ಬ್ರೇಕಿಂಗ್ ನ್ಯೂಸ್
13-01-24 08:52 pm Mangalore Correspondent ಕರಾವಳಿ
ಮಂಗಳೂರು, ಜ.13: ರಾಮ ನಮಗೂ ದೇವರೇ, ನಾವು ಎಲ್ಲಿಯೂ ಇಲ್ಲ ಅನ್ನಲ್ಲ. ನಮ್ಮ ರಾಮ ಮೊದಲಿನ ರಾಮ, ಲಕ್ಷ್ಮಣ, ಸೀತಾ, ಹನುಮಂತ ಸೇರಿ ಕುಟುಂಬ ಸಮೇತ ಇರೋ ರಾಮ. ನಮಗೆ ಕೋಮುವಾದಿ ರಾಮ ಬೇಕಾಗಿಲ್ಲ, ನಮಗೆ ಎಲ್ಲರನ್ನು ಹೊಂದಿಸಿಕೊಂಡು ಹೋಗುವ ರಾಮ ಬೇಕು ಎಂದು ಬಿಜೆಪಿ ನಾಯಕರ ಹೇಳಿಕೆ ಬಗ್ಗೆ ಸಚಿವ ಬಿ.ನಾಗೇಂದ್ರ ವ್ಯಂಗ್ಯವಾಗಿ ಹೇಳಿಕೆ ನೀಡಿದ್ದಾರೆ.
ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು, ಚಿಕ್ಕಂದಿನಿಂದಲೇ ರಾಮ ಭಜನೆ ಮಾಡಿ ನಾವು ಬೆಳೆದವರು. ನಾವು ಅಯೋಧ್ಯೆಗೆ ಖಂಡಿತ ಹೋಗೇ ಹೋಗ್ತೀವಿ. ರಾಮಮಂದಿರದಲ್ಲಿ ನಮ್ಮ ಭಾಗವೂ ಇದೆ, ನೆಹರೂ ಅವರು ಪ್ರಣಾಳಿಕೆಯಲ್ಲೇ ರಾಮ ಮಂದಿರ ಮಾಡ್ತೀವಿ ಅಂದಿದ್ರು. ದೇವರ ರೀತಿ ನೋಡೋ ರಾಮ ಬೇರೆ, ರಾಜಕೀಯ ಪಕ್ಷದ ಕೋಮುವಾದಿ ರಾಮ ಬೇರೆ. ರಾಮ ನಮ್ಮ ದೇಶದ ಮತ್ತು ನಾಡಿನ ಆಸ್ತಿ. ಅದಕ್ಕೆ ಯಾರೂ ಕರೀಬೇಕಾಗಿಲ್ಲ, ನಾವು ಹೋಗ್ತೇವೆ. ಯಾರೂ ಹೋಗಬೇಡಿ ಅಂದಿಲ್ಲ, ಕುಟುಂಬ ಸಮೇತ ರಾಮನಲ್ಲಿಗೆ ಹೋಗ್ತೇವೆ. ನಾನು ವಾಲ್ಮೀಕಿ ಸಮಾಜದ ವ್ಯಕ್ತಿ, ನಮಗೆ ಕೋಮುವಾದಿ ರಾಮನಂತೂ ಬೇಡ ಎಂದು ಲೇವಡಿ ಮಾಡಿದ್ದಾರೆ.
ಅನಂತ್ ಕುಮಾರ್ ಹೆಗಡೆ ಮಾಧ್ಯಮದಲ್ಲಿ ಫೇಮಸ್ ಆಗಲು ನೋಡ್ತಾರೆ. ಅವರ ಹೇಳಿಕೆ ಮಾಧ್ಯಮಗಳ ಮೂಲಕವೇ ನನಗೆ ಗೊತ್ತಾಯ್ತು. ಅವರು ಜಾತಿ ಧರ್ಮ ಬೇರೆ ಮಾಡಿಯೇ ರಾಜಕಾರಣ ಮಾಡಿದವರು. ಶಾಂತಿ ಕದಡಿ ರಾಜಕೀಯ ಲಾಭ ಪಡೆಯೋ ವ್ಯಕ್ತಿ ಅವರು. ಅವರು ಹೇಳಿದ್ದು ಯಾವುದೇ ಪುಸ್ತಕದಲ್ಲಾಗಲೀ, ಎಲ್ಲಿಯೂ ಉಲ್ಲೇಖ ಇಲ್ಲ, ನಾವೆಲ್ಲ ಅಣ್ಣ ತಮ್ಮಂದಿರಂತೆ ಇದೀವಿ.
ಯಾವುದೇ ಪುಸ್ತಕಗಳಲ್ಲಿ ಮಸೀದಿಗಳು ದೇವಸ್ಥಾನ ಆಗಿತ್ತು ಅಂತ ಉಲ್ಲೇಖ ಇಲ್ಲ. ಅವರಿಗೆ ತಲೆಯಲ್ಲಿ ಬಂದಿದ್ದನ್ನ ಹೇಳಿಕೊಂಡು ಹೋಗ್ತಾರೆ. ಎಲ್ಲಿಯೂ ಉಲ್ಲೇಖ ಇಲ್ಲದ ವಿಚಾರಗಳನ್ನು ಅವರು ತರ್ತಾ ಇದಾರೆ. ಎರಡು ಮೂರು ವರ್ಷ ಅವರು ಎಲ್ಲೂ ಕಾಣಲಿಲ್ಲ. ಈಗ ಚುನಾವಣೆ ಹೊತ್ತಲ್ಲಿ ರಾಜಕೀಯ ಮಾಡೋದು ಸಹಜ. ನಮ್ಮ ರಾಜ್ಯ ಶಾಂತಿಯುತವಾಗಿದೆ, ಶಾಂತಿ ಕದಡಿದ್ರೆ ಎದುರಿಸಲು ಸರ್ಕಾರ ಸಮರ್ಥವಾಗಿದೆ.
ರಾಜೀವ ಗಾಂಧಿ ಸತ್ತಿದ್ದಕ್ಕೆ ಗೋಪಾಷ್ಠಮಿ ಶಾಪ ಅನ್ನೋದು ಸರಿಯಲ್ಲ, ಅದು ಆ ದಿನ ಕಾಕತಾಳೀಯ ಇರಬಹುದು. ಕಾಗೆ ಕೂರೋಕು ಕೊಂಬೆ ಮುರಿಯೋಕು ಅನ್ನೋ ಗಾದೆ ಥರ ಇದು. ಹಾಗಾಗಿ ಇವರ ಮಾತಿಗೆ ನಾವು ಹೆಚ್ಚು ಪ್ರಾಮುಖ್ಯತೆ ಕೊಡಲ್ಲ ಎಂದು ನಾಗೇಂದ್ರ ಹೇಳಿದರು. ಸಿದ್ದರಾಮಯ್ಯನವರ ಬಗ್ಗೆ ಏಕವಚನ ಪ್ರಯೋಗ ಅವರ ಸಂಸ್ಕಾರ ತೋರಿಸುತ್ತದೆ. ವಯಸ್ಸಿನಲ್ಲಿ ಅವರು ತಂದೆ ಸಮಾನರಾಗಿದ್ದಾರೆ. ಅಂಥವರನ್ನ ಏಕವಚನದಲ್ಲಿ ಮಾತನಾಡೋದು ಬೇಳೆ ಬೇಯಿಸಿದಂತೆ. ಅನಂತ್ ಕುಮಾರ್ ಮಾತ್ರ ಅಲ್ಲ, ಇಡೀ ಬಿಜೆಪಿಯೇ ಹಾಗೆ. ಅವರ ಸಂಸ್ಕಾರ, ಸಂಸ್ಕೃತಿ ಏನು ಅನ್ನೋದು ಗೊತ್ತಾಗ್ತಿದೆ ಎಂದರು.
It is not that Rama is god to us and we are nowhere to be found. Our Rama is the first Rama, Lakshmana, Sita, Hanuman and the other with the family. "We don't want a communal Ram, we want a Ram that is inclusive of all," Nagendra said.
17-09-25 06:02 pm
Bangalore Correspondent
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 06:54 pm
Mangalore Correspondent
Dharmasthala Case. Vittal Gowda: ಧರ್ಮಸ್ಥಳ ಕೇಸ...
17-09-25 03:19 pm
Ullal, Mangalore: ಸಮುದ್ರ ಮಧ್ಯದಲ್ಲೇ ಪೋರ್ಚುಗೀಸರ...
17-09-25 01:34 pm
Dharmasthala, Lakshmish Tolpadi, Mangalore: ಧ...
16-09-25 07:48 pm
Ex IPS Kempaiah, Professor Umeshchandra, Mang...
16-09-25 07:02 pm
17-09-25 06:04 pm
Mangalore Correspondent
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm
Vijayapura Bank Robbery: ಮಹಾರಾಷ್ಟ್ರ ಗಡಿಭಾಗದ ವ...
16-09-25 10:40 pm
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm