ಬ್ರೇಕಿಂಗ್ ನ್ಯೂಸ್
09-01-24 10:19 pm Mangalore Correspondent ಕರಾವಳಿ
ಮಂಗಳೂರು, ಜ.9: ಸ್ಪೀಕರ್ ಯುಟಿ ಖಾದರ್ ಅವರಲ್ಲಿ ರಾಮ ಮಂದಿರ ಉದ್ಘಾಟನೆಗೆ ಹೋಗುತ್ತೀರಾ ಎಂದು ಪತ್ರಕರ್ತರು ಪ್ರಶ್ನೆ ಹಾಕಿದ್ದರು. ಬಹಳ ಜಾಣ್ಮೆಯಿಂದ ಉತ್ತರಿಸಲು ಮುಂದಾದ ಖಾದರ್ ಸಮಯ, ಸಂದರ್ಭ ಸಿಕ್ಕರೆ ಹೋಗುವುದರಲ್ಲಿ ತಪ್ಪಿಲ್ಲ ಎಂದು ಹೇಳಿಕೆ ಕೊಟ್ಟು ಜಾರಿಕೊಂಡಿದ್ದಾರೆ.
ರಾಮ ಮಂದಿರ ಬಗ್ಗೆ ಕೇಳಿದ ಪ್ರಶ್ನೆಗೆ, ನಾನು ಸ್ಪೀಕರ್ ಇದ್ದೇನೆ, ಹಾಗೆಲ್ಲ ಧರ್ಮ ಸೂಕ್ಷ್ಮಗಳ ಬಗ್ಗೆ ಮಾತಾಡಲ್ಲ ಎಂದ್ರು. ಮಂದಿರ ಉದ್ಘಾಟನೆ ಬಗ್ಗೆ ಎಂದು ಕೇಳಿದ್ದಕ್ಕೆ, ಸೌಹಾರ್ದತೆ ಪ್ರೀತಿ ವಿಶ್ವಾಸ ನೆಲೆಗೊಳಿಸುವ ಕಾರ್ಯಕ್ರಮ. ಎಲ್ಲರಿಗೂ ಪ್ರೇರಣೆ ಆಗುವ ಕೆಲಸ ಆಗುತ್ತಿದೆ. ಶುಭ ಹಾರೈಸುತ್ತೇನೆ ಎಂದರು.
ನೀವು ಕಾರ್ಯಕ್ರಮಕ್ಕೆ ಕರೆದರೆ ಹೋಗುತ್ತೀರಾ ಎಂದು ಕೇಳಿದ್ದಕ್ಕೆ, ನಮಗೆ ಸಮಯವಾಕಾಶ ಇದ್ದರೆ, ಅಂತಹ ಅವಕಾಶ, ಸಂದರ್ಭ ಬಂದಲ್ಲಿ ಹೋಗುವುದರಲ್ಲಿ ತಪ್ಪಿಲ್ಲ. ನಮ್ಮ ಪ್ರೋಗ್ರಾಮ್ ನೋಡಿಕೊಂಡು ಹೋಗಬೇಕಷ್ಟೆ. ಪ್ರತಿಯೊಂದು ಕೂಡ ಎಲ್ಲರನ್ನು ಒಗ್ಗೂಡಿಸುವ, ಸೌಹಾರ್ದತೆಯ ಕಾರ್ಯಕ್ರಮ ಆಗಬೇಕೆಂದು ಬಯಸುತ್ತೇನೆ ಎಂದು ಹೇಳಿದರು.
ಮಕ್ಕಳು ಶೌಚಾಲಯ ತೊಳೆಯುವ ಕುರಿತ ತಮ್ಮ ಮಾತಿನ ಬಗ್ಗೆ ಕೇಳಿದ್ದಕ್ಕೆ, ನಾವು ಸಣ್ಣದಿರುವಾಗ ನಮ್ಮ ಟಾಯ್ಲೆಟನ್ನು ನಾವೇ ತೊಳೆದಿದ್ದೇವೆ. ಹಾಗಂತ ಒತ್ತಾಯ ಮಾಡುವುದು ಸರಿಯಲ್ಲ. ಮಕ್ಕಳು ತಾವು ಬಳಸುವ ಟಾಯ್ಲೆಟನ್ನು ಕ್ಲೀನ್ ಮಾಡುವುದರಲ್ಲಿ ತಪ್ಪೇನಿದೆ. ತಾವಾಗಿಯೇ ಅಂತಹ ಕೆಲಸ ಮಾಡಿದರೆ, ಅರಿವು ಬರುತ್ತದೆ. ಹಾಗೆಂದು ನನ್ನ ಅಭಿಪ್ರಾಯ ಹೇಳಿದ್ದೇನೆ ಎಂದು ಸ್ಪಷ್ಟನೆ ನೀಡಿದರು. ಇತ್ತೀಚೆಗೆ ಮೂಡುಬಿದ್ರೆಯಲ್ಲಿ ಖಾದರ್ ಮಕ್ಕಳು ಟಾಯ್ಲೆಟ್ ತೊಳೆದರೆ ತಪ್ಪೇನು ಎಂದು ಹೇಳಿಕೆ ನೀಡಿದ್ದು ಚರ್ಚೆಗೆ ಗ್ರಾಸವಾಗಿತ್ತು.
A journalist asked Speaker UT Khader if he would go for the inauguration of ram temple. Khader, who tried to reply very tactfully, slipped away by saying that there was nothing wrong in going if the time and opportunity arose.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm