ಬ್ರೇಕಿಂಗ್ ನ್ಯೂಸ್
28-12-23 09:47 pm Mangalore Correspondent ಕರಾವಳಿ
ಮಂಗಳೂರು, ಡಿ.28: ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂದು ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ದಾಖಲಾಗಿದ್ದ ಎಫ್ಐಆರ್ ರದ್ದು ಕೋರಿ ಹೈಕೋರ್ಟಿನಲ್ಲಿ ಸಲ್ಲಿಸಲಾಗಿದ್ದ ರಿಟ್ ಅರ್ಜಿಗೆ ರಿಲೀಫ್ ಸಿಕ್ಕಿದ್ದರೆ, ಶ್ರೀರಂಗಪಟ್ಟಣ ಸ್ಥಳೀಯ ಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ಎರಡೂ ಕಡೆಯಲ್ಲಿ ಹೈಕೋರ್ಟ್ ವಕೀಲ ಅರುಣ್ ಶ್ಯಾಮ್ ಅರ್ಜಿ ಸಲ್ಲಿಸಿದ್ದರು. ಪೊಲೀಸರು ಸುಳ್ಳು ಕೇಸು ದಾಖಲಿಸಿದ್ದು ಅದನ್ನು ರದ್ದು ಮಾಡಬೇಕು ಎಂದು ಹೈಕೋರ್ಟಿನಲ್ಲಿ ಅರ್ಜಿ ಹಾಕಲಾಗಿತ್ತು. ಅದನ್ನು ವಿಚಾರಣೆ ನಡೆಸಿದ ರಜಾಕಾಲದ ಪೀಠವು, ಸದ್ಯಕ್ಕೆ ಪೊಲೀಸರು ವಿಚಾರಣೆ ನೆಪದಲ್ಲಿ ಬಲಪ್ರಯೋಗ ಮಾಡುವಂತಿಲ್ಲ ಮತ್ತು ಅರೆಸ್ಟ್ ಮಾಡುವಂತಿಲ್ಲ ಎಂದು ಮಧ್ಯಂತರ ಆದೇಶ ನೀಡಿದೆ.
ಶ್ರೀರಂಗಪಟ್ಟಣ ಠಾಣೆಯ ಪೊಲೀಸರು ಎಫ್ಐಆರ್ ದಾಖಲಿಸಿದ್ದರಿಂದ, ಅದೇ ವ್ಯಾಪ್ತಿಯ ಸ್ಥಳೀಯ ಕೋರ್ಟಿನಲ್ಲಿ ಬಂಧನದ ವಿರುದ್ಧ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಕೆಯಾಗಿತ್ತು. ಅಲ್ಲಿನ ಕೋರ್ಟ್ ಪ್ರಭಾಕರ ಭಟ್ ಅವರಿಗೆ ನಿರೀಕ್ಷಣಾ ಜಾಮೀನು ನೀಡಿದೆ ಎಂದು ವಕೀಲ ಅರುಣ್ ಶ್ಯಾಮ್ ತಿಳಿಸಿದ್ದಾರೆ. ಡಿ.25ರಂದು ಮಂಡ್ಯದಲ್ಲಿ ನಡೆದ ಹನುಮ ಸಂಕೀರ್ತನಾ ಯಾತ್ರೆ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ್ದ ಪ್ರಭಾಕರ ಭಟ್, ಮುಸ್ಲಿಮ್ ಮಹಿಳೆಯರನ್ನು ತಲಾಖ್ ತಲಾಖ್ ಹೇಳಿ ಗಂಡಂದಿರು ನಡುಬೀದಿಯಲ್ಲಿ ಬಿಟ್ಟು ಹೋಗುತ್ತಿದ್ದರು. ಅವರನ್ನು ಕಾಪಾಡಿದ್ದು ಮೋದಿ ಸರ್ಕಾರ. ತಲಾಖ್ ನಿಷೇಧ ಮೂಲಕ ಅವರಿಗೆ ಪರ್ಮನೆಂಟ್ ಗಂಡ ಸಿಗುವಂತಾಗಿತ್ತು ಎಂದು ಹೇಳಿಕೆ ನೀಡಿದ್ದರು. ಭಟ್ಟರ ಈ ರೀತಿಯ ಮಾತುಗಳಿಗೆ ವಿರೋಧ ಪಕ್ಷಗಳು ಭಾರೀ ವಿರೋಧ ವ್ಯಕ್ತಪಡಿಸಿದ್ದಲ್ಲದೆ, ಬಂಧನಕ್ಕೂ ಆಗ್ರಹ ಮಾಡಿದ್ದವು.
Insulting Muslim women Kalladka Prabhakar Bhat gets high court order not to be arrested by Police. The joint forum of secular parties in Dakshina Kannada district on Thursday urged the government to immediately arrest RSS leader Kalladka Prabhakar Bhat for allegedly insulting Muslim women in a recent speech in Mandya district and initiate appropriate legal action.
01-08-25 02:55 pm
Bangalore Correspondent
ಧರ್ಮ 'ಸ್ಥಳ' ಕೇಸ್ ; ಪಾಯಿಂಟ್ ನಂ.1ರಲ್ಲಿ ಸಿಕ್ಕ...
01-08-25 01:31 pm
ಕೆಆರ್ ಐಡಿಎಲ್ ನಿಗಮವನ್ನೇ ಗುಡಿಸಿ ಹಾಕಿದ ಗುಮಾಸ್ತ !...
01-08-25 11:47 am
ಪಾಕಿಸ್ತಾನದಿಂದಲೇ ಭಾರತವನ್ನು ಸ್ಫೋಟಿಸುತ್ತೇನೆ ! ಗೋ...
31-07-25 11:20 pm
Kolar woman blood group: ಕೋಲಾರದ ಮಹಿಳೆಯಲ್ಲಿ ವಿ...
31-07-25 10:20 am
01-08-25 11:44 am
HK News Desk
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
ಜಾರ್ಖಂಡ್ ನಲ್ಲಿ ಭೀಕರ ರಸ್ತೆ ಅಪಘಾತ ; ಸಿಲಿಂಡರ್...
29-07-25 11:58 am
01-08-25 11:45 am
Mangalore Correspondent
ಬಂಟ್ವಾಳ ಪಿಎಸ್ಐ ಕೀರಪ್ಪ ಕಾಂಬಳೆ ಆತ್ಮಹತ್ಯೆ ಪ್ರಕರಣ...
31-07-25 11:16 pm
MCC Bank to Inaugurate 20th Branch in Byndoor...
31-07-25 10:14 pm
KMC Hospital Attavar Trains Armed Forces Doct...
31-07-25 09:14 pm
Mangalore KMC Attavar, Workshop: ಅತ್ತಾವರ ಕೆಎಂ...
31-07-25 09:05 pm
01-08-25 02:31 pm
HK News Desk
Mangalore Crime, Police: ಅಪ್ರಾಪ್ತ ಬಾಲಕಿಯನ್ನು...
31-07-25 06:04 pm
Bangalore Cyber Fraud: ಉದ್ಯೋಗಿಯನ್ನ ನಂಬಿ ಲ್ಯಾಪ...
30-07-25 10:42 pm
Mangalore Crime, Arrest: ಉದ್ಯಮಿಗಳಿಗೆ ನಕಲಿ ಆಸ್...
30-07-25 08:48 pm
Mysuru Drugs, Crime, Mumbai Police: ಮೈಸೂರಿನಲ್...
30-07-25 11:37 am