ಬ್ರೇಕಿಂಗ್ ನ್ಯೂಸ್
27-12-23 10:16 pm Mangalore Correspondent ಕರಾವಳಿ
ಮಂಗಳೂರು, ಡಿ.27: ಮುಸ್ಲಿಂ ಸಮುದಾಯದಲ್ಲಿ ಪುರುಷರೇ ಬಲಾಡ್ಯರು. ಮಹಿಳೆಯರ ಮೇಲೆ ಸಂಪೂರ್ಣ ಹಿಡಿತ ಹೊಂದಿದ್ದಾರೆ. ತಲಾಖ್ ನಿಷೇಧದಿಂದ ಮಹಿಳೆಯರಿಗೂ ಪ್ರಾತಿನಿಧ್ಯ ಸಿಗುತ್ತಿದ್ದು ಸಮಾಜದಲ್ಲಿ ಅವರು ಮುಂಚೂಣಿಗೆ ಬಂದಲ್ಲಿ ತಮಗೆ ಮರ್ಯಾದೆ ಸಿಗುವುದಿಲ್ಲ ಎಂಬ ಅಳುಕಿನಿಂದ ಮುಸ್ಲಿಂ ಹೆಣ್ಣು ಮಕ್ಕಳನ್ನ ಮುಂದಿಟ್ಟು ಬಲವಂತವಾಗಿ ಕಲ್ಲಡ್ಕ ಪ್ರಭಾಕರ ಭಟ್ ಮೇಲೆ ಕೇಸು ದಾಖಲಿಸುವ ಷಡ್ಯಂತ್ರ ನಡೆಸಿದ್ದಾರೆ ಎಂದು ಶಾಸಕ ಡಾ.ಭರತ್ ಶೆಟ್ಟಿ ಗಂಭೀರ ಆರೋಪ ಮಾಡಿದ್ದಾರೆ.
ಪ್ರಭಾಕರ್ ಭಟ್ ಅವರು ಮುಸ್ಲಿಂ ಹೆಣ್ಣು ಸಮಾಜಕ್ಕೆ ಸಿಕ್ಕಿರುವ ಗೌರವ, ತ್ರಿವಳಿ ತಲಾಕ್ ನಿಷೇಧ, ಪ್ರಧಾನಿ ಮೋದಿ ಅವರ ದೃಢ ಸಂಕಲ್ಪವನ್ನು ಹೇಳಿದ್ದಾರೆ ಹೊರತು ಇದರಲ್ಲಿ ಮುಸ್ಲಿಂ ಮಹಿಳಾ ಸಮಾಜಕ್ಕೆ ನೋವಾಗುವ ವಿಚಾರವಿಲ್ಲ ಎಂದು ಡಾ.ಪ್ರಭಾಕರ್ ಭಟ್ ಹೇಳಿಕೆಯನ್ನು ಭರತ್ ಶೆಟ್ಟಿ ಸಮರ್ಥಿಸಿಕೊಂಡಿದ್ದಾರೆ. ಖಟ್ಟರ್ ಹಿಂದುತ್ವ, ಆರ್ ಎಸ್ ಎಸ್ ನೇತಾರರಿಗೆ, ಹಿಂದೂ ವಿರೋಧಿ ಸರಕಾರ ಬಂದಾಗ ಹಿಂದೂಗಳ ವಿರುದ್ಧ ಕಾನೂನು ಕ್ರಮ ನಿರೀಕ್ಷಿತ. ಅದನ್ನು ಸಮರ್ಥವಾಗಿ ಎದುರಿಸಲಾಗುವುದು ಎಂದು ಹೇಳಿದ್ದಾರೆ.
ಮುಸ್ಲಿಂ ಸಮುದಾಯದಲ್ಲಿ ಪುರುಷ ಸಮಾಜ ಬಲಾಢ್ಯವಾಗಿದ್ದು ಹೆಣ್ಣು ಮಕ್ಕಳನ್ನು ಅಡಿಗೆ ಕೋಣೆಗೆ ಸೀಮಿತಗೊಳಿಸುವಂತಹ ಸಂಕುಚಿತ ಮನೋಭಾವವನ್ನು ಹೊಂದಿರುವವರ ಸಂಖ್ಯೆ ಈಗಲೂ ಹೆಚ್ಚಿದೆ ಎಂದು ಭರತ್ ಶೆಟ್ಟಿ ಟೀಕಿಸಿದ್ದು, ಮೋದಿ ಸರಕಾರ ನೊಂದ ಅಲ್ಪಸಂಖ್ಯಾತ ಹೆಣ್ಣು ಮಕ್ಕಳ ಬಾಳಿನಲ್ಲಿ ಬೆಳಕು ತಂದ ಸರಕಾರ. ಇದನ್ನು ಕಾಂಗ್ರೆಸ್, ಎಡಪಕ್ಷಗಳು ಸಹಿಸದೆ ಇಂತಹ ಕುತಂತ್ರ ಹೆಣೆಯುತ್ತಿವೆ ಎಂದು ಭರತ್ ಶೆಟ್ಟಿ ಟೀಕಿಸಿದ್ದಾರೆ.
ಕೇಸು ವಾಪಸ್ ಪಡೆಯಲು ಆಗ್ರಹ
ಕಾಂಗ್ರೆಸ್ ಸರ್ಕಾರದ ಹಿಂದು ವಿರೋಧಿ ನೀತಿ ಮುಂದುವರಿಸಿದ್ದು ಇದರ ವಿರುದ್ಧ ಹೋರಾಟ ಅನಿವಾರ್ಯವಾಗಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಮುಸ್ಲಿಂ ಸಮಾಜದ ಮಹಿಳೆಯರಿಗೆ ಆದ ಅನ್ಯಾಯ ಹಾಗೂ ಮೋದಿ ಸರ್ಕಾರ ತ್ರಿವಳಿ ತಲಾಕ್ ನಿಷೇಧ ಮಾಡಿದ ಬಗ್ಗೆ ಡಾ.ಭಟ್ ಅವರು ತಮ್ಮ ಭಾಷಣದಲ್ಲಿ ಉಲ್ಲೇಖಿಸಿದ್ದರು. ಇದೇ ಹೇಳಿಕೆಯನ್ನು ತಿರುಚಿ ಅಲ್ಪಸಂಖ್ಯಾತರನ್ನು ಓಲೈಸುವ ಉದ್ದೇಶದಿಂದ ಕೇಸು ದಾಖಲಿಸಲಾಗಿದೆ. ಸಿದ್ದರಾಮಯ್ಯ ಸರ್ಕಾರದ ಈ ಷಡ್ಯಂತ್ರವನ್ನು ಸಹಿಸಲು ಸಾಧ್ಯವಿಲ್ಲ. ಡಾ.ಪ್ರಭಾಕರ ಭಟ್ ವಿರುದ್ಧ ಹಾಕಿರುವ ಸುಳ್ಳು ಕೇಸನ್ನು ತಕ್ಷಣ ವಾಪಸು ಪಡೆಯಬೇಕೆಂದು ಸಂಸದರು ಆಗ್ರಹಿಸಿದ್ದಾರೆ.
Case against Kalladka Prabhakar Bhat, Muslims are using girls to file case says MLA Dr Bharath shetty.
01-08-25 02:55 pm
Bangalore Correspondent
ಧರ್ಮ 'ಸ್ಥಳ' ಕೇಸ್ ; ಪಾಯಿಂಟ್ ನಂ.1ರಲ್ಲಿ ಸಿಕ್ಕ...
01-08-25 01:31 pm
ಕೆಆರ್ ಐಡಿಎಲ್ ನಿಗಮವನ್ನೇ ಗುಡಿಸಿ ಹಾಕಿದ ಗುಮಾಸ್ತ !...
01-08-25 11:47 am
ಪಾಕಿಸ್ತಾನದಿಂದಲೇ ಭಾರತವನ್ನು ಸ್ಫೋಟಿಸುತ್ತೇನೆ ! ಗೋ...
31-07-25 11:20 pm
Kolar woman blood group: ಕೋಲಾರದ ಮಹಿಳೆಯಲ್ಲಿ ವಿ...
31-07-25 10:20 am
01-08-25 11:44 am
HK News Desk
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
ಜಾರ್ಖಂಡ್ ನಲ್ಲಿ ಭೀಕರ ರಸ್ತೆ ಅಪಘಾತ ; ಸಿಲಿಂಡರ್...
29-07-25 11:58 am
01-08-25 11:45 am
Mangalore Correspondent
ಬಂಟ್ವಾಳ ಪಿಎಸ್ಐ ಕೀರಪ್ಪ ಕಾಂಬಳೆ ಆತ್ಮಹತ್ಯೆ ಪ್ರಕರಣ...
31-07-25 11:16 pm
MCC Bank to Inaugurate 20th Branch in Byndoor...
31-07-25 10:14 pm
KMC Hospital Attavar Trains Armed Forces Doct...
31-07-25 09:14 pm
Mangalore KMC Attavar, Workshop: ಅತ್ತಾವರ ಕೆಎಂ...
31-07-25 09:05 pm
01-08-25 02:31 pm
HK News Desk
Mangalore Crime, Police: ಅಪ್ರಾಪ್ತ ಬಾಲಕಿಯನ್ನು...
31-07-25 06:04 pm
Bangalore Cyber Fraud: ಉದ್ಯೋಗಿಯನ್ನ ನಂಬಿ ಲ್ಯಾಪ...
30-07-25 10:42 pm
Mangalore Crime, Arrest: ಉದ್ಯಮಿಗಳಿಗೆ ನಕಲಿ ಆಸ್...
30-07-25 08:48 pm
Mysuru Drugs, Crime, Mumbai Police: ಮೈಸೂರಿನಲ್...
30-07-25 11:37 am