ಬ್ರೇಕಿಂಗ್ ನ್ಯೂಸ್
12-01-24 11:27 pm Mangalore Correspondent ಕರಾವಳಿ
ಮಂಗಳೂರು, ಜ.13 : ತಮ್ಮ ಮೇಲೆ ಮಾಹಿತಿ ಆಯೋಗ ದಂಡ ವಿಧಿಸಿದ ಪ್ರಕರಣವನ್ನು ರಾಜ್ಯ ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸಿ ಪ್ರಶ್ನಿಸಿದ್ದ ವಾರ್ತಾಧಿಕಾರಿ ರೋಹಿಣಿ ಕೆ ಅವರಿಗೆ ರಾಜ್ಯ ಹೈಕೋರ್ಟ್ ದಂಡ ವಿಧಿಸುವ ಮೂಲಕ ಮಹತ್ವದ ತೀರ್ಪು ನೀಡಿದೆ.
2013ರಲ್ಲಿ ರೋಹಿಣಿ ಕೆ. ಅವರು ದ.ಕ. ಜಿಲ್ಲಾ ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕರಾಗಿದ್ದಾಗ ಪತ್ರಕರ್ತ ಇಕ್ಬಾಲ್ ಕುತ್ತಾರ್ ಅವರು ಇಲಾಖೆಯು ಏರ್ಪಡಿಸಿದ್ದ ಜಿಲ್ಲಾ ವ್ಯಾಪ್ತಿಯ ಪ್ರೌಢಶಾಲಾ ಗಿರಿಜನ ವಿದ್ಯಾರ್ಥಿಗಳ ಪ್ರವಾಸ ಕಾರ್ಯಕ್ರಮದ ಖರ್ಚು ವೆಚ್ಚಗಳ ವಿವರ ಕೋರಿ ಅರ್ಜಿ ಸಲ್ಲಿಸಿದ್ದರು. ಸದ್ರಿ ಅರ್ಜಿಗೆ ಮಾಹಿತಿ ನೀಡದೆ ನಿರಾಕರಿಸಿದ್ದ ವಾರ್ತಾಧಿಕಾರಿ ರೋಹಿಣಿ ವಿರುದ್ಧ ಇಕ್ಬಾಲ್ ಕುತ್ತಾರ್ ರಾಜ್ಯ ಮಾಹಿತಿ ಆಯೋಗದಲ್ಲಿ ದೂರು ಸಲ್ಲಿಸಿದಾಗ, ತನಿಖೆ ನಡೆಸಿದ ಆಯೋಗ ಮಾಹಿತಿ ನಿರಾಕರಿಸಿರುವುದು ಸರಿಯಲ್ಲವೆಂದು ರೋಹಿಣಿ ಅವರಿಗೆ ಎರಡು ಸಾವಿರ ರೂ. ದಂಡ ವಿಧಿಸಿ ಆದೇಶ ನೀಡಿತ್ತು.
ಆದರೆ, ಮಾಹಿತಿ ಆಯೋಗದ ಈ ಆದೇಶವನ್ನು ಸಂವಿಧಾನದ ಕಲಂ 226 ಮತ್ತು 227ರ ಪ್ರಕಾರ ರದ್ದುಪಡಿಸುವಂತೆ ರೋಹಿಣಿ ಅವರು ರಾಜ್ಯ ಹೈಕೋರ್ಟ್ ಮೆಟ್ಟಿಲೇರಿ 2015ಕ್ಕೆ ರಿಟ್ ಅರ್ಜಿ ದಾಖಲಿಸಿದ್ದರು. ಪ್ರಕರಣದಲ್ಲಿ ರಾಜ್ಯ ಮಾಹಿತಿ ಆಯೋಗ ಹಾಗೂ ಇಕ್ಬಾಲ್ ಕುತ್ತಾರ್ ಅವರನ್ನು ಪ್ರತಿವಾದಿಗಳನ್ನಾಗಿಸಿದ್ದರು.
ಕಳೆದ ಎಂಟು ವರ್ಷಗಳಿಂದ ಫಿರ್ಯಾದುದಾರರು ಹಾಗೂ ಪ್ರತಿವಾದಿಗಳ ವಾದಗಳನ್ನು ಆಲಿಸಿದ ರಾಜ್ಯ ಹೈಕೋರ್ಟ್ ತೀರ್ಪು ನೀಡಿದೆ, ಪ್ರಕರಣದಲ್ಲಿ ಫಿರ್ಯಾದುದಾರರ ಅರ್ಹತೆಯ ಕೊರತೆಯಿದ್ದು, ರಾಜ್ಯ ಮಾಹಿತಿ ಆಯೋಗದ ಆದೇಶ ರದ್ದುಪಡಿಸಲು ಯೋಗ್ಯವಲ್ಲವೆಂದು ಮನಗಂಡಿದೆ. ಅಲ್ಲದೆ ವಾರ್ತಾಧಿಕಾರಿ ರೋಹಿಣಿ ಅವರ ರಿಟ್ ಅರ್ಜಿಯನ್ನು ವಜಾಗೊಳಿಸಿ, ಪ್ರಕರಣದಲ್ಲಿ ಮಾಹಿತಿ ನಿರಾಕರಿಸಲ್ಪಟ್ಟು ಆಯೋಗಕ್ಕೆ ದೂರು ಸಲ್ಲಿಸಿ ದಂಡನೆ ವಿಧಿಸಲು ಕಾರಣರಾದ ಇಕ್ಬಾಲ್ ಕುತ್ತಾರ್ ಅವರಿಗೆ ರೋಹಿಣಿ ಅವರು ಒಂದು ತಿಂಗಳೊಳಗಾಗಿ 25 ಸಾವಿರ ರೂ. ಜುಲ್ಮಾನೆ ನೀಡುವಂತೆ ನ್ಯಾಯಮೂರ್ತಿ ಆರ್. ನಟರಾಜ್ ತೀರ್ಪು ನೀಡಿದ್ದಾರೆ.
The Karnataka High Court has imposed a fine on Information Officer Rohini K for filing a writ petition in the State High Court challenging the imposition of penalty on her by the Information Commission.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm