ಬ್ರೇಕಿಂಗ್ ನ್ಯೂಸ್
29-12-23 09:20 pm Mangalore Correspondent ಕರಾವಳಿ
ಮಂಗಳೂರು, ಡಿ.29: ರಾಮ ಭಾರತೀಯರಿಗೆ ಎಲ್ಲರಿಗೂ ಸೇರಿದವನು. ರಾಮನ ಮಂದಿರಕ್ಕೆ ಯಾರಿಗೆ ಬರಬೇಕು ಅಂತ ಅಪೇಕ್ಷೆ ಇದೆಯೋ ಅವರೆಲ್ಲ ಬರಬಹುದು. ಆಹ್ವಾನ ಇಲ್ಲದೆಯೂ ರಾಮ ಮಂದಿರಕ್ಕೆ ಬರಬಹುದು. ಆಹ್ವಾನ ತಿರಸ್ಕಾರ ಮಾಡೋದು ಅವರವರಿಗೆ ಬಿಟ್ಟದ್ದು, ವ್ಯಕ್ತಿಗತವಾದ್ದು ಎಂದು ಎಡ ಪಕ್ಷಗಳ ಟೀಕೆಯ ಬಗ್ಗೆ ಪೇಜಾವರ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಪ್ರತಿಕ್ರಿಯೆ ನೀಡಿದ್ದಾರೆ.
ಅವರನ್ನು ಕರೆದಿಲ್ಲ ಅಂತಾದ್ರೆ ಕರೆದಿಲ್ಲ ಎನ್ನೋದೇ ದೊಡ್ಡ ಆಕ್ಷೇಪ. ಕರೆದ ಮೇಲೆ ನಾವು ತಿರಸ್ಕರಿಸುತ್ತೇವೆ ಎನ್ನೋದೇ ದೊಡ್ಡ ಹೆಗ್ಗಳಿಕೆ ಅನ್ಕೊಂಡಿದ್ದಾರೆ. ಕಾಮಾಲೆ ಕಣ್ಣಿಗೆ ಕಾಣೋದೆಲ್ಲಾ ಹಳದಿ. ರಾಜಕೀಯ ಟೀಕೆಗಳಿಗೆ ಉತ್ತರ ಕೊಡೋದಿಲ್ಲ.
ಆಹ್ವಾನ ನೀಡುವಲ್ಲಿ ತಾರತಮ್ಯ ಎಂಬ ಟೀಕೆಗೆ ಉತ್ತರಿಸಿದ ಸ್ವಾಮೀಜಿ, ಅಲ್ಲಿರುವ ಸ್ಥಳಾವಕಾಶ ಅಲ್ಪವಾದದ್ದು. ಅಬ್ಬಬ್ಬಾ ಅಂದ್ರೆ ಏಳೆಂಟು ಸಾವಿರ ಜನ ಸೇರಬಹುದು. ಲೋಕದಲ್ಲಿ ಮಹಾತ್ಮರು, ಗೌರವಾನಿತ್ವರು ತುಂಬಾ ಮಂದಿ ಇದ್ದಾರೆ. ಯಾರನ್ನು ಕರೆದರೂ ಆಕ್ಷೇಪ ಇರುವಂತಹದ್ದೇ. ಅಲ್ಲಿನ ಪರಿಸ್ಥಿತಿ, ಅವಕಾಶವನ್ನು ಗಮನಿಸಿಕೊಂಡು ಸಮಾಧಾನಪಡಬೇಕು.
ಪ್ರಾತಿನಿಧ್ಯ ಆಧರಿಸಿ ಆಹ್ವಾನವನ್ನು ನೀಡಿದ್ದೇವೆ. ಆಹ್ವಾನ ನೀಡದಿರುವ ಬಗ್ಗೆ ಮಂದಿರ, ಟ್ರಸ್ಟ್, ವ್ಯಕ್ತಿಗೆ ಸ್ವಾರ್ಥ, ಲಾಭ ಯಾವುದೂ ಇಲ್ಲ. ಇದು ಮನುಷ್ಯ ಸಹಜವಾದ ಪ್ರಕ್ರಿಯೆ. ಎಲ್ಲರನ್ನೂ ಸಮಾಧಾನಪಡಿಸಲು ಸಾಧ್ಯವಿಲ್ಲ. ಎಲ್ಲರೂ ಈ ವಿಚಾರವನ್ನು ಗಮನದಲ್ಲಿಟ್ಟು ಶಾಂತರಾಗಬೇಕು ಎಂದರು.
ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಾದ ಪ್ರಶ್ನೆಗೆ, ಒಬ್ಬರ ಕಡೆಯಿಂದ ಏನೂ ತಪ್ಪು ಆಗದಿದ್ದರೂ ತಪ್ಪು ಎಂದು ಭಾರೀ ಪ್ರತಿಭಟನೆ. ಇನ್ನೊಂದು ಕಡೆಯಿಂದ ಏನು ತಪ್ಪು ಆದರೂ ಕಣ್ಮುಚ್ಚಿ, ಬಾಯಿಮಚ್ಚಿ ಇರೋದು. ಇಂತಹ ನಡೆ ಸರಿಯಲ್ಲ. ಅವರ ಹೇಳಿಕೆ ವ್ಯಕ್ತಿಗತವಾಗಿರೋದು. ನಾನು ಆ ಬಗ್ಗೆ ಯಾವುದೇ ಅಭಿಪ್ರಾಯ ಕೊಡೋದು ಸರಿಯಲ್ಲ ಎಂದು ಹೇಳಿದರು. ಖಾಸಗಿ ಕಾರ್ಯಕ್ರಮಕ್ಕೆ ಮಂಗಳೂರಿಗೆ ಆಗಮಿಸಿದ್ದ ಪೇಜಾವರ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಮಾಧ್ಯಮದ ಪ್ರಶ್ನೆಗೆ ಉತ್ತರ ನೀಡಿದ್ದಾರೆ.
Lord Ram belongs to all Indians. Those who want to come to the Ram temple can come. You can come to ram temple even without an invitation. Pejawar Vishwaprasanna Theertha Swamiji reacted to the left's criticism that it was up to him to reject the invitation and it was personal.
13-01-26 03:04 pm
Bangalore Correspondent
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
13-01-26 04:21 pm
HK News Desk
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
13-01-26 03:37 pm
HK News Desk
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm