ಬ್ರೇಕಿಂಗ್ ನ್ಯೂಸ್
06-01-24 03:40 pm Mangalore Correspondent ಕರಾವಳಿ
ಮಂಗಳೂರು, ಜ.6: ಕಾಂತಾರ ಚಿತ್ರದ ಖ್ಯಾತಿಯ ನಟ, ನಿರ್ದೇಶಕ ರಿಷಬ್ ಶೆಟ್ಟಿ ಗುರುಪುರ ವಜ್ರದೇಹಿ ಮಠದ ವಾರ್ಷಿಕ ಜಾತ್ರೆಯ ಸಂದರ್ಭದಲ್ಲಿ ಆಗಮಿಸಿದ್ದು, ಮೈಸಂದಾಯ ಮತ್ತು ಅಣ್ಣಪ್ಪ ಪಂಜುರ್ಲಿ ದೈವದ ಕೋಲದಲ್ಲಿ ಕಾಣಿಸಿಕೊಂಡಿದ್ದಾರೆ.
ನಿನ್ನೆ ರಾತ್ರಿ 12 ವೇಳೆಗೆ ಮೈಸಂದಾಯ ದೈವದ ಕೋಲ ನಡೆದಿದ್ದು, ಆ ಸಂದರ್ಭದಲ್ಲಿ ಗುರುಪುರ ಮಠದ ವಜ್ರದೇಹಿ ಸ್ವಾಮೀಜಿ ಜೊತೆಗೆ ಕಾಂತಾರ ಎರಡನೇ ಭಾಗದ ಚಿತ್ರೀಕರಣದ ಸಲುವಾಗಿ ದೈವದ ಅನುವು ಕೇಳಿದ್ದಾರೆ. ದೈವವು ರಿಷಬ್ ಶೆಟ್ಟಿ ಕೇಳಿಕೊಂಡ ಮಾತಿಗೆ ಅನುವು ನೀಡಿದಂತೆ ಬೆನ್ನು ತಟ್ಟಿ ಆಶೀರ್ವದಿಸಿದ ವಿಡಿಯೋ ವೈರಲ್ ಆಗಿದೆ. ಹೀಗಾಗಿ ದೈವ ಕಾಂತಾರದ ಚಿತ್ರಕ್ಕಾಗಿ ಅಭಯ ನೀಡಿದೆಯೆಂದು ಹೇಳಲಾಗುತ್ತಿದೆ.


ಆನಂತರ, ನಸುಕಿನ ವೇಳೆಗೆ ಅಣ್ಣಪ್ಪ ಪಂಜುರ್ಲಿ ದೈವದ ಕೋಲದ ಸಂದರ್ಭದಲ್ಲಿಯೂ ರಿಷಬ್ ಶೆಟ್ಟಿ ಬಂದು ದೈವದಲ್ಲಿ ಕಾಂತಾರದ ಚಿತ್ರಕ್ಕಾಗಿ ಬೇಡಿಕೊಂಡಿದ್ದಾರೆ. ಕಾಂತಾರ ಚಿತ್ರದ ಎರಡನೇ ಭಾಗದ ಚಿತ್ರೀಕರಣದಲ್ಲಿ ಬಿಝಿಯಾಗಿರುವ ರಿಷಬ್ ಶೆಟ್ಟಿ ಅದರ ನಡುವಲ್ಲೇ ಕೋಲಕ್ಕೆ ಬಂದು ಬೇಡಿಕೊಂಡಿರುವುದು ಚರ್ಚೆಗೆ ಗ್ರಾಸವಾಗಿದೆ. ಇತ್ತೀಚೆಗೆ ರಿಷಬ್ ಶೆಟ್ಟಿಯವರ ಕಾಂತಾರ ಚಿತ್ರದ ಕಾರಣದಿಂದಲೇ ದೈವಾರಾಧನಗೆ ಅಪಚಾರ ಆಗಿದೆಯೆಂದು ಜಾಲತಾಣದಲ್ಲಿ ಟೀಕೆ ಬಂದಿತ್ತು. ಬೆಂಗಳೂರು, ಮಂಡ್ಯದಲ್ಲಿ ದೈವದ ಆವೇಶ, ಕೊರಗಜ್ಜನ ಕೋಲದಲ್ಲಿ ವಿಕೃತ ನಡವಳಿಕೆಯ ವಿಡಿಯೋ ವೈರಲ್ ಆಗಿದ್ದಕ್ಕೆ ದೈವಾರಾಧಕರು ಭಾರೀ ಟೀಕೆಯನ್ನೂ ಮಾಡಿದ್ದರು. ಇದೆಲ್ಲ ಕಾಂತಾರ ಚಿತ್ರದ ಬಳಿಕವೇ ಆಗಿರುವುದು ಎನ್ನುವ ಟೀಕೆ ವ್ಯಕ್ತವಾಗಿತ್ತು.
ಎರಡನೇ ಭಾಗದಲ್ಲಿ ದೈವದ ಕುರಿತಾಗಿ ಸಿನಿಮಾ ಮಾಡಬಾರದೆಂದು ರಿಷಬ್ ಶೆಟ್ಟಿ ಬಗ್ಗೆ ಟೀಕೆಯನ್ನೂ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಸ್ವತಃ ರಿಷಬ್ ಶೆಟ್ಟಿ ಪಂಜುರ್ಲಿ ದೈವದ ಕೋಲದ ಸಂದರ್ಭದಲ್ಲಿ ಬಂದು ಸಿನಿಮಾ ಚಿತ್ರೀಕರಣಕ್ಕಾಗಿ ಬೇಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಯಾವ ರೀತಿಯ ಬೇಡಿಕೆಯನ್ನು ದೈವದ ಮುಂದಿರಿಸಿದ್ದರು, ದೈವ ಯಾವ ರೀತಿಯ ಆಶೀರ್ವಾದ ನೀಡಿದೆ ಎನ್ನುವ ಬಗ್ಗೆ ತಿಳಿಯಲು ಗುರುಪುರ ಸ್ವಾಮೀಜಿ ಸಂಪರ್ಕಕ್ಕೆ ಸಿಕ್ಕಿಲ್ಲ.
Kantara actor Rishab Shetty visits Gurupura Math Rajashekharananda swamiji in Mangalore.
13-02-26 10:41 am
HK News Desk
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
12-02-26 10:51 pm
HK News Desk
ನಕಲಿ ಷೇರು ಹೂಡಿಕೆ ಆ್ಯಪ್ ಹೆಸರಲ್ಲಿ ದುಪ್ಪಟ್ಟು ಲಾಭ...
12-02-26 09:31 pm
ಅಮೆರಿಕದಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ...
12-02-26 09:19 pm
260 ಜನರನ್ನು ಬಲಿ ಪಡೆದ ಅಹಮದಾಬಾದ್ ವಿಮಾನ ಪತನ ; ಇಂ...
12-02-26 01:40 pm
ಡಿಕೆ - ಸಿದ್ದು ಪವರ್ ಫೈಟ್ ; ‘ರಾಜಕಾರಣ ಮಾಡೋಕೆ ಬಂದ...
12-02-26 01:09 pm
13-02-26 01:28 pm
Mangalore Correspondent
ಶಾಲಾ ಮಕ್ಕಳನ್ನು ಟಿಪ್ಪರ್ ನಲ್ಲಿ ತುಂಬಿಸಿ ಅಧ್ಯಯನ ಪ...
13-02-26 01:06 am
ಮೋದಿ ಹೆಸರಲ್ಲಿ ಹತ್ತು ನಮೋ ಕುಟೀರ ನಿರ್ಮಾಣ ಯೋಜನೆ ;...
12-02-26 10:36 pm
ಲವ್ ಜಿಹಾದ್ ಆರೋಪ ; ಸುರತ್ಕಲ್ ಲೇಡಿಸ್ ಪಿಜಿಯಲ್ಲಿ ಹ...
12-02-26 05:55 pm
ಕೈಗಾರಿಕೆಗಳ ಮಾಲಿನ್ಯ ತಡೆಯಲು ಅಧಿಕಾರಿಗಳು ವಿಫಲ ; ವ...
12-02-26 04:05 pm
13-02-26 03:35 pm
Mangalore Correspondent
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am
ರೌಡಿ ಶೀಟರ್ ಬಿಕ್ಲು ಶಿವ ಕೊಲೆ ; ಕೊನೆಗೂ ಭೈರತಿ ಬ...
13-02-26 12:54 am
ವಿಷದ ಲಡ್ಡು ತಿನ್ನಿಸಿ 6 ಜನರ ಹತ್ಯೆ ; ದೆಹಲಿಯಲ್ಲಿ...
12-02-26 02:34 pm
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm