ಬ್ರೇಕಿಂಗ್ ನ್ಯೂಸ್
13-01-24 10:56 pm Mangalore Correspondent ಕರಾವಳಿ
ಬಂಟ್ವಾಳ, ಜ.13: ಹೆಲ್ಮೆಟ್ ಹಾಕದೆ ಸಂಚಾರ ಮಾಡುತ್ತಿದ್ದ ವೇಳೆ ಟ್ರಾಫಿಕ್ ಪೊಲೀಸರು ಬೈಕ್ ನಿಲ್ಲಿಸಲು ಸೂಚನೆ ನೀಡಿದಾಗ ನಿಲ್ಲಿಸದೆ ಹೋಗಿದ್ದಾರೆ ಎಂಬ ಕಾರಣಕ್ಕಾಗಿ ಅಟ್ಟಿಸಿಕೊಂಡು ಬಂದು ಬೈಕ್ ಗೆ ಲಾಕ್ ಹಾಕಿದ್ದಕ್ಕೆ ಸಾರ್ವಜನಿಕರು ಹಾಗೂ ಟ್ರಾಫಿಕ್ ಎ.ಎಸ್.ಐ. ಮಧ್ಯೆ ಜಟಾಪಟಿ ನಡೆದ ಘಟನೆ ಬಿಸಿರೋಡಿನ ತಾಲೂಕು ಪಂಚಾಯತ್ ಕಚೇರಿ ಮುಂಭಾಗದಲ್ಲಿ ನಡೆದಿದೆ.
ಟ್ರಾಫಿಕ್ ಎಎಸ್ಐ ಜನಾರ್ದನ ಹಾಗೂ ಸಾರ್ವಜನಿಕರ ನಡುವೆ ವಾಗ್ವಾದ ನಡೆದಿದ್ದು ಕೊನೆಗೆ ಬೈಕ್ ಗೆ ಹಾಕಿದ್ದ ಲಾಕ್ ಅನ್ನು ತೆಗದು ಹೋಗಿದ್ದಾರೆ. ಭಾಸ್ಕರ ಮಣಿಹಳ್ಳ ಎಂಬವರು ಬೈಕ್ ರಿಪೇರಿಗಾಗಿ ಕೈಕುಂಜೆಯ ಮೆಕ್ಯಾನಿಕ್ ಬಳಿ ಇಟ್ಟಿದ್ದರು. ಇವರ ಬೈಕ್ ಯಾವುದೋ ಪ್ರಕರಣದಲ್ಲಿ ಪೋಲೀಸ್ ಠಾಣೆಯಲ್ಲಿ ಹಲವು ಸಮಯದಿಂದ ಇದ್ದು, ಬ್ಯಾಟರಿ ಸಹಿತ ಇನ್ನಿತರ ಸಾಮಾಗ್ರಿಗಳು ಕೆಟ್ಟುಹೋಗಿತ್ತು. ಠಾಣೆಯಿಂದ ಬಿಡುಗಡೆಗೊಳಿಸಿದ ಬೈಕ್ ನ್ನು ರಿಪೇರಿಗಾಗಿ ಅವರು ಶಬರಿಮಲೆ ಯಾತ್ರೆ ಹೋಗುವ ವೇಳೆ ಮೆಕ್ಯಾನಿಕ್ ಬಳಿ ಇಟ್ಟಿದ್ದರು.





ಶಬರಿಮಲೆಯಿಂದ ಆಗಮಿಸಿ ಶನಿವಾರ ಬೆಳಗ್ಗೆ ಬೈಕ್ ಟೆಸ್ಟ್ ರೈಡ್ ಮಾಡುವ ಉದ್ದೇಶದಿಂದ ಕೈಕುಂಜೆ ರಸ್ತೆಯಲ್ಲಿ ಹೆಲ್ಮೆಟ್ ಧರಿಸದೆ ಸಂಚಾರ ಮಾಡುತ್ತಿದ್ದರು. ಈ ಸಂದರ್ಭದಲ್ಲಿ ಟ್ರಾಫಿಕ್ ಪೋಲೀಸರು ಬೈಕ್ ನಿಲ್ಲಿಸಲು ಸೂಚಿಸಿದ್ದಾರೆ. ಆದರೆ ಬೈಕ್ ಸವಾರ ಭಾಸ್ಕರ್ ಅವರು ಬೈಕ್ ನಿಲ್ಲಿಸದೆ ಹೋಗಿದ್ದಾರೆ. ಈ ಕಾರಣಕ್ಕೆ ಎ.ಎಸ್.ಐ. ಹಾಗೂ ಸಿಬ್ಬಂದಿಯವರು ಸವಾರನನ್ನು ಬೆನ್ನಟ್ಟಿ ಬಂದು ತಾಲೂಕು ಪಂಚಾಯತ್ ಎದುರು ಮರದ ಅಡಿಯಲ್ಲಿ ನಿಲ್ಲಿಸಿ ಹೋಗಿದ್ದ ಬೈಕ್ ಗೆ ಲಾಕ್ ಹಾಕಿದ್ದಾರೆ. ಇದರಿಂದ ಕುಪಿತರಾದ ಬೈಕ್ ಸವಾರ ಹಾಗೂ ಸಾರ್ವಜನಿಕರು ಇವರ ನಡೆಯ ಬಗ್ಗೆ ವಿರೋಧ ವ್ಯಕ್ತಪಡಿಸಿದರು.
ಲಾಕ್ ಮಾಡಲು ಅವಕಾಶ ಇದೆಯಾ?
ಸವಾರರನ್ನು ಬೆನ್ನಟ್ಟಿ ವಾಹನಗಳಿಗೆ ಲಾಕ್ ಹಾಕುವ ಅವಕಾಶ ಟ್ರಾಫಿಕ್ ಪೋಲೀಸರಿಗೆ ಇದೆಯಾ? ಎಂಬ ಪ್ರಶ್ನೆಯನ್ನು ಸಾರ್ವಜನಿಕರು ಮಾಡಿದ್ದಾರೆ.
ವಾಗ್ವಾದ ಸಂದರ್ಭದಲ್ಲಿ ಟ್ರಾಫಿಕ್ ಎಎಸ್ಐ ಬಳಕೆ ಮಾಡಿದ ಬೈಕಿನ ವಿಮೆ ಪಾಲಿಸಿಯ ಅವಧಿ ಮುಗಿದಿದೆ ಎಂದು ಆನ್ ಲೈನ್ ತೋರಿಸುತ್ತಿದೆ ಎಂದು ಆರೋಪ ಮಾಡಿದರು. ವಿಮೆ ಇಲ್ಲದೆ ಪೋಲೀಸರ ವಾಹನ ರಸ್ತೆಗೆ ಇಳಿಯಬಹುದಾ ಎಂದು ಪ್ರಶ್ನಿಸಿ ತರಾಟೆಗೆತ್ತಿಕೊಂಡರು.
The public and the Traffic ASI have been suspended for not stopping the bike when the traffic police instructed them to stop it while they were not wearing a helmet. The incident took place in front of the taluk panchayat office on BC Road.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm