ಬ್ರೇಕಿಂಗ್ ನ್ಯೂಸ್
06-01-24 03:40 pm Mangalore Correspondent ಕರಾವಳಿ
ಮಂಗಳೂರು, ಜ.6: ಕಾಂತಾರ ಚಿತ್ರದ ಖ್ಯಾತಿಯ ನಟ, ನಿರ್ದೇಶಕ ರಿಷಬ್ ಶೆಟ್ಟಿ ಗುರುಪುರ ವಜ್ರದೇಹಿ ಮಠದ ವಾರ್ಷಿಕ ಜಾತ್ರೆಯ ಸಂದರ್ಭದಲ್ಲಿ ಆಗಮಿಸಿದ್ದು, ಮೈಸಂದಾಯ ಮತ್ತು ಅಣ್ಣಪ್ಪ ಪಂಜುರ್ಲಿ ದೈವದ ಕೋಲದಲ್ಲಿ ಕಾಣಿಸಿಕೊಂಡಿದ್ದಾರೆ.
ನಿನ್ನೆ ರಾತ್ರಿ 12 ವೇಳೆಗೆ ಮೈಸಂದಾಯ ದೈವದ ಕೋಲ ನಡೆದಿದ್ದು, ಆ ಸಂದರ್ಭದಲ್ಲಿ ಗುರುಪುರ ಮಠದ ವಜ್ರದೇಹಿ ಸ್ವಾಮೀಜಿ ಜೊತೆಗೆ ಕಾಂತಾರ ಎರಡನೇ ಭಾಗದ ಚಿತ್ರೀಕರಣದ ಸಲುವಾಗಿ ದೈವದ ಅನುವು ಕೇಳಿದ್ದಾರೆ. ದೈವವು ರಿಷಬ್ ಶೆಟ್ಟಿ ಕೇಳಿಕೊಂಡ ಮಾತಿಗೆ ಅನುವು ನೀಡಿದಂತೆ ಬೆನ್ನು ತಟ್ಟಿ ಆಶೀರ್ವದಿಸಿದ ವಿಡಿಯೋ ವೈರಲ್ ಆಗಿದೆ. ಹೀಗಾಗಿ ದೈವ ಕಾಂತಾರದ ಚಿತ್ರಕ್ಕಾಗಿ ಅಭಯ ನೀಡಿದೆಯೆಂದು ಹೇಳಲಾಗುತ್ತಿದೆ.


ಆನಂತರ, ನಸುಕಿನ ವೇಳೆಗೆ ಅಣ್ಣಪ್ಪ ಪಂಜುರ್ಲಿ ದೈವದ ಕೋಲದ ಸಂದರ್ಭದಲ್ಲಿಯೂ ರಿಷಬ್ ಶೆಟ್ಟಿ ಬಂದು ದೈವದಲ್ಲಿ ಕಾಂತಾರದ ಚಿತ್ರಕ್ಕಾಗಿ ಬೇಡಿಕೊಂಡಿದ್ದಾರೆ. ಕಾಂತಾರ ಚಿತ್ರದ ಎರಡನೇ ಭಾಗದ ಚಿತ್ರೀಕರಣದಲ್ಲಿ ಬಿಝಿಯಾಗಿರುವ ರಿಷಬ್ ಶೆಟ್ಟಿ ಅದರ ನಡುವಲ್ಲೇ ಕೋಲಕ್ಕೆ ಬಂದು ಬೇಡಿಕೊಂಡಿರುವುದು ಚರ್ಚೆಗೆ ಗ್ರಾಸವಾಗಿದೆ. ಇತ್ತೀಚೆಗೆ ರಿಷಬ್ ಶೆಟ್ಟಿಯವರ ಕಾಂತಾರ ಚಿತ್ರದ ಕಾರಣದಿಂದಲೇ ದೈವಾರಾಧನಗೆ ಅಪಚಾರ ಆಗಿದೆಯೆಂದು ಜಾಲತಾಣದಲ್ಲಿ ಟೀಕೆ ಬಂದಿತ್ತು. ಬೆಂಗಳೂರು, ಮಂಡ್ಯದಲ್ಲಿ ದೈವದ ಆವೇಶ, ಕೊರಗಜ್ಜನ ಕೋಲದಲ್ಲಿ ವಿಕೃತ ನಡವಳಿಕೆಯ ವಿಡಿಯೋ ವೈರಲ್ ಆಗಿದ್ದಕ್ಕೆ ದೈವಾರಾಧಕರು ಭಾರೀ ಟೀಕೆಯನ್ನೂ ಮಾಡಿದ್ದರು. ಇದೆಲ್ಲ ಕಾಂತಾರ ಚಿತ್ರದ ಬಳಿಕವೇ ಆಗಿರುವುದು ಎನ್ನುವ ಟೀಕೆ ವ್ಯಕ್ತವಾಗಿತ್ತು.
ಎರಡನೇ ಭಾಗದಲ್ಲಿ ದೈವದ ಕುರಿತಾಗಿ ಸಿನಿಮಾ ಮಾಡಬಾರದೆಂದು ರಿಷಬ್ ಶೆಟ್ಟಿ ಬಗ್ಗೆ ಟೀಕೆಯನ್ನೂ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಸ್ವತಃ ರಿಷಬ್ ಶೆಟ್ಟಿ ಪಂಜುರ್ಲಿ ದೈವದ ಕೋಲದ ಸಂದರ್ಭದಲ್ಲಿ ಬಂದು ಸಿನಿಮಾ ಚಿತ್ರೀಕರಣಕ್ಕಾಗಿ ಬೇಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಯಾವ ರೀತಿಯ ಬೇಡಿಕೆಯನ್ನು ದೈವದ ಮುಂದಿರಿಸಿದ್ದರು, ದೈವ ಯಾವ ರೀತಿಯ ಆಶೀರ್ವಾದ ನೀಡಿದೆ ಎನ್ನುವ ಬಗ್ಗೆ ತಿಳಿಯಲು ಗುರುಪುರ ಸ್ವಾಮೀಜಿ ಸಂಪರ್ಕಕ್ಕೆ ಸಿಕ್ಕಿಲ್ಲ.
Kantara actor Rishab Shetty visits Gurupura Math Rajashekharananda swamiji in Mangalore.
06-04-26 08:51 pm
HK News Staffer
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
06-04-26 06:16 pm
HK News Staffer
ಗಲ್ಫ್ ಯುದ್ಧ ಎಫೆಕ್ಟ್ ; ಇಸ್ರೇಲ್ ಗೆ ಏರ್ ಇಂಡಿಯಾ ವ...
06-04-26 06:09 pm
ಯುಎಇಯಿಂದ ಪಾಕಿಸ್ತಾನಕ್ಕೆ ಬಿಗ್ ಶಾಕ್ ; 2 ಬಿಲಿಯನ್...
05-04-26 12:37 pm
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
06-04-26 07:58 pm
HK News Staffer
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
07-04-26 10:08 am
HK News Staffer
ತಮಿಳಿನ ಖ್ಯಾತ ಕಿರುತೆರೆ ನಟಿ ಸುಭಾಷಿಣಿ ಬಾಲಸುಬ್ರಹ್...
06-04-26 05:40 pm
ಆತ್ಮಹತ್ಯೆ ಮಾಡಿಕೊಂಡ ಪತ್ನಿಯನ್ನು ನೋಡಲು ಆಸ್ಪತ್ರೆಗ...
06-04-26 02:34 pm
ಹಂದಿ ಬೇಟೆಗಾಗಿ ತೋಟದಲ್ಲಿ ಇಟ್ಟಿದ್ದ ನಾಡಬಾಂಬ್ ಸ್ಫೋ...
05-04-26 11:03 am
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm