ಬ್ರೇಕಿಂಗ್ ನ್ಯೂಸ್
02-01-24 06:37 pm Mangalore Correspondent ಕರಾವಳಿ
ಮಂಗಳೂರು, ಜ.2: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಗೆ ಮುಹೂರ್ತ ಸನ್ನಿಹಿತವಾಗಿರುವಂತೆಯೇ 1992ರಲ್ಲಿ ರಾಜ್ಯದಿಂದ ಕರಸೇವೆಯಲ್ಲಿ ಪಾಲ್ಗೊಂಡಿದ್ದವರ ಮೇಲಿನ ದುರುದ್ದೇಶಪೂರಿತ ಪ್ರಕರಣಗಳನ್ನು ಮತ್ತೆ ಮುನ್ನಲೆಗೆ ತಂದು ಕಾಂಗ್ರೆಸ್ ಸರ್ಕಾರ ತನ್ನ ಹಿಂದೂ ವಿರೋಧಿ ನೀತಿಯನ್ನು ಹಾಗೂ ಅಲ್ಪಸಂಖ್ಯಾತರ ಓಲೈಕೆ ರಾಜಕಾರಣವನ್ನು ಮುಂದುವರಿಸಿದೆ ಎಂದು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಆಕ್ರೋಶ ವ್ಯಕ್ತಪಡಿಸಿದರು.
"ಕೋರ್ಟ್ ನಿರ್ದೇಶನದ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ, ಇದರಲ್ಲಿ ಸರ್ಕಾರದ ಯಾವುದೇ ಒತ್ತಡ ಇಲ್ಲ" ಎಂದು ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತರು ಹೇಳಿಕೆ ನೀಡಿದರೆ, ಸ್ವತಃ ಗೃಹ ಸಚಿವರೇ "ಹಳೆಯ ಪ್ರಕರಣಗಳನ್ನು ಇತ್ಯರ್ಥಗೊಳಿಸಲು ಸೂಚನೆ ನೀಡಿದ್ದೆ, ಅದರಂತೆ ಈ ಕ್ರಮ ಕೈಗೊಳ್ಳಲಾಗಿದೆ" ಎಂದು ಹೇಳಿಕೆ ನೀಡಿದ್ದಾರೆ. ಇಲ್ಲಿ ಯಾರ ಮಾತು ನಿಜ? ಏನೇ ಇದ್ದರೂ ಕಾಂಗ್ರೆಸ್ ಸರ್ಕಾರ ಈ ಮೂಲಕ ಹಿಂದೂ ವಿರೋಧಿಯಾಗಿ ನಡೆದುಕೊಳ್ಳುತ್ತಿರುವುದಂತೂ ಸ್ಪಷ್ಟ. ಅದರಲ್ಲಿ ಯಾವುದೇ ಸಂಶಯವೂ ಇಲ್ಲ. ರಾಮಭಕ್ತರ ಮೇಲೆ ಇಷ್ಟೊಂದು ಹಗೆ ಸಾಧಿಸುವ ಕಾಂಗ್ರೆಸ್ಸಿನವರು ರಾಮಭಕ್ತರ ಮತವೇ ನಮಗೆ ಬೇಡ ಎಂದು ಹೇಳಲಿ ನೋಡೋಣ ಎಂದು ಸವಾಲು ಹಾಕಿದರು.
ಇಡೀ ದೇಶದ ಜನತೆ ರಾಮ ಮಂದಿರದ ಸಂಭ್ರಮದಲ್ಲಿರುವಾಗ ನಮ್ಮ ರಾಜ್ಯದಲ್ಲಿ ಮಾತ್ರ ಕಾಂಗ್ರೆಸ್ ಸರ್ಕಾರ ರಾಮಭಕ್ತರ ಮೇಲೆ ಆಕ್ರೋಶದಲ್ಲಿದೆ. ಹಾಗಾಗಿಯೇ ಕರಸೇವಕರು ಹಾಗೂ ಹಿಂದೂ ಪರ ಕಾರ್ಯಕರ್ತರಿಗೆ ಉದ್ದೇಶಪೂರ್ವಕವಾಗಿ ಕಿರುಕುಳ ನೀಡಲು ಮುಂದಾಗಿದೆ. 31 ವರ್ಷಗಳ ಹಿಂದಿನ ಪ್ರಕರಣಗಳಿಗೆ ಮರು ಜೀವ ನೀಡಿ ಹಿಂದೂ ಕಾರ್ಯಕರ್ತರನ್ನು ಬೆದರಿಸುವ ತಂತ್ರ ಇದಾಗಿದೆ. ಈಗಾಗಲೇ ಜಿಲ್ಲೆಯಲ್ಲೂ ಹಲವು ಹಿಂದೂ ಕಾರ್ಯಕರ್ತರನ್ನು ಗಡಿಪಾರು ಮಾಡಲಾಗಿದ್ದು ಇನ್ನಷ್ಟು ಹೋರಾಟಗಾರರನ್ನು ಗಡಿಪಾರು ಮಾಡಲು ಸಿದ್ಧತೆ ನಡೆಸಿರುವುದು ಕಾಂಗ್ರೆಸ್ ಹಿಂದೂಗಳನ್ನು ಧಮನಿಸುವ ನೀತಿಗೆ ಸಾಕ್ಷಿ. ಇದಕ್ಕೆ ಹೆದರುವ ಪ್ರಶ್ನೆಯೇ ಇಲ್ಲ ಎಂದು ಶಾಸಕರು ಹೇಳಿದರು.
Mangaluru South MLA Vedavyas said that the Congress government is continuing its anti-Hindu policy and minority appeasement politics by bringing back to the fore the malicious cases against those who participated in kar seva from the state in 1992.
07-08-26 04:18 pm
HK News Staffer
ತಂದೆಯನ್ನು ವೃದ್ಧಾಶ್ರಮಕ್ಕೆ ಸೇರಿಸಿ ಸಾವಿಗೂ ಬಾರದ ಪ...
06-08-26 03:49 pm
ಕಲಬುರಗಿಯಲ್ಲಿ SIR ಪರಿಷ್ಕರಣೆ ಶಾಕ್ ; 5.36 ಲಕ್ಷ...
06-08-26 02:19 pm
'ಮಂತ್ರಿ ಸ್ಥಾನಕ್ಕೆ ಕೋಟಿ ಕೋಟಿ ಡೀಲ್?' ಮಾಜಿ ಸಚಿವರ...
05-08-26 10:56 pm
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅಸಮರ್ಥ, ಛಲವಾದಿ...
04-08-26 09:12 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
07-08-26 09:26 pm
HK News Staffer
BC Road Accident, Mangalore: ಬಿಸಿ ರೋಡ್ ಬಳಿ ಟಿ...
06-08-26 11:03 pm
ಅಯೋಧ್ಯೆ ಕಾಣಿಕೆ ಹಣ ಕಳವು ತೀವ್ರ ಆಘಾತಕಾರಿ, ಯಾವುದೇ...
06-08-26 10:22 pm
ಹಿಂದೂ ದೇವಸ್ಥಾನಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ...
06-08-26 09:33 pm
ಹೆದ್ದಾರಿ ಬದಿ ವ್ಯಾಪಾರಿಗಳ ವಿರುದ್ಧ ಕಾರ್ಯಾಚರಣೆಗಿಳ...
06-08-26 08:09 pm
07-08-26 09:23 pm
HK News Staffer
ಉಡುಪಿಯ ಯುವ ಮಾಡೆಲ್ ಮನೆಯಲ್ಲೇ ಆತ್ಮಹತ್ಯೆ ; ಖಾಸಗಿ...
07-08-26 08:44 pm
Udupi Murder, David Dsouza: ಕುಂದಾಪುರ ಶೂಟೌಟ್ ಮ...
07-08-26 06:00 pm
ಬಟ್ಟೆ ವಿಚಾರಕ್ಕೆ ಸಹೋದರಿಯರ ಸಣ್ಣ ಜಗಳ; ತಾಯಿ ಬೈದಿದ...
07-08-26 04:22 pm
ಒಂದೇ ಮರಕ್ಕೆ ನೇಣು ಬಿಗಿದುಕೊಂಡ ಇಬ್ಬರು ಯುವತಿಯರ ಪ್...
07-08-26 12:35 pm