ಬ್ರೇಕಿಂಗ್ ನ್ಯೂಸ್
20-11-20 05:13 pm Mangalore Correspondent ಕರಾವಳಿ
ಮಂಗಳೂರು, ನವೆಂಬರ್ 20: ಮರಾಠ ಅಭಿವೃದ್ಧಿ ನಿಗಮದ ಬಗ್ಗೆ ಟೀಕಿಸಿ ಕ್ರೈಸ್ತರನ್ನು ಬೀದಿಗಿಳಿಸುತ್ತೇವೆ ಎಂದಿದ್ದ ಕಾಂಗ್ರೆಸ್ ಮುಖಂಡ ಐವಾನ್ ಡಿಸೋಜಾಗೆ ಬಿಜೆಪಿಯ ಕ್ರಿಶ್ಚಿಯನ್ ಅಭಿವೃದ್ಧಿ ಸಮಿತಿ ಅಧ್ಯಕ್ಷ ಜೋಯ್ಲಸ್ ಡಿಸೋಜ ತಿರುಗೇಟು ನೀಡಿದ್ದಾರೆ. ರಾಜ್ಯದಲ್ಲಿ ಬಿಎಸ್ ಯಡಿಯೂರಪ್ಪರ ಆಡಳಿತವನ್ನು ಸಹಿಸಲಾಗದೆ ಕಾಂಗ್ರೆಸಿನವರು ಕ್ರಿಶ್ಚಿಯನ್ನರನ್ನು ಎತ್ತಿಕಟ್ಟುವ ಕೆಲಸಕ್ಕೆ ಮುಂದಾಗಿದ್ದಾರೆ ಎಂದು ಆರೋಪಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಜೋಯ್ಲಸ್ ಡಿಸೋಜ, 2011-12ರ ಬಜೆಟ್ ನಲ್ಲಿ ಕರ್ನಾಟಕದ ಇತಿಹಾಸದಲ್ಲೇ ಮೊದಲ ಬಾರಿಗೆ ಯಡಿಯೂರಪ್ಪ ಸರಕಾರ ಕ್ರೈಸ್ತ ಸಮುದಾಯದ ಅಭಿವೃದ್ಧಿಗೆ 50 ಕೋಟಿ ರೂಪಾಯಿ ಅನುದಾನ ಮೀಸಲಿಟ್ಟಿದ್ದರು. ಈ ಬಾರಿ 2020-21ರ ಸಾಲಿನ ಬಜೆಟ್ ನಲ್ಲಿ ಯಡಿಯೂರಪ್ಪ , ಕ್ರೈಸ್ತರ ಅಭಿವೃದ್ಧಿಗಾಗಿ 50 ಕೋಟಿ ರೂಪಾಯಿ ಮೀಸಲಿಡುವ ಮೂಲಕ ಕ್ರಿಶ್ಚಿಯನ್ನರಿಗೆ ಅತಿ ಹೆಚ್ಚು ಅನುದಾನ ಕೊಟ್ಟ ಸಿಎಂ ಎಂಬ ಹೆಗ್ಗಳಿಕೆ ಗಳಿಸಿದ್ದಾರೆ.
ಮತ ಬ್ಯಾಂಕ್ ರಾಜಕೀಯಕ್ಕಾಗಿ ಕ್ರೈಸ್ತ ಸಮುದಾಯದ ಬಗ್ಗೆ ಮೊಸಳೆ ಕಣ್ಣೀರು ಹರಿಸುವ ಕಾಂಗ್ರೆಸಿನ ಐವನ್ ಡಿಸೋಜ, ವಿಧಾನ ಪರಿಷತ್ ಸದಸ್ಯರಾಗಿದ್ದ ಸಂದರ್ಭದಲ್ಲಿ ಅವರದೇ ಸರಕಾರ ಇತ್ತು. ಅಂದಿನ ಸಿಎಂ ಸಿದ್ಧರಾಮಯ್ಯರ ಜೊತೆ ಬಾಲಂಗೋಚಿಯಂತೆ ತಿರುಗುತ್ತಿದ್ದ ಇವರಿಗೆ ಆಗ ಕ್ರೈಸ್ತ ಸಮುದಾಯದ ಬಗ್ಗೆ ನೆನಪಾಗಲಿಲ್ಲ. ಕೇವಲ ಪ್ರಚಾರಕ್ಕಾಗಿ ಭಾಷಣ ಮಾಡುವ ಇವರಿಂದ ಕ್ರೈಸ್ತರ ಅಭಿವೃದ್ಧಿ ಸಾಧ್ಯವಿಲ್ಲವೆಂದು ಜನರೇ ಕಾಂಗ್ರೆಸನ್ನು ಬೀದಿಯಲ್ಲಿ ನಿಲ್ಲಿಸಿದ್ದಾರೆ. ಕ್ರೈಸ್ತ ಸಮುದಾಯಕ್ಕೆ ಕಾಂಗ್ರೆಸ್ ನೀಡಿರುವ ಕೊಡುಗೆ ಏನೆಂದು ತೋರಿಸಲಿ ಎಂದು ಸವಾಲು ಹಾಕಿದ್ದಾರೆ.
ಇತ್ತೀಚಿನ ಚುನಾವಣೆಗಳಲ್ಲಿ ಕ್ರೈಸ್ತ ಸಮುದಾಯ ಬಿಜೆಪಿಗೆ ಬೆಂಬಲಿಸುತ್ತಿರುವುದನ್ನು ತಿಳಿದ ಕಾಂಗ್ರೆಸ್ ಪಕ್ಷ, ಹತಾಶೆಗೊಂಡು ಶಾಂತಿಯಿಂದ ಬದುಕುತ್ತಿರುವ ಜನರನ್ನು ಎತ್ತಿಕಟ್ಟುತ್ತಿದೆ. ಸುಳ್ಳು ಹೇಳಿಕೆಗಳನ್ನು ನಾಯಕರು ಸಮಾಜವನ್ನು ಅಶಾಂತಿಗೆ ತಳ್ಳುತ್ತಿದ್ದಾರೆ. ಕಾಂಗ್ರೆಸ್ ಪಕ್ಷದ ಈ ಬುದ್ಧಿಯನ್ನು ಜನ ಅರ್ಥ ಮಾಡಿಕೊಂಡಿದ್ದು, ಇದಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಜೋಯ್ಲಸ್ ಡಿಸೋಜ ತಿರುಗೇಟು ನೀಡಿದ್ದಾರೆ.
Ivan D'Souza of the Congress party, who sheds crocodile tears in order to garner votes of Christian community did not remember the Christian community of the state nor did not do any better to the Christian community slammed Joylus Dsouza president of Christian Development Committee.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
09-09-25 11:09 pm
HK News Desk
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
09-09-25 10:47 pm
Mangalore Correspondent
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
Mangalore, NHAI, Padmaraj: ಇನ್ನೆಷ್ಟು ಜೀವ ಬಲಿಯ...
09-09-25 05:14 pm
MLA Vedavyas Kamath, Mangalore, Yakshangana:...
09-09-25 04:47 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm