ಬ್ರೇಕಿಂಗ್ ನ್ಯೂಸ್
20-11-20 03:03 pm Mangalore Correspondent ಕರಾವಳಿ
ಉಡುಪಿ, ನ.20: ಮಂಗಳಮುಖಿಯರನ್ನು ನಾಗರಿಕ ಸಮಾಜ ಪರಿತ್ಯಕ್ತ ಭಾವನೆಯಿಂದಲೇ ಕಾಣುತ್ತದೆ. ಆದರೆ, ಅದೇ ಮಂಗಳಮುಖಿಯರು ಮಾನವೀಯ ಕಾರ್ಯದ ಮೂಲಕ ಗಮನ ಸೆಳೆಯುವ ಕೆಲಸ ಮಾಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಮಡಂತ್ಯಾರು ನಿವಾಸಿ ಆರಾಧ್ಯ ಎಂಬ ಎರಡೂವರೆ ವರ್ಷದ ಹೆಣ್ಣು ಮಗುವಿಗೆ ಶ್ರವಣ ದೋಷದ ಸಮಸ್ಯೆ ಇತ್ತು. ಮಗುವಿನ ಚಿಕಿತ್ಸೆಗೆ ಬರೋಬ್ಬರಿ 14 ಲಕ್ಷ ರೂ. ಅಗತ್ಯ ಇತ್ತು. ಮಾತ್ರವಲ್ಲ, ಮೂರು ತಿಂಗಳ ಒಳಗಾಗಿ ಈ ಸರ್ಜರಿ ಮಾಡಲೇಬೇಕಿತ್ತು.

ಈ ವಿಷಯ ತಿಳಿದ ಉಡುಪಿಯ ಮಂಗಳಮುಖಿಯರ ತಂಡ, ಹೆಣ್ಣು ಮಗುವಿನ ಚಿಕಿತ್ಸೆಗಾಗಿ ಉಡುಪಿ ಜಿಲ್ಲೆಯಾದ್ಯಂತ ಸಂಚರಿಸಿ ಹಣಸಂಗ್ರಹ ಮಾಡಿದೆ. ಮಂಗಳಮುಖಿಯರ ತಂಡದ ನೇತೃತ್ವ ವಹಿಸಿದವರು ಸಮೀಕ್ಷಾ ಎಂಬವರು. ಎಂಬಿಎ ಪದವೀಧರೆಯಾಗಿರುವ ಸಮೀಕ್ಷಾ ತನ್ನ ತಂಡದವರಾದ ಸಾನ್ವಿ, ರೇಖಾ, ಸಂಧ್ಯಾ, ನಿಶಾ, ಲಾವಣ್ಯ ಜೊತೆ ಸೇರಿಕೊಂಡು ಹಣ ಸಂಗ್ರಹಿಸಿದೆ.
ಉಡುಪಿ ಜಿಲ್ಲೆಯಾದ್ಯಂತ ಅಂಗಡಿ- ಮುಂಗಟ್ಟುಗಳು, ಮಾರುಕಟ್ಟೆ ಪ್ರದೇಶ ಮತ್ತು ಮನೆಗಳಿಗೆ ತೆರಳಿ ಎರಡೂವರೆ ವರ್ಷದ ಪುಟ್ಟ ಕಂದಮ್ಮಳಿಗಾಗಿ ಹಣ ಸಂಗ್ರಹಿಸಿದ್ದು ಸುಮಾರು 21 ಸಾವಿರದಷ್ಟು ಮೊತ್ತವನ್ನು ಮಗುವಿಗೆ ಹಸ್ತಾಂತರಿಸಿದ್ದಾರೆ. ಈ ಮೂಲಕ ಮಂಗಳಮುಖಿಯರು ಮಾನವೀಯತೆ ಮೆರೆದಿದ್ದಾರೆ. ಮೇಲ್ನೋಟಕ್ಕೆ ಈ ಹಣ ಸಣ್ಣ ಮೊತ್ತವೇ ಆಗಿದ್ದರೂ, ಮಗುವಿಗಾಗಿ ಮಿಡಿದ ಮಂಗಳಮುಖಿಯರ ಮಾನವೀಯತೆಗೆ ಮೆಚ್ಚಬೇಕು.
ಉಡುಪಿ ಜಿಲ್ಲೆಯಲ್ಲಿ ಇವರು ಆಶ್ರಯ ಸಮುದಾಯ ಸಂಘಟನೆ ಎಂಬ ಸಂಘ ಮಾಡಿಕೊಂಡಿದ್ದು ಇದರಲ್ಲಿ 283 ಜನ ಸದಸ್ಯರಿದ್ದಾರೆ. ಪಿಯುಸಿ ಮಾಡಿದವರು, ಪದವಿ ಮಾಡಿದವರು, ಎಂಬಿಎ ಕಲಿತವರು, ಮತ್ತು ಬಿಬಿಎಂ ಕಲಿತವರು ಈ ಸಂಘಟನೆಯಲ್ಲಿ ಇದ್ದಾರೆ.
Transgenders in Udupi show noble side by collecting about Rs 21,000 to help a little girl for operation.
19-12-25 01:41 pm
Bangalore Correspondent
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 08:22 pm
Mangalore Correspondent
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm