ಬ್ರೇಕಿಂಗ್ ನ್ಯೂಸ್
26-12-23 01:09 pm Mangalore Correspondent ಕರಾವಳಿ
ಮಂಗಳೂರು, ಡಿ.26: ಸೆಮಿ ಹೈ ಸ್ಪೀಡ್ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಮಂಗಳೂರು - ಮಡಗಾಂವ್ ಮಧ್ಯೆ ಪ್ರಾಯೋಗಿಕ ಓಡಾಟ ನಡೆಸಿದೆ. ಇಂದು ಬೆಳಗ್ಗೆ 8.30ಕ್ಕೆ ಮಂಗಳೂರು ಸೆಂಟ್ರಲ್ ನಿಲ್ದಾಣದಿಂದ ಮಡಗಾಂವ್ ಹೊರಟಿದೆ.
ಇಂದಿನಿಂದ ಮೂರು ದಿನ ಪ್ರಾಯೋಗಿಕ ಓಡಾಟ ನಡೆಸಲಿದೆ ಎಂದು ರೈಲ್ವೇ ಮೂಲಗಳಿಂದ ತಿಳಿದುಬಂದಿದೆ. ಮಂಗಳವಾರ ಬೆಳಗ್ಗೆ 8:30ಕ್ಕೆ ಮಂಗಳೂರು ಸೆಂಟ್ರಲ್ ನಿಲ್ದಾಣದಿಂದ ಹೊರಟ ರೈಲು ಮಧ್ಯಾಹ್ನ 1:15ಕ್ಕೆ ಮಡಗಾಂವ್ (ಗೋವಾ) ತಲುಪಲಿದೆ. ವಾಪಾಸು ಮಧ್ಯಾಹ್ನ 1:45ಕ್ಕೆ ಮಡಗಾಂವ್ ನಿಂದ ಹೊರಟು ಸಂಜೆ 6:30ಕ್ಕೆ ಮಂಗಳೂರು ಸೆಂಟ್ರಲ್ ತಲುಪಲಿದೆ. ಇಂದು ಬೆಳಗ್ಗೆ ಪ್ರಾಯೋಗಿಕ ಓಡಾಟ ಸಂದರ್ಭದಲ್ಲಿ ಮಂಗಳೂರು ಸಂಸದ ನಳಿನ್ ಕುಮಾರ್, ಶಾಸಕ ವೇದವ್ಯಾಸ ಕಾಮತ್ ರೈಲಿನ ವೀಕ್ಷಣೆ ಮಾಡಿದ್ದಾರೆ.


ನೂತನ ವಂದೇ ಭಾರತ್ ರೈಲು ಚೆನ್ನೈಯಿಂದ ಹೊರಟು ಕೇರಳದ ಕೋಝಿಕೋಡ್ ಮಾರ್ಗವಾಗಿ ಸೋಮವಾರ ಸಂಜೆ ಮಂಗಳೂರು ತಲುಪಿತ್ತು. ಮಂಗಳೂರು ಸೆಂಟ್ರಲ್ ಮತ್ತು ಮಡಗಾಂವ್ ವಂದೇ ಭಾರತ್ ಎಕ್ಸ್ಪ್ರೆಸ್ ಡಿಸೆಂಬರ್ 30ರಿಂದ ಅಧಿಕೃತ ಓಡಾಟಕ್ಕೆ ದಕ್ಷಿಣ ರೈಲ್ವೇ ಸಜ್ಜಾಗಿದೆ. ಆದರೆ ಈ ಬಗ್ಗೆ ರೈಲ್ವೆ ಮಂಡಳಿಯಿಂದ ಅಧಿಕೃತ ಪ್ರಕಟನೆ ಹೊರಡಿಸಿಲ್ಲ.


ಮಂಗಳೂರು - ಮಡಗಾಂವ್ ಸಹಿತ ದೇಶದಲ್ಲಿ ಹೊಸತಾಗಿ ಆರು ವಂದೇ ಭಾರತ್ ಎಕ್ಸ್ಪ್ರೆಸ್ ರೈಲುಗಳು ಹಾಗೂ ಮಂಗಳೂರು ಸೆಂಟ್ರಲ್ ನಿಲ್ದಾಣದಲ್ಲಿ ನಿರ್ಮಿಸಿದ ಹೆಚ್ಚುವರಿ ಪ್ಲಾಟ್ ಫಾರಂ ಗಳನ್ನು ಪ್ರಧಾನಿ ನರೇಂದ್ರ ಮೋದಿಯವರು ಡಿ.30ರಂದು ಉದ್ಘಾಟಿಸುವ ನಿರೀಕ್ಷೆ ಇದೆ ಎಂದು ರೈಲ್ವೆ ಮೂಲಗಳು ತಿಳಿಸಿವೆ. ಈ ಬಗ್ಗೆಯೂ ಅಧಿಕೃತ ಮಾಹಿತಿಗಳು ಲಭ್ಯವಾಗಿಲ್ಲ.
ಸಂಸದ ನಳಿನ್ ಕುಮಾರ್ ಕಳೆದ ಒಂದು ವರ್ಷದಿಂದ ಮಂಗಳೂರು - ಬೆಂಗಳೂರು ಮಧ್ಯೆ ವಂದೇ ಭಾರತ್ ರೈಲಿನ ಬಗ್ಗೆ ಹೇಳುತ್ತಲೇ ಬಂದಿದ್ದರು. ಮಂಗಳೂರು - ಗೋವಾ ಮಧ್ಯೆ ಕಳೆದ ಅಕ್ಟೋಬರ್ ತಿಂಗಳಲ್ಲಿಯೇ ರೈಲು ಸಂಚಾರ ಆಗುತ್ತೆ ಎಂದಿದ್ದರು. ಸತತ ಟೀಕೆ ಕೇಳಿಬಂದ ಬಳಿಕ ಮಂಗಳೂರಿಗೆ ವಂದೇ ಭಾರತ್ ರೈಲು ಬಂದಿದ್ದು ಇಂದು ಪ್ರಾಯೋಗಿಕ ಓಡಾಟ ನಡೆಸಿದೆ.
The Southern Railway will do the trial run of Mangaluru Central-Madgaon Vande Bharat Express on Tuesday, December 26. The train on trial run will depart from Mangaluru Central at 8.30 a.m. On the return journey, it will depart from Madgaon to Mangaluru at 1.45 p.m.
07-04-26 12:37 pm
HK News Staffer
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
07-04-26 11:45 am
HK News Staffer
ಟ್ರಂಪ್ ವಾರ್ನಿಂಗ್ ಗೆ ಇರಾನ್ ಟಕ್ಕರ್ ; ವಿದ್ಯುತ್ ಸ...
07-04-26 11:42 am
ಟ್ರಂಪ್ 8pm ಘೋರ ಎಚ್ಚರಿಕೆಗೆ ಇರಾನ್ ತಿರುಗೇಟು ; ನ...
06-04-26 06:16 pm
ಗಲ್ಫ್ ಯುದ್ಧ ಎಫೆಕ್ಟ್ ; ಇಸ್ರೇಲ್ ಗೆ ಏರ್ ಇಂಡಿಯಾ ವ...
06-04-26 06:09 pm
ಯುಎಇಯಿಂದ ಪಾಕಿಸ್ತಾನಕ್ಕೆ ಬಿಗ್ ಶಾಕ್ ; 2 ಬಿಲಿಯನ್...
05-04-26 12:37 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
07-04-26 10:08 am
HK News Staffer
ತಮಿಳಿನ ಖ್ಯಾತ ಕಿರುತೆರೆ ನಟಿ ಸುಭಾಷಿಣಿ ಬಾಲಸುಬ್ರಹ್...
06-04-26 05:40 pm
ಆತ್ಮಹತ್ಯೆ ಮಾಡಿಕೊಂಡ ಪತ್ನಿಯನ್ನು ನೋಡಲು ಆಸ್ಪತ್ರೆಗ...
06-04-26 02:34 pm
ಹಂದಿ ಬೇಟೆಗಾಗಿ ತೋಟದಲ್ಲಿ ಇಟ್ಟಿದ್ದ ನಾಡಬಾಂಬ್ ಸ್ಫೋ...
05-04-26 11:03 am
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm