ಬ್ರೇಕಿಂಗ್ ನ್ಯೂಸ್
28-12-23 06:42 pm Mangalore Correspondent ಕರಾವಳಿ
ಮಂಗಳೂರು, ಡಿ.28 : ಪ್ರವಾಸಿ ತಾಣ ಪಣಂಬೂರು ಕಡಲತೀರದಲ್ಲಿ ಹೊಸತಾಗಿ ನಿರ್ಮಿಸಲಾದ ತೇಲುವ ಸೇತುವೆಯನ್ನು ಲೋಕಾರ್ಪಣೆ ಮಾಡಲಾಗಿದ್ದು ರಾಜ್ಯ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅಧಿಕೃತವಾಗಿ ಉದ್ಘಾಟಿಸಿದ್ದಾರೆ.
ಇತ್ತೀಚಿನ ವರ್ಷಗಳಲ್ಲಿ ಪಣಂಬೂರು ಕಡಲತೀರಕ್ಕೆ ಭಾರೀ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದಾರೆ. ಇದೀಗ ತೇಲುವ ಸೇತುವೆ ಹೊಸ ಆಕರ್ಷಣೆಯಾಗಿದ್ದು ಜನಾಕರ್ಷಣೆ ಗಳಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದು ಮೊದಲ ತೇಲುವ ಸೇತುವೆಯಾಗಿದ್ದು, ಇದಕ್ಕೂ ಹಿಂದೆ ಉಡುಪಿಯ ಮಲ್ಪೆ ಮತ್ತು ಕಾರವಾರ ಕಡಲತೀರದಲ್ಲಿ ತೇಲುವ ಸೇತುವೆ ನಿರ್ಮಿಸಲಾಗಿದೆ.



ಕದಳೀ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿಯ ವತಿಯಿಂದ 125 ಮೀಟರ್ ಉದ್ದದ ಸೇತುವೆಯನ್ನು ನಿರ್ಮಿಸಲಾಗಿದೆ. ಸಮುದ್ರದ ಅಲೆಗಳ ಮೇಲೆ ಹರಡಿರುವ ತೇಲುವ ಸೇತುವೆಯಲ್ಲಿ ಲೈಫ್ ಜಾಕೆಟ್ ಹಾಕ್ಕೊಂಡು ಪ್ರವಾಸಿಗರು ವಿಶೇಷ ಅನುಭವ ಪಡೆಯುತ್ತಿದ್ದಾರೆ.



ಪ್ರವಾಸಿಗರ ಸುರಕ್ಷತೆಗಾಗಿ 12 ಮಂದಿ ಜೀವ ರಕ್ಷಕರು ಮತ್ತು ಹೆಚ್ಚುವರಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ತೇಲುವ ಸೇತುವೆಯಲ್ಲಿ ನಿಂತು ಗರಿಷ್ಠ 50 ಜನರು ಸೂರ್ಯಾಸ್ತವನ್ನು ವೀಕ್ಷಿಸಬಹುದಾಗಿದೆ. ಉದ್ಘಾಟನೆ ಬಳಿಕ ಮಾತನಾಡಿದ ಖಾದರ್, ಬೀಚ್ ಟೂರಿಸಂ ಅಭಿವೃದ್ಧಿಗೆ ಆದ್ಯತೆ ನೀಡಲು ಪ್ರವಾಸೋದ್ಯಮ ಸಚಿವ ಎಚ್ಕೆ ಪಾಟೀಲ್ ಅವರೊಂದಿಗೆ ಮಾತುಕತೆ ನಡೆಸುವುದಾಗಿ ಹೇಳಿದರು.


ಇದಲ್ಲದೆ, ಜೆಟ್ ಸ್ಕೀ, ಬೋಟಿಂಗ್ ಇನ್ನಿತರ ಸಾಹಸ ಕ್ರೀಡೆಗಳನ್ನು ಕೂಡ ಬೀಚ್ ನಲ್ಲಿ ಏರ್ಪಡಿಸಲಾಗಿದೆ. ಸದ್ಯದಲ್ಲೇ ಸ್ಕೂಬಾ ಡೈವಿಂಗ್ ಮಾಡುವುದಕ್ಕೂ ವ್ಯವಸ್ಥೆ ಮಾಡಲಾಗುವುದು. ಇದಕ್ಕಾಗಿ ಸೂಕ್ತ ಜಾಗಕ್ಕಾಗಿ ಅಧ್ಯಯನ ಮಾಡುತ್ತಿದ್ದು ಕೆಲವು ಪ್ರದೇಶಗಳನ್ನು ಗುರುತಿಸಲಾಗಿದೆ ಎಂದು ಬೀಚ್ ಅಭಿವೃದ್ಧಿ ಸಮಿತಿಯ ಡಾ.ರಾಜೇಶ್ ಹುಕ್ಕೇರಿ ಹೇಳಿದರು. ಇನ್ನೊಬ್ಬ ಪಾಲುದಾರ ಲಕ್ಷ್ಮೀಶ ಭಂಡಾರಿ ಉಪಸ್ಥಿತರಿದ್ದರು.
The newly constructed floating bridge at Panambur beach was inaugurated by State Assembly Speaker U.T. Khader has officially inaugurated it.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm