ ಜಾನ್ ಸಂತೋಷ್ ಡಿಸೋಜ ಎಂಬವರ ಪತ್ನಿ ವೀಟಾ ಮರಿನಾ ಡಿಸೋಜ (32) ಮೃತರು. ವೀಟಾ ಮರೀನಾ ಅವರು ಈ ಹಿಂದೆ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿದ್ದು ಬಳಿಕ ಹುದ್ದೆ ತೊರೆದು ವಿಮಾ ಪ್ರತಿನಿಧಿಯಾಗಿ ಕೆಲಸ ಮಾಡಿಕೊಂಡಿದ್ದರು. ಈ ನಡುವೆ ಯಾವುದೋ ಮೊಬೈಲ್ ಆ್ಯಪ್ ನಲ್ಲಿ ಹಣ ಹೂಡಿದರೆ ಡಬಲ್ ಆಗುತ್ತದೆ ಎಂದು ನಂಬಿ, ಸುಮಾರು 21 ಲಕ್ಷಕ್ಕೂ ಅಧಿಕ ಹಣ ಕಳೆದುಕೊಂಡಿದ್ದರು. ಈ ಬಗ್ಗೆ ಅವರು ಬಂಟ್ವಾಳ ಪೊಲೀಸರಿಗೂ ದೂರು ನೀಡಿದ್ದರು.
ಡಿ.23ರ ಶನಿವಾರ ರಾತ್ರಿ 9 ಗಂಟೆಗೆ ಮನೆಯಿಂದ ದ್ವಿಚಕ್ರ ವಾಹನದಲ್ಲಿ ತೆರಳಿದ್ದ ವೀಟಾ ಬಳಿಕ ನಾಪತ್ತೆಯಾಗಿದ್ದರು. ವಿಷಯ ತಿಳಿದು ಸ್ಥಳೀಯರು ಹುಡುಕಾಟ ನಡೆಸಿದ್ದು ಫಲ್ಗುಣಿ ಸೇತುವೆಯಲ್ಲಿ ದ್ವಿಚಕ್ರ ವಾಹನ ಪತ್ತೆಯಾಗಿತ್ತು. ಅಗ್ನಿಶಾಮಕದಳದ ಸಿಬ್ಬಂದಿ ಭಾನುವಾರ ಬೆಳಗ್ಗೆ ನದಿಯಲ್ಲಿ ಹುಡುಕಾಡಿದ್ದು ಶವ ಪತ್ತೆಯಾಗಿದೆ.
ಬಹುಗ್ರಾಮ ಕುಡಿಯುವ ನೀರು ಪೂರೈಕೆಗಾಗಿ ನಿರ್ಮಿಸಿರುವ ಅಣೆಕಟ್ಟೆ ಬಳಿ ಭಾನುವಾರ ಮೃತದೇಹ ಪತ್ತೆಯಾಗಿದೆ. ಬಂಟ್ವಾಳ ಗ್ರಾಮಾಂತರ ಠಾಣೆ ಮಹಿಳಾ ಎಸ್ ಐ ಭಾರತಿ ನೇತೃತ್ವದ ಪೊಲೀಸರ ತಂಡ ಸ್ಥಳಕ್ಕೇ ಭೇಟಿ ನೀಡಿ, ಮಹಜರು ನಡೆಸಿದ ಬಳಿಕ ಪ್ರಕರಣ ದಾಖಲಿಸಿಕೊಂಡಿದೆ
Money doubling, woman commits suicide after losing 21 lakhs in Bantwal Mangalore
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm