ಬ್ರೇಕಿಂಗ್ ನ್ಯೂಸ್
27-12-23 01:50 pm Mangalore Correspondent ಕರಾವಳಿ
ಮಂಗಳೂರು, ಡಿ.27: ಎನ್ಎಂಪಿಟಿ ಬಂದರಿನಿಂದ 9.5 ನಾಟಿಕಲ್ ಮೈಲ್ ದೂರದ ಸಮುದ್ರದಲ್ಲಿ ಲಂಗರು ಹಾಕಿದ್ದ ಲೈಬೀರಿಯಾ ಮೂಲದ ತೈಲ ಟ್ಯಾಂಕರ್ ಹಡಗಿನಲ್ಲಿ ಸಿಬ್ಬಂದಿಯೊಬ್ಬರು ತೀವ್ರ ಅನಾರೋಗ್ಯಕ್ಕಿಡಾಗಿದ ಘಟನೆ ನಡೆದಿದ್ದು ಅವರನ್ನು ಕೋಸ್ಟ್ ಗಾರ್ಡ್ ಸಿಬಂದಿ ರಕ್ಷಿಸಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಎಂಟಿ ಐವರಿ ರೇ ಎನ್ನುವ ಹೆಸರಿನ ಹಡಗಿನಲ್ಲಿದ್ದ ಸಿಬ್ಬಂದಿಯೊಬ್ಬರು ನಿನ್ನೆ ರಾತ್ರಿ ವಾಶ್ ರೂಮಿನಲ್ಲಿದ್ದಾಗ ಕುಸಿದು ಬಿದ್ದಿದ್ದಾರೆ. ಕೂಡಲೇ ಕರ್ನಾಟಕದ ಕೋಸ್ಟ್ ಗಾರ್ಡ್ ಸಿಬಂದಿಗೆ ರಕ್ಷಣೆ ಕೋರಿ ಕರೆ ಬಂದಿತ್ತು. ಮಧ್ಯರಾತ್ರಿ 12.30ಕ್ಕೆ ಕರೆ ಬಂದಿದ್ದು ತುರ್ತಾಗಿ ಸ್ಪಂದಿಸಿದ ಕೋಸ್ಟ್ ಗಾರ್ಡ್ ಸಿಬಂದಿ ಸಿ-448 ಇಂಟರ್ ಸೆಪ್ಟರ್ ಬೋಟಿನಲ್ಲಿ ವೈದ್ಯರ ಸಹಿತ ಹಡಗಿನ ಬಳಿಗೆ ತೆರಳಿದ್ದಾರೆ. ತಡರಾತ್ರಿ 2.10ರ ವೇಳೆಗೆ ಬೋಟ್ ಅಲ್ಲಿಗೆ ತಲುಪಿದ್ದು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಸಿಬಂದಿಗೆ ತುರ್ತು ಚಿಕಿತ್ಸೆ ನೀಡಿ, ಕೂಡಲೇ ಅವರನ್ನು ಮಂಗಳೂರಿನ ಬಂದರಿಗೆ ಕರೆತಂದು ಆಸ್ಪತ್ರೆಗೆ ದಾಖಲಿಸಿದ್ದಾರೆ.
ತಡರಾತ್ರಿಯಾದರೂ ಕೋಸ್ಟ್ ಗಾರ್ಡ್ ಸಿಬಂದಿ ತುರ್ತಾಗಿ ಸ್ಪಂದಿಸಿ, ರಕ್ಷಣಾ ಕಾರ್ಯ ನಡೆಸಿದ್ದಾರೆ. ಐವರಿ ರೇ ಹಡಗು ತೈಲ ಮತ್ತು ಕೆಮಿಕಲ್ ಸರಕನ್ನು ಹೊತ್ತೊಯ್ಯುವ ಸಾಮರ್ಥ್ಯ ಹೊಂದಿದ್ದು 13 ದಿನಗಳ ಹಿಂದೆ ಲೈಬೀರಿಯಾದಿಂದ ಕೆಂಪು ಸಮುದ್ರ ಮೂಲಕ ಮಂಗಳೂರಿನ ಬಂದರಿಗೆ ಆಗಮಿಸಿತ್ತು. ಮಂಗಳೂರು ಬಂದರಿನಲ್ಲಿ ಒಳಬರಲು ಸಿಗ್ನಲ್ ಸಿಗದೇ ಇದ್ದುದರಿಂದ ಸಮುದ್ರ ಮಧ್ಯೆ ಲಂಗರು ಹಾಕಿತ್ತು. ಈ ವೇಳೆ, ಸಿಬಂದಿ ತೀವ್ರ ಅಸ್ವಸ್ಥಗೊಂಡ ಘಟನೆ ನಡೆದಿತ್ತು.
A crew member of a Liberian oil tanker ship, which was anchored in the sea 9.5 nautical miles from NMPT port, fell seriously ill and was rescued by the Coast Guard personnel and admitted to a hospital in Mangaluru.
16-09-25 11:00 pm
Bangalore Correspondent
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 01:34 pm
Mangalore Correspondent
Dharmasthala, Lakshmish Tolpadi, Mangalore: ಧ...
16-09-25 07:48 pm
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
17-09-25 02:46 pm
Udupi Correspondent
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm
Vijayapura Bank Robbery: ಮಹಾರಾಷ್ಟ್ರ ಗಡಿಭಾಗದ ವ...
16-09-25 10:40 pm
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm
Bangalore Police, Inspector Suspend, Crime, D...
15-09-25 10:47 pm