ಬ್ರೇಕಿಂಗ್ ನ್ಯೂಸ್
20-11-20 03:03 pm Mangalore Correspondent ಕರಾವಳಿ
ಉಡುಪಿ, ನ.20: ಮಂಗಳಮುಖಿಯರನ್ನು ನಾಗರಿಕ ಸಮಾಜ ಪರಿತ್ಯಕ್ತ ಭಾವನೆಯಿಂದಲೇ ಕಾಣುತ್ತದೆ. ಆದರೆ, ಅದೇ ಮಂಗಳಮುಖಿಯರು ಮಾನವೀಯ ಕಾರ್ಯದ ಮೂಲಕ ಗಮನ ಸೆಳೆಯುವ ಕೆಲಸ ಮಾಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಮಡಂತ್ಯಾರು ನಿವಾಸಿ ಆರಾಧ್ಯ ಎಂಬ ಎರಡೂವರೆ ವರ್ಷದ ಹೆಣ್ಣು ಮಗುವಿಗೆ ಶ್ರವಣ ದೋಷದ ಸಮಸ್ಯೆ ಇತ್ತು. ಮಗುವಿನ ಚಿಕಿತ್ಸೆಗೆ ಬರೋಬ್ಬರಿ 14 ಲಕ್ಷ ರೂ. ಅಗತ್ಯ ಇತ್ತು. ಮಾತ್ರವಲ್ಲ, ಮೂರು ತಿಂಗಳ ಒಳಗಾಗಿ ಈ ಸರ್ಜರಿ ಮಾಡಲೇಬೇಕಿತ್ತು.

ಈ ವಿಷಯ ತಿಳಿದ ಉಡುಪಿಯ ಮಂಗಳಮುಖಿಯರ ತಂಡ, ಹೆಣ್ಣು ಮಗುವಿನ ಚಿಕಿತ್ಸೆಗಾಗಿ ಉಡುಪಿ ಜಿಲ್ಲೆಯಾದ್ಯಂತ ಸಂಚರಿಸಿ ಹಣಸಂಗ್ರಹ ಮಾಡಿದೆ. ಮಂಗಳಮುಖಿಯರ ತಂಡದ ನೇತೃತ್ವ ವಹಿಸಿದವರು ಸಮೀಕ್ಷಾ ಎಂಬವರು. ಎಂಬಿಎ ಪದವೀಧರೆಯಾಗಿರುವ ಸಮೀಕ್ಷಾ ತನ್ನ ತಂಡದವರಾದ ಸಾನ್ವಿ, ರೇಖಾ, ಸಂಧ್ಯಾ, ನಿಶಾ, ಲಾವಣ್ಯ ಜೊತೆ ಸೇರಿಕೊಂಡು ಹಣ ಸಂಗ್ರಹಿಸಿದೆ.
ಉಡುಪಿ ಜಿಲ್ಲೆಯಾದ್ಯಂತ ಅಂಗಡಿ- ಮುಂಗಟ್ಟುಗಳು, ಮಾರುಕಟ್ಟೆ ಪ್ರದೇಶ ಮತ್ತು ಮನೆಗಳಿಗೆ ತೆರಳಿ ಎರಡೂವರೆ ವರ್ಷದ ಪುಟ್ಟ ಕಂದಮ್ಮಳಿಗಾಗಿ ಹಣ ಸಂಗ್ರಹಿಸಿದ್ದು ಸುಮಾರು 21 ಸಾವಿರದಷ್ಟು ಮೊತ್ತವನ್ನು ಮಗುವಿಗೆ ಹಸ್ತಾಂತರಿಸಿದ್ದಾರೆ. ಈ ಮೂಲಕ ಮಂಗಳಮುಖಿಯರು ಮಾನವೀಯತೆ ಮೆರೆದಿದ್ದಾರೆ. ಮೇಲ್ನೋಟಕ್ಕೆ ಈ ಹಣ ಸಣ್ಣ ಮೊತ್ತವೇ ಆಗಿದ್ದರೂ, ಮಗುವಿಗಾಗಿ ಮಿಡಿದ ಮಂಗಳಮುಖಿಯರ ಮಾನವೀಯತೆಗೆ ಮೆಚ್ಚಬೇಕು.
ಉಡುಪಿ ಜಿಲ್ಲೆಯಲ್ಲಿ ಇವರು ಆಶ್ರಯ ಸಮುದಾಯ ಸಂಘಟನೆ ಎಂಬ ಸಂಘ ಮಾಡಿಕೊಂಡಿದ್ದು ಇದರಲ್ಲಿ 283 ಜನ ಸದಸ್ಯರಿದ್ದಾರೆ. ಪಿಯುಸಿ ಮಾಡಿದವರು, ಪದವಿ ಮಾಡಿದವರು, ಎಂಬಿಎ ಕಲಿತವರು, ಮತ್ತು ಬಿಬಿಎಂ ಕಲಿತವರು ಈ ಸಂಘಟನೆಯಲ್ಲಿ ಇದ್ದಾರೆ.
Transgenders in Udupi show noble side by collecting about Rs 21,000 to help a little girl for operation.
08-04-26 02:09 pm
HK News Staffer
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
08-04-26 02:39 pm
HK News Staffer
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
Pakistan News, Fuel Crisis: ಇಂಧನ ಬಿಕ್ಕಟ್ಟು ;...
07-04-26 08:01 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 01:06 pm
HK News Staffer
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm
ಚಿಕ್ಕಮಗಳೂರು ; ಭದ್ರಾ ನದಿಗೆ ಹಾರಿ ಶಿವಮೊಗ್ಗದ ನರ್ಸ...
07-04-26 04:04 pm
ಪೊಲೀಸ್ ಕಸ್ಟಡಿಯಲ್ಲಿದ್ದ ತಂದೆ-ಮಗನಿಗೆ ಚಿತ್ರಹಿಂಸೆ...
07-04-26 10:08 am