ಬ್ರೇಕಿಂಗ್ ನ್ಯೂಸ್
10-01-24 07:19 pm Mangalore Correspondent ಕರಾವಳಿ
ಮಂಗಳೂರು, ಜ.10: ನವಮಂಗಳೂರು ಬಂದರಿಗೆ ಹೊಸ ವರ್ಷದ ಮೊದಲ ಕ್ರೂಸ್ ಹಡಗು ಆಗಮಿಸಿದೆ. ಎಂ.ಎಸ್. ರಿವೀರಿಯ ಹೆಸರಿನ ಕ್ರೂಸ್ ಹಡಗು ಬುಧವಾರ ಎನ್ಎಂಪಿಟಿ ಬಂದರಿಗೆ ಆಗಮಿಸಿದ್ದು, ಹಡಗಿನಲ್ಲಿ ಬಂದ ವಿದೇಶಿ ಪ್ರವಾಸಿಗರು ಮಂಗಳೂರು ಸುತ್ತಾಡಿದ್ದಾರೆ. ಈ ಸಾಲಿನ ಸೀಸನ್ನಲ್ಲಿ ಬಂದ ನಾಲ್ಕನೇ ಪ್ರವಾಸಿ ಹಡಗು ಇದಾಗಿದೆ.
ಹಡಗಿನಲ್ಲಿ ಸಿಬಂದಿ ಸೇರಿ ಒಟ್ಟು 980 ಪ್ರವಾಸಿಗರಿದ್ದರು. ದುಬೈ, ಮುಂಬೈ, ಮರ್ಮಗೋವಾ ಬಂದರಿನ ಮೂಲಕ ಮಂಗಳೂರಿಗೆ ಆಗಮಿಸಿದ್ದು, ಐಷಾರಾಮಿ ಹಡಗು 239 ಮೀಟರ್ ಉದ್ದವಾಗಿದೆ. 66,172 ಟನ್ ಭಾರ ಹೊತ್ತೊಯ್ಯುವ ಸಾಮರ್ಥ್ಯ ಹೊಂದಿದೆ. ಹಡಗಿನಲ್ಲಿ ಬಂದ ಪ್ರವಾಸಿಗರಿಗೆ ಮಂಗಳೂರಿನ ಬಂದರಿಗೆ ಕಾಲಿಡುತ್ತಿದ್ದಂತೆ ಕರಾವಳಿಯ ಸಾಂಪ್ರದಾಯಿಕ ಕಲೆ ಯಕ್ಷಗಾನ ಮೂಲಕ ಸ್ವಾಗತ ನೀಡಲಾಯಿತು. ವಿವಿಧ ರೀತಿಯ ಸಾಂಸ್ಕೃತಿಕ ಕಲಾ ಪ್ರಕಾರಗಳನ್ನು ಏರ್ಪಡಿಸಲಾಗಿತ್ತು.
ಪ್ರವಾಸಿಗರನ್ನು ಮಂಗಳೂರು ಸುತ್ತಮುತ್ತ ಸುತ್ತಾಡಿಸಲು ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿತ್ತು. ಆಯುಷ್ ಇಲಾಖೆಯಿಂದ ಮೆಡಿಟೇಶನ್ ಸೆಂಟರ್, ಎನ್ಎಂಪಿಟಿ ಬಂದರಿನಲ್ಲಿ ಫ್ರೀ ವೈಫೈ, ಯಕ್ಷಗಾನ ಕಲಾವಿದರ ಜೊತೆಗೆ ಫೋಟೋ ಕ್ಲಿಕ್ಕಿಸಲು ಸೆಲ್ಫಿ ಸ್ಟಾಂಡ್ ಒದಗಿಸಲಾಗಿತ್ತು. ಹಡಗಿನ ಪ್ರಮುಖ ಅಧಿಕಾರಿಗಳನ್ನು ಎನ್ಎಂಪಿಎ ಬಂದರಿನ ಡೆಪ್ಯುಟಿ ಚೇರ್ಮನ್ ಕೆ.ಜಿ. ನಾಥ್, ಸೆಕ್ರಟರಿ ಜಿಜೋ ಥಾಮಸ್ ಗೌರವಿಸಿದರು. ಆಬಳಿಕ ಪ್ರವಾಸಿಗರಿಗೆಂದೇ ಮಂಗಳೂರಿನ ಸ್ಥಳೀಯ ಕಲಾವಿದರ ತಂಡದಿಂದ ಯಕ್ಷಗಾನ ಏರ್ಪಡಿಸಲಾಗಿತ್ತು.
ಮಂಗಳೂರಿನಲ್ಲಿ ಕಾರ್ಕಳ ಗೊಮ್ಮಟೇಶ್ವರ, ಮೂಡುಬಿದ್ರೆ ಸಾವಿರ ಕಂಬದ ಬಸದಿ, ಸೋನ್ಸ್ ಫಾರ್ಮ್, ಅಚಲ್ ಕ್ಯಾಶ್ಯು ಫ್ಯಾಕ್ಟರಿ, ಸೈಂಟ್ ಅಲೋಸಿಯಸ್ ಚರ್ಚ್, ಹಳೆ ಶೈಲಿಯ ಮನೆಗಳಿಗೆ ಪ್ರವಾಸಿಗರು ಭೇಟಿ ನೀಡಿದ್ದು, ಸಂಜೆಯ ವೇಳೆಗೆ ಹಡಗು ಕೊಚ್ಚಿ ಬಂದರಿನತ್ತ ತೆರಳಿತು.
Mangalore Cruise Ship Riviera arrives at NMPT Mangalore Port. A Total of 980 people including staffs and passengers have arrived.
17-09-25 06:02 pm
Bangalore Correspondent
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 06:54 pm
Mangalore Correspondent
Dharmasthala Case. Vittal Gowda: ಧರ್ಮಸ್ಥಳ ಕೇಸ...
17-09-25 03:19 pm
Ullal, Mangalore: ಸಮುದ್ರ ಮಧ್ಯದಲ್ಲೇ ಪೋರ್ಚುಗೀಸರ...
17-09-25 01:34 pm
Dharmasthala, Lakshmish Tolpadi, Mangalore: ಧ...
16-09-25 07:48 pm
Ex IPS Kempaiah, Professor Umeshchandra, Mang...
16-09-25 07:02 pm
17-09-25 06:04 pm
Mangalore Correspondent
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm
Vijayapura Bank Robbery: ಮಹಾರಾಷ್ಟ್ರ ಗಡಿಭಾಗದ ವ...
16-09-25 10:40 pm
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm