ಬ್ರೇಕಿಂಗ್ ನ್ಯೂಸ್
29-12-23 04:25 pm Mangalore Correspondent ಕರಾವಳಿ
ಉಳ್ಳಾಲ, ಡಿ.29: ಸಮುದ್ರದಲ್ಲಿ ನೀರಾಟಕ್ಕಿಳಿದ ಮೂವರು ಯುವಕರನ್ನ ರಕ್ಕಸ ಅಲೆಗಳು ಕೊಚ್ಚಿಕೊಂಡು ಹೋದ ಘಟನೆ ಉಳ್ಳಾಲದಲ್ಲಿ ನಡೆದಿದ್ದು, ಓರ್ವ ಯುವಕ ಮೃತಪಟ್ಟರೆ, ಮತ್ತೋರ್ವ ಸಮುದ್ರ ಪಾಲಾಗಿದ್ದು , ಇನ್ನೋರ್ವನನ್ನ ಸ್ಥಳೀಯ ಈಜುಗಾರರು ರಕ್ಷಿಸಿದ್ದಾರೆ.
ಚಿಕ್ಕಮಗಳೂರು ನಿವಾಸಿ ಸಲ್ಮಾನ್(19) ಮೃತಪಟ್ಟ ಯುವಕನಾಗಿದ್ದು , ಆತನ ಸಂಬಂಧಿ ಬಶೀರ್(23) ನೀರು ಪಾಲಾಗಿದ್ದಾನೆ. ಮತ್ತೋರ್ವ ಯುವಕ ಸೈಫ್ ಆಲಿ(27) ಆಸ್ಪತ್ರೆಯಲ್ಲಿ ಚೇತರಿಸಿದ್ದಾನೆ.

ಸಾವಿನ ದವಡೆಯಿಂದ ಪಾರಾದ ಯುವಕ ಸೈಫ್ ಅಲಿ
ಚಿಕ್ಕಮಗಳೂರು ಮೂಲದ ಬಶೀರ್, ಸಲ್ಮಾನ್ ಮತ್ತು ಸೈಫ್ ಅಲಿ ಎಂಬವರು ತಮ್ಮ ಕುಟುಂಬಸ್ಥರೊಂದಿಗೆ ಉಳ್ಳಾಲ ದರ್ಗಾಕ್ಕೆ ಭೇಟಿ ನೀಡಿದ್ದರು. ಇಂದು ಮಧ್ಯಾಹ್ನದ ವೇಳೆ ಉಳ್ಳಾಲ ಕಡಲ ಕಿನಾರೆಗೆ ವಿಹಾರಕ್ಕೆ ತೆರಳಿದ್ದರು. ಈ ವೇಳೆ ಬಶೀರ್, ಸಲ್ಮಾನ್, ಸೈಫ್ ಆಲಿ ನೀರಾಟಕ್ಕಿಳಿದಿದ್ದು ಸಮುದ್ರದ ರಕ್ಕಸ ಅಲೆಗಳು ಮೂವರನ್ನೂ ಎಳೆದೊಯ್ದಿದೆ.

ತಕ್ಷಣ ಸ್ಥಳೀಯ ಈಜುಗಾರರು ಸಲ್ಮಾನ್ ಮತ್ತು ಸೈಫ್ ಅಲಿಯನ್ನ ಎಳೆದು ದಡಕ್ಕೆ ಹಾಕಿದ್ದಾರೆ. ಸಲ್ಮಾನ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದು, ಸೈಫ್ ಅಲಿ ಪ್ರಾಣಾಪಾಯದಿಂದ ಪಾರಾಗಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಬಶೀರ್ ನೀರು ಪಾಲಾಗಿದ್ದು ಉಳ್ಳಾಲ ಪೊಲೀಸರು, ಅಗ್ನಿಶಾಮಕ ದಳದವರು ಆತನಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಘಟನೆ ವೇಳೆ ನೀರುಪಾಲಾಗಿರುವ ಬಶೀರ್ ಅವರ ತುಂಬು ಗರ್ಭಿಣಿ ಪತ್ನಿ ಮತ್ತು ಇತರ ಇಬ್ಬರು ಮಹಿಳೆಯರು ಇದ್ದರೆಂದು ಸ್ಥಳೀಯರು ತಿಳಿಸಿದ್ದಾರೆ.
Two drowned at Beach in Ullal at Mangalore, two dead, one saved. The two have said to come from Chikmagaluru.They had come to visit ullal dargah
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 10:50 pm
Mangalore Correspondent
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm