ಬ್ರೇಕಿಂಗ್ ನ್ಯೂಸ್
09-01-24 12:16 pm Mangalore Correspondent ಕರಾವಳಿ
ಬೆಳ್ತಂಗಡಿ, ಜ.9: ದೇಶದಲ್ಲಿ ಮುಸ್ಲಿಮರ ಸಂಖ್ಯೆ 80 ಕೋಟಿ ಆಗಿ ಹಿಂದುಗಳ ಸಂಖ್ಯೆ ಕಡಿಮೆಯಾದ್ರೆ ದೇಶದ ಸ್ಥಿತಿ ಹೇಗಿರುತ್ತೆ ಯೋಚಿಸಬೇಕಾಗಿದೆ ಎಂದು ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ಮಾಡಿರುವ ಭಾಷಣ ವೈರಲ್ ಆಗಿದೆ.
ಬೆಳ್ತಂಗಡಿ ತಾಲೂಕಿನ ಪೆರಾಡಿ ಎಂಬಲ್ಲಿ ನಡೆದ ಅಯ್ಯಪ್ಪ ದೀಪೋತ್ಸವದಲ್ಲಿ ತುಳುವಿನಲ್ಲಿ ಭಾಷಣ ಮಾಡಿದ ಶಾಸಕ ಪೂಂಜಾ, ಹಿಂದು - ಮುಸ್ಲಿಮರ ಮಧ್ಯೆ ಕಂದಕ ಸೃಷ್ಟಿಸುವ ಯತ್ನ ಮಾಡಿದ್ದಾರೆ.
ಮುಸ್ಲಿಮರು ಈಗ ಕಡಿಮೆ ಜನಸಂಖ್ಯೆ ಇದ್ದಿರಬಹುದು. ಅವರದು 20 ಕೋಟಿ, ನಾವು 80 ಕೋಟಿ ಎಂದು ಹೇಳಬಹುದು. ಸದ್ಯಕ್ಕೆ ನಾವು ಜಾಸ್ತಿ ಇದ್ದೇವೆ ಏನಾಗಲ್ಲ ಅನ್ನುವ ಭಾವನೆ ನಮ್ಮಲ್ಲಿದೆ. ಆದ್ರೆ ಮುಸ್ಲಿಮರು ನಾಲ್ಕು, ನಾಲ್ಕು ಮಕ್ಕಳನ್ನು ಮಾಡುತ್ತಾರೆ. ನಮಗೆ ಒಂದೊಂದೇ ಮಕ್ಕಳು ಇರೋದು. ಹಿಂದುಗಳೆಲ್ಲ ಮನೆಯಲ್ಲಿ ಕುಳಿತು ಯೋಚನೆ ಮಾಡಬೇಕು.
20 ಕೋಟಿ ಜನರಿಗೆ ನಾಲ್ಕು ನಾಲ್ಕು ಮಕ್ಕಳು ಆದ್ರೆ 20 ವರ್ಷದಲ್ಲಿ ಎಷ್ಟಾಗುತ್ತೆ ಲೆಕ್ಕ ಹಾಕಿ. ಭಾರತದಲ್ಲಿ ಮುಸ್ಲಿಮರ ಜನಸಂಖ್ಯೆ ಹೆಚ್ಚಾದ್ರೆ ಹಿಂದುಗಳ ಪರಿಸ್ಥಿತಿ ಏನಾಗಬಹುದು. ಭವಿಷ್ಯದಲ್ಲಿ ಹಿಂದುಗಳ ಸಂಖ್ಯೆ ಕಡಿಮೆಯಾದಲ್ಲಿ ದೇಶದ ಸ್ಥಿತಿ ಹೇಗಾಗಬಹುದು ಚಿಂತನೆ ಮಾಡಬೇಕು ಎಂದು ಹರೀಶ್ ಪೂಂಜಾ ಹೇಳಿದ್ದಾರೆ.
ಬೆಳ್ತಂಗಡಿ ತಾಲೂಕಿನ ಪೆರಾಡಿಯಲ್ಲಿ ನಡೆದ ಅಯ್ಯಪ್ಪ ದೀಪೋತ್ಸವ ಕಾರ್ಯಕ್ರಮದಲ್ಲಿ ಹರೀಶ್ ಪೂಂಜಾ ಈ ಹೇಳಿಕೆ ನೀಡಿದ್ದಾರೆ. ಸದ್ಯ ಈ ವಿಡಿಯೋ ವೈರಲ್ ಆಗಿದ್ದು ಪರ - ವಿರೋಧ ಪ್ರತಿಕ್ರಿಯೆ, ಚರ್ಚೆಗೆ ಕಾರಣವಾಗಿದೆ.
Belthangady MLA Harish Poonja Video goes viral on Muslim's making more children. Says Hindus are jusy making one baby each, what happnes Muslim Population becomes more he questioned
12-03-26 02:48 pm
HK News Staffer
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
ಲಕ್ಕುಂಡಿಯಲ್ಲಿ ಸಿಕ್ಕ ನಿಧಿ 500 ರಿಂದ 600 ವರ್ಷ ಹಳ...
11-03-26 12:57 pm
ಶಿಕ್ಷಕರಿಗೆ ಬೀದಿ ನಾಯಿ ನಿಯಂತ್ರಣ ಜವಾಬ್ದಾರಿ ಕೊಟ್ಟ...
11-03-26 11:48 am
12-03-26 09:03 pm
HK News Staffer
ನಷ್ಟ ಪರಿಹಾರ ಕೇಳಿದ ಇರಾನ್ ; ಯುದ್ಧ ನಿಲ್ಲಿಸಲು ಮೂರ...
12-03-26 09:01 pm
ಗಲ್ಫ್ ಯುದ್ಧ ; ವಿಷಯುಕ್ತ ಬಿಳಿ ರಂಜಕ ಬಾಂಬ್ ಬಳಕೆ,...
10-03-26 09:46 pm
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
12-03-26 10:47 pm
mangalore
ಸೈಬರ್ ಜಾಲದ ಮ್ಯೂಲ್ ಅಕೌಂಟ್ ವಂಚನೆ ; ಚೀನಾ ಲಿಂಕ್ ಹ...
12-03-26 02:44 pm
Cyber Fraud Awareness, Mangalore: ಸೈಬರ್ ವಂಚನೆ...
12-03-26 08:33 am
Gas News, Mangalore: ಗಲ್ಫ್ ಯುದ್ಧಕ್ಕೆ ಗ್ಯಾಸ್ ಟ...
11-03-26 09:15 pm
ಬಾಡಿಗೆ ಮನೆಯಲ್ಲಿ ಡ್ರಗ್ಸ್ ಮಾರಾಟ ; ಬಂಟ್ವಾಳದ ನೇರಳ...
11-03-26 07:22 pm
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm