ಬ್ರೇಕಿಂಗ್ ನ್ಯೂಸ್
03-01-24 09:48 pm Mangalore Correspondent ಕರಾವಳಿ
ಮಂಗಳೂರು, ಜ.3: ಶ್ರೀರಾಮ ಜನ್ಮಭೂಮಿ ಆಂದೋಲನ ಸಂದರ್ಭದಲ್ಲಿ ದಾಖಲಾದ ಸುಳ್ಳು ಪ್ರಕರಣಗಳ ನೆಪದಲ್ಲಿ ರಾಮನ ಭಕ್ತರನ್ನು ಬಂಧಿಸಿ ಹಿಂಸಿಸಲು ಕಾಂಗ್ರೆಸ್ ಸರ್ಕಾರ ಮುಂದಾಗಿದೆ. 70-80 ವಯಸ್ಸಿನವರನ್ನು ಈಗ ಬಂಧಿಸಿ ಜೈಲಿಗಟ್ಟುವ ಅಗತ್ಯವೇನು ಎಂದು ವಿಶ್ವ ಹಿಂದು ಪರಿಷತ್ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ವೆಲ್ ಪ್ರಶ್ನಿಸಿದ್ದಾರೆ.
ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವು ಹಳೆ ಕೇಸುಗಳಿಗೆ ಜೀವ ಕೊಡುತ್ತಿದೆ. 30-35 ವರ್ಷಗಳಷ್ಟು ಹಳೆಯ ಪ್ರಕರಣಗಳು, ಅದರಲ್ಲಿ ಅನೇಕ ಜನರು ಸಾವನ್ನಪ್ಪಿದ್ದಾರೆ. ಇದ್ದವರು 70 ರಿಂದ 80 ವರ್ಷದೊಳಗಿದ್ದಾರೆ. ಅಂಥವರನ್ನು ವಾರೆಂಟ್ ಇದೆಯೆಂದು ಹೇಳಿ ಪ್ರಕರಣವನ್ನು ಮರುತನಿಖೆ ನಡೆಸುತ್ತಿದ್ದು ಆಮೂಲಕ ರಾಮಭಕ್ತರನ್ನು ಹಿಂಸಿಸುತ್ತಿದ್ದಾರೆ.

ಶ್ರೀರಾಮ ಜನ್ಮಭೂಮಿ ಆಂದೋಲನದ ಸಂದರ್ಭದಲ್ಲಿ ದಾಖಲಾಗಿದ್ದ ಪ್ರಕರಣಗಳಲ್ಲಿ ಹೆಚ್ಚಿನವು ಬೋಗಸ್ ಆಗಿದ್ದರಿಂದ ಹಿಂದಿನ ಕೆಲವು ಸರ್ಕಾರಗಳು ಅವುಗಳನ್ನು ರದ್ದುಗೊಳಿಸಿದ್ದವು. ಇಂದು, ಆ ಕೇಸನ್ನು ಮರುತನಿಖೆ ನಡೆಸಲು ಆದೇಶಿಸಿ ಬದುಕುಳಿದ ಆ ಕಾರ್ಯಕರ್ತರನ್ನು ಮತ್ತೆ ಬಂಧಿಸುತ್ತಿರುವುದು ಖಂಡನೀಯ. ಈ ಎಲ್ಲ ಕಾರ್ಯಕರ್ತರನ್ನು ಬಂಧಿಸುವ ಮೂಲಕ ಕಾಂಗ್ರೆಸ್ ಸರ್ಕಾರ ರಾಮ ವಿರೋಧಿ ಧೋರಣೆಯನ್ನು ತೋರಿಸುತ್ತಿದೆ.
ಶ್ರೀರಾಮ ಜನ್ಮಭೂಮಿ ಆಂದೋಲನದ ಸಂದರ್ಭದಲ್ಲಿ ದಾಖಲಾದ ಸುಳ್ಳು ಪ್ರಕರಣಗಳನ್ನು ಕರ್ನಾಟಕದ ಕಾಂಗ್ರೆಸ್ ಸರ್ಕಾರ ತಕ್ಷಣ ಕೈಬಿಡಬೇಕು ಮತ್ತು ಯಾವುದೇ ಕಾರಣಕ್ಕೂ ರಾಮಭಕ್ತರನ್ನು ಬಂಧಿಸಬಾರದು ಎಂದು ಆಗ್ರಹಿಸುತ್ತೇನೆ. ಮರು ತನಿಖೆ ಹೆಸರಿನಲ್ಲಿ ರಾಮ ಭಕ್ತರನ್ನು ಬಂಧಿಸಿದರೆ ಇದಕ್ಕೆ ಕರ್ನಾಟಕ ಜನತೆ ತಕ್ಕ ಉತ್ತರ ನೀಡಲಿದ್ದಾರೆ ಎಂದು ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪುವೆಲ್ ಪತ್ರಿಕಾ ಪ್ರಕಟಣೆಯಲ್ಲಿ ಎಚ್ಚರಿಸಿದ್ದಾರೆ.
Srikanath Poojari arrest, Vishwa Hindu parishad in Mangalore say Ram Bhakts have been targeted.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am