ಬ್ರೇಕಿಂಗ್ ನ್ಯೂಸ್
29-12-23 04:25 pm Mangalore Correspondent ಕರಾವಳಿ
ಉಳ್ಳಾಲ, ಡಿ.29: ಸಮುದ್ರದಲ್ಲಿ ನೀರಾಟಕ್ಕಿಳಿದ ಮೂವರು ಯುವಕರನ್ನ ರಕ್ಕಸ ಅಲೆಗಳು ಕೊಚ್ಚಿಕೊಂಡು ಹೋದ ಘಟನೆ ಉಳ್ಳಾಲದಲ್ಲಿ ನಡೆದಿದ್ದು, ಓರ್ವ ಯುವಕ ಮೃತಪಟ್ಟರೆ, ಮತ್ತೋರ್ವ ಸಮುದ್ರ ಪಾಲಾಗಿದ್ದು , ಇನ್ನೋರ್ವನನ್ನ ಸ್ಥಳೀಯ ಈಜುಗಾರರು ರಕ್ಷಿಸಿದ್ದಾರೆ.
ಚಿಕ್ಕಮಗಳೂರು ನಿವಾಸಿ ಸಲ್ಮಾನ್(19) ಮೃತಪಟ್ಟ ಯುವಕನಾಗಿದ್ದು , ಆತನ ಸಂಬಂಧಿ ಬಶೀರ್(23) ನೀರು ಪಾಲಾಗಿದ್ದಾನೆ. ಮತ್ತೋರ್ವ ಯುವಕ ಸೈಫ್ ಆಲಿ(27) ಆಸ್ಪತ್ರೆಯಲ್ಲಿ ಚೇತರಿಸಿದ್ದಾನೆ.

ಸಾವಿನ ದವಡೆಯಿಂದ ಪಾರಾದ ಯುವಕ ಸೈಫ್ ಅಲಿ
ಚಿಕ್ಕಮಗಳೂರು ಮೂಲದ ಬಶೀರ್, ಸಲ್ಮಾನ್ ಮತ್ತು ಸೈಫ್ ಅಲಿ ಎಂಬವರು ತಮ್ಮ ಕುಟುಂಬಸ್ಥರೊಂದಿಗೆ ಉಳ್ಳಾಲ ದರ್ಗಾಕ್ಕೆ ಭೇಟಿ ನೀಡಿದ್ದರು. ಇಂದು ಮಧ್ಯಾಹ್ನದ ವೇಳೆ ಉಳ್ಳಾಲ ಕಡಲ ಕಿನಾರೆಗೆ ವಿಹಾರಕ್ಕೆ ತೆರಳಿದ್ದರು. ಈ ವೇಳೆ ಬಶೀರ್, ಸಲ್ಮಾನ್, ಸೈಫ್ ಆಲಿ ನೀರಾಟಕ್ಕಿಳಿದಿದ್ದು ಸಮುದ್ರದ ರಕ್ಕಸ ಅಲೆಗಳು ಮೂವರನ್ನೂ ಎಳೆದೊಯ್ದಿದೆ.

ತಕ್ಷಣ ಸ್ಥಳೀಯ ಈಜುಗಾರರು ಸಲ್ಮಾನ್ ಮತ್ತು ಸೈಫ್ ಅಲಿಯನ್ನ ಎಳೆದು ದಡಕ್ಕೆ ಹಾಕಿದ್ದಾರೆ. ಸಲ್ಮಾನ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದು, ಸೈಫ್ ಅಲಿ ಪ್ರಾಣಾಪಾಯದಿಂದ ಪಾರಾಗಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಬಶೀರ್ ನೀರು ಪಾಲಾಗಿದ್ದು ಉಳ್ಳಾಲ ಪೊಲೀಸರು, ಅಗ್ನಿಶಾಮಕ ದಳದವರು ಆತನಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಘಟನೆ ವೇಳೆ ನೀರುಪಾಲಾಗಿರುವ ಬಶೀರ್ ಅವರ ತುಂಬು ಗರ್ಭಿಣಿ ಪತ್ನಿ ಮತ್ತು ಇತರ ಇಬ್ಬರು ಮಹಿಳೆಯರು ಇದ್ದರೆಂದು ಸ್ಥಳೀಯರು ತಿಳಿಸಿದ್ದಾರೆ.
Two drowned at Beach in Ullal at Mangalore, two dead, one saved. The two have said to come from Chikmagaluru.They had come to visit ullal dargah
13-01-26 03:04 pm
Bangalore Correspondent
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
13-01-26 03:37 pm
HK News Desk
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm