ಬ್ರೇಕಿಂಗ್ ನ್ಯೂಸ್
06-01-24 03:40 pm Mangalore Correspondent ಕರಾವಳಿ
ಮಂಗಳೂರು, ಜ.6: ಕಾಂತಾರ ಚಿತ್ರದ ಖ್ಯಾತಿಯ ನಟ, ನಿರ್ದೇಶಕ ರಿಷಬ್ ಶೆಟ್ಟಿ ಗುರುಪುರ ವಜ್ರದೇಹಿ ಮಠದ ವಾರ್ಷಿಕ ಜಾತ್ರೆಯ ಸಂದರ್ಭದಲ್ಲಿ ಆಗಮಿಸಿದ್ದು, ಮೈಸಂದಾಯ ಮತ್ತು ಅಣ್ಣಪ್ಪ ಪಂಜುರ್ಲಿ ದೈವದ ಕೋಲದಲ್ಲಿ ಕಾಣಿಸಿಕೊಂಡಿದ್ದಾರೆ.
ನಿನ್ನೆ ರಾತ್ರಿ 12 ವೇಳೆಗೆ ಮೈಸಂದಾಯ ದೈವದ ಕೋಲ ನಡೆದಿದ್ದು, ಆ ಸಂದರ್ಭದಲ್ಲಿ ಗುರುಪುರ ಮಠದ ವಜ್ರದೇಹಿ ಸ್ವಾಮೀಜಿ ಜೊತೆಗೆ ಕಾಂತಾರ ಎರಡನೇ ಭಾಗದ ಚಿತ್ರೀಕರಣದ ಸಲುವಾಗಿ ದೈವದ ಅನುವು ಕೇಳಿದ್ದಾರೆ. ದೈವವು ರಿಷಬ್ ಶೆಟ್ಟಿ ಕೇಳಿಕೊಂಡ ಮಾತಿಗೆ ಅನುವು ನೀಡಿದಂತೆ ಬೆನ್ನು ತಟ್ಟಿ ಆಶೀರ್ವದಿಸಿದ ವಿಡಿಯೋ ವೈರಲ್ ಆಗಿದೆ. ಹೀಗಾಗಿ ದೈವ ಕಾಂತಾರದ ಚಿತ್ರಕ್ಕಾಗಿ ಅಭಯ ನೀಡಿದೆಯೆಂದು ಹೇಳಲಾಗುತ್ತಿದೆ.
ಆನಂತರ, ನಸುಕಿನ ವೇಳೆಗೆ ಅಣ್ಣಪ್ಪ ಪಂಜುರ್ಲಿ ದೈವದ ಕೋಲದ ಸಂದರ್ಭದಲ್ಲಿಯೂ ರಿಷಬ್ ಶೆಟ್ಟಿ ಬಂದು ದೈವದಲ್ಲಿ ಕಾಂತಾರದ ಚಿತ್ರಕ್ಕಾಗಿ ಬೇಡಿಕೊಂಡಿದ್ದಾರೆ. ಕಾಂತಾರ ಚಿತ್ರದ ಎರಡನೇ ಭಾಗದ ಚಿತ್ರೀಕರಣದಲ್ಲಿ ಬಿಝಿಯಾಗಿರುವ ರಿಷಬ್ ಶೆಟ್ಟಿ ಅದರ ನಡುವಲ್ಲೇ ಕೋಲಕ್ಕೆ ಬಂದು ಬೇಡಿಕೊಂಡಿರುವುದು ಚರ್ಚೆಗೆ ಗ್ರಾಸವಾಗಿದೆ. ಇತ್ತೀಚೆಗೆ ರಿಷಬ್ ಶೆಟ್ಟಿಯವರ ಕಾಂತಾರ ಚಿತ್ರದ ಕಾರಣದಿಂದಲೇ ದೈವಾರಾಧನಗೆ ಅಪಚಾರ ಆಗಿದೆಯೆಂದು ಜಾಲತಾಣದಲ್ಲಿ ಟೀಕೆ ಬಂದಿತ್ತು. ಬೆಂಗಳೂರು, ಮಂಡ್ಯದಲ್ಲಿ ದೈವದ ಆವೇಶ, ಕೊರಗಜ್ಜನ ಕೋಲದಲ್ಲಿ ವಿಕೃತ ನಡವಳಿಕೆಯ ವಿಡಿಯೋ ವೈರಲ್ ಆಗಿದ್ದಕ್ಕೆ ದೈವಾರಾಧಕರು ಭಾರೀ ಟೀಕೆಯನ್ನೂ ಮಾಡಿದ್ದರು. ಇದೆಲ್ಲ ಕಾಂತಾರ ಚಿತ್ರದ ಬಳಿಕವೇ ಆಗಿರುವುದು ಎನ್ನುವ ಟೀಕೆ ವ್ಯಕ್ತವಾಗಿತ್ತು.
ಎರಡನೇ ಭಾಗದಲ್ಲಿ ದೈವದ ಕುರಿತಾಗಿ ಸಿನಿಮಾ ಮಾಡಬಾರದೆಂದು ರಿಷಬ್ ಶೆಟ್ಟಿ ಬಗ್ಗೆ ಟೀಕೆಯನ್ನೂ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಸ್ವತಃ ರಿಷಬ್ ಶೆಟ್ಟಿ ಪಂಜುರ್ಲಿ ದೈವದ ಕೋಲದ ಸಂದರ್ಭದಲ್ಲಿ ಬಂದು ಸಿನಿಮಾ ಚಿತ್ರೀಕರಣಕ್ಕಾಗಿ ಬೇಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಯಾವ ರೀತಿಯ ಬೇಡಿಕೆಯನ್ನು ದೈವದ ಮುಂದಿರಿಸಿದ್ದರು, ದೈವ ಯಾವ ರೀತಿಯ ಆಶೀರ್ವಾದ ನೀಡಿದೆ ಎನ್ನುವ ಬಗ್ಗೆ ತಿಳಿಯಲು ಗುರುಪುರ ಸ್ವಾಮೀಜಿ ಸಂಪರ್ಕಕ್ಕೆ ಸಿಕ್ಕಿಲ್ಲ.
Kantara actor Rishab Shetty visits Gurupura Math Rajashekharananda swamiji in Mangalore.
20-02-25 10:06 pm
Bangalore Correspondent
Kalaburagi farmers protest, crocodile: ಕಲಬುರಗ...
20-02-25 08:59 pm
Chikkamagaluru Car Murder, Body Found; ಚಿಕ್ಕಮ...
20-02-25 06:59 pm
Chikkaballapur, Muzrai scam, Revenue Inspecto...
20-02-25 04:45 pm
ಉದಯಗಿರಿ ಗಲಭೆ ಪ್ರಕರಣ ; ಪ್ರಚೋದನಕಾರಿ ಭಾಷಣ ಮಾಡಿದ್...
20-02-25 02:47 pm
19-02-25 11:00 pm
HK News Desk
ಬಾಲಕನಿದ್ದಾಗ ನುಂಗಿದ್ದ ಪೆನ್ ಕ್ಯಾಪ್ ; 21 ವರ್ಷ ಕಳ...
19-02-25 06:41 pm
Maha Kumbh river, NGT Board: ಕುಂಭಮೇಳ ನದಿ ನೀರು...
19-02-25 01:54 pm
ಇಬ್ಬರು ಹೆಂಡಿರ ಮುದ್ದಿನ ಗಂಡ ; ವಾರದ 3 ದಿನ ಅಲ್ಲಿ....
18-02-25 10:49 pm
Hindu idols Bishop House, Pala diocese, Kera...
18-02-25 10:45 pm
21-02-25 12:40 am
Giridhar Shetty, Mangaluru
Protest Mangalore, 400 KV, Catholic sabha: ಉಡ...
20-02-25 06:48 pm
Kmc Mangalore, hospital: 2 ವರ್ಷದ ಮಗುವಿನ ಗಂಟಲಲ...
19-02-25 01:56 pm
Satish Jarkiholi, Mangalore: ಕೆಪಿಸಿಸಿ ಅಧ್ಯಕ್ಷ...
18-02-25 12:36 pm
Dinesh Gundurao, Munner katipalla, Sand Mafia...
17-02-25 10:56 pm
20-02-25 01:22 pm
Mangalore Correspondent
Mangalore, Puttur, Cheating, paras traders: ಲ...
19-02-25 09:26 pm
Mangalore CCB police, 119 kg ganja, Crime: ಮೀ...
18-02-25 07:19 pm
Madikeri police, Fake Scheme, Mangalore crime...
18-02-25 06:04 pm
Mangalore Crime, Surathkal, Car: ಮದುವೆ ಸಮಾರಂಭ...
18-02-25 12:11 pm