ಬ್ರೇಕಿಂಗ್ ನ್ಯೂಸ್
03-01-24 09:48 pm Mangalore Correspondent ಕರಾವಳಿ
ಮಂಗಳೂರು, ಜ.3: ಶ್ರೀರಾಮ ಜನ್ಮಭೂಮಿ ಆಂದೋಲನ ಸಂದರ್ಭದಲ್ಲಿ ದಾಖಲಾದ ಸುಳ್ಳು ಪ್ರಕರಣಗಳ ನೆಪದಲ್ಲಿ ರಾಮನ ಭಕ್ತರನ್ನು ಬಂಧಿಸಿ ಹಿಂಸಿಸಲು ಕಾಂಗ್ರೆಸ್ ಸರ್ಕಾರ ಮುಂದಾಗಿದೆ. 70-80 ವಯಸ್ಸಿನವರನ್ನು ಈಗ ಬಂಧಿಸಿ ಜೈಲಿಗಟ್ಟುವ ಅಗತ್ಯವೇನು ಎಂದು ವಿಶ್ವ ಹಿಂದು ಪರಿಷತ್ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ವೆಲ್ ಪ್ರಶ್ನಿಸಿದ್ದಾರೆ.
ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವು ಹಳೆ ಕೇಸುಗಳಿಗೆ ಜೀವ ಕೊಡುತ್ತಿದೆ. 30-35 ವರ್ಷಗಳಷ್ಟು ಹಳೆಯ ಪ್ರಕರಣಗಳು, ಅದರಲ್ಲಿ ಅನೇಕ ಜನರು ಸಾವನ್ನಪ್ಪಿದ್ದಾರೆ. ಇದ್ದವರು 70 ರಿಂದ 80 ವರ್ಷದೊಳಗಿದ್ದಾರೆ. ಅಂಥವರನ್ನು ವಾರೆಂಟ್ ಇದೆಯೆಂದು ಹೇಳಿ ಪ್ರಕರಣವನ್ನು ಮರುತನಿಖೆ ನಡೆಸುತ್ತಿದ್ದು ಆಮೂಲಕ ರಾಮಭಕ್ತರನ್ನು ಹಿಂಸಿಸುತ್ತಿದ್ದಾರೆ.

ಶ್ರೀರಾಮ ಜನ್ಮಭೂಮಿ ಆಂದೋಲನದ ಸಂದರ್ಭದಲ್ಲಿ ದಾಖಲಾಗಿದ್ದ ಪ್ರಕರಣಗಳಲ್ಲಿ ಹೆಚ್ಚಿನವು ಬೋಗಸ್ ಆಗಿದ್ದರಿಂದ ಹಿಂದಿನ ಕೆಲವು ಸರ್ಕಾರಗಳು ಅವುಗಳನ್ನು ರದ್ದುಗೊಳಿಸಿದ್ದವು. ಇಂದು, ಆ ಕೇಸನ್ನು ಮರುತನಿಖೆ ನಡೆಸಲು ಆದೇಶಿಸಿ ಬದುಕುಳಿದ ಆ ಕಾರ್ಯಕರ್ತರನ್ನು ಮತ್ತೆ ಬಂಧಿಸುತ್ತಿರುವುದು ಖಂಡನೀಯ. ಈ ಎಲ್ಲ ಕಾರ್ಯಕರ್ತರನ್ನು ಬಂಧಿಸುವ ಮೂಲಕ ಕಾಂಗ್ರೆಸ್ ಸರ್ಕಾರ ರಾಮ ವಿರೋಧಿ ಧೋರಣೆಯನ್ನು ತೋರಿಸುತ್ತಿದೆ.
ಶ್ರೀರಾಮ ಜನ್ಮಭೂಮಿ ಆಂದೋಲನದ ಸಂದರ್ಭದಲ್ಲಿ ದಾಖಲಾದ ಸುಳ್ಳು ಪ್ರಕರಣಗಳನ್ನು ಕರ್ನಾಟಕದ ಕಾಂಗ್ರೆಸ್ ಸರ್ಕಾರ ತಕ್ಷಣ ಕೈಬಿಡಬೇಕು ಮತ್ತು ಯಾವುದೇ ಕಾರಣಕ್ಕೂ ರಾಮಭಕ್ತರನ್ನು ಬಂಧಿಸಬಾರದು ಎಂದು ಆಗ್ರಹಿಸುತ್ತೇನೆ. ಮರು ತನಿಖೆ ಹೆಸರಿನಲ್ಲಿ ರಾಮ ಭಕ್ತರನ್ನು ಬಂಧಿಸಿದರೆ ಇದಕ್ಕೆ ಕರ್ನಾಟಕ ಜನತೆ ತಕ್ಕ ಉತ್ತರ ನೀಡಲಿದ್ದಾರೆ ಎಂದು ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪುವೆಲ್ ಪತ್ರಿಕಾ ಪ್ರಕಟಣೆಯಲ್ಲಿ ಎಚ್ಚರಿಸಿದ್ದಾರೆ.
Srikanath Poojari arrest, Vishwa Hindu parishad in Mangalore say Ram Bhakts have been targeted.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm