ಬ್ರೇಕಿಂಗ್ ನ್ಯೂಸ್
14-01-24 08:58 pm Mangalore Correspondent ಕರಾವಳಿ
ಮಂಗಳೂರು, ಜ.14: ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ರಸ್ತೆ ದಾಟುತ್ತಿದ್ದಾಗ ಅಪರಿಚಿತ ಕಾರೊಂದು ಡಿಕ್ಕಿಯಾಗಿ ಪರಾರಿಯಾದ ಘಟನೆ ಬಜ್ಪೆ ಠಾಣೆ ವ್ಯಾಪ್ತಿಯ ತೆಂಕ ಎಡಪದವಿನಲ್ಲಿ ನಡೆದಿದೆ.
ಶಾಸಕ ರಾಜೇಶ್ ನಾಯ್ಕ್ ಅವರು ಮಕರ ಸಂಕ್ರಾಂತಿ ಹಿನ್ನೆಲೆಯಲ್ಲಿ ಮಧ್ಯಾಹ್ನ ತೆಂಕ ಎಡಪದವು ಗೋಪಾಲಕೃಷ್ಣ ದೇವಸ್ಥಾನದಲ್ಲಿ ಪೂಜೆಗೆ ತೆರಳಿದ್ದು ಮಧ್ಯಾಹ್ನ 1.30ರ ಸುಮಾರಿಗೆ ಪೂಜೆ ಮುಗಿಸಿ ರಸ್ತೆ ದಾಟಲು ನಿಂತಿದ್ದಾಗ ಎದುರಿನಿಂದ ಬಂದ ಸ್ವಿಫ್ಟ್ ಕಾರು ಡಿಕ್ಕಿ ಹೊಡೆದು ಪರಾರಿಯಾಗಿದೆ.
ಮೂಡುಬಿದ್ರೆಯಿಂದ ಮಂಗಳೂರು ಸಾಗುತ್ತಿದ್ದ ಸ್ವಿಫ್ಟ್ ಕಾರು ಚಾಲಕ ಶಾಸಕರಿಗೆ ಡಿಕ್ಕಿಯಾದರೂ ನಿಲ್ಲಿಸದೆ ಎಸ್ಕೇಪ್ ಆಗಿದ್ದಾನೆ. ಸ್ಥಳೀಯರು ಕೂಡಲೇ ಗಾಡಿ ನಂಬರ್ ನೋಟ್ ಮಾಡಿ ಬಜ್ಪೆ ಪೊಲೀಸರಿಗೆ ತಿಳಿಸಿದ್ದರು. ನಿಲ್ಲಿಸದೆ ಪರಾರಿಯಾದ ಕಾರನ್ನು ಬಳಿಕ ಗುರುಪುರದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹಿಟ್ ಅಂಡ್ ರನ್ ಮಾಡಿದ ಆರೋಪಿ ಮೊಹಮ್ಮದ್ ಸುಫೈಲನ್ನು ಪೊಲೀಸರು ಬಂಧಿಸಿದ್ದಾರೆ.
ಶಾಸಕ ರಾಜೇಶ್ ನಾಯ್ಕ್ ಅವರ ಎರಡೂ ಕಾಲಿಗೆ ಗಾಯಗೊಂಡಿದ್ದು, ಮಂಗಳೂರಿನ ಎಜೆ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದು ಮನೆಗೆ ಹಿಂತಿರುಗಿದ್ದಾರೆ. ಘಟನೆ ಬಗ್ಗೆ ಬಜ್ಪೆ ಠಾಣೆಯಲ್ಲಿ ಶಾಸಕರ ಪಿಎ ಪವನ್ ಕುಮಾರ್ ಶೆಟ್ಟಿ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ. ಕಾರು ಚಾಲಕ ರೈಲ್ವೇ ನಿಲ್ದಾಣಕ್ಕೆಂದು ವೇಗವಾಗಿ ಬರುತ್ತಿದ್ದ. ತೆಂಕ ಎಡಪದವಿನಲ್ಲಿ ಒಂದು ಕಡೆ ಲಾರಿ ಇದ್ದುದರಿಂದ ಅದನ್ನು ಓವರ್ ಟೇಕ್ ಮಾಡಿ ಬರುವಾಗ ಶಾಸಕರ ಮೇಲೆ ಡಿಕ್ಕಿಯಾಗಿದ್ದಾನೆ. ಸ್ಥಳದಲ್ಲಿ ಜನರು ಇದ್ದುದರಿಂದ ನಿಲ್ಲಿಸದೆ ಪರಾರಿಯಾಗಿದ್ದ. ಲುಂಗಿ ಉಟ್ಟಿದ್ದ ಶಾಸಕರು ಕಾರಿನ ಹೊಡೆತಕ್ಕೆ ಸಿಲುಕಿದ್ದರು. ಆದರೆ ಅದೃಷ್ಟದಿಂದ ಯಾವುದೇ ಅಪಾಯ ಇಲ್ಲದೆ ಪಾರಾಗಿದ್ದಾರೆ ಎಂದು ಪವನ್ ಕುಮಾರ್ ತಿಳಿಸಿದ್ದಾರೆ.
Bantwal MLA Rajesh Naik has escaped a near fatal road accident in Bajpe police station limits on Sunday, January 14, in the afternoon. The legislator has suffered injuries in both of his knees and is undergoing treatment.
02-02-25 02:31 pm
Bangalore Correspondent
Mla BR Patil resigns: ಸಿಎಂ ರಾಜಕೀಯ ಸಲಹೆಗಾರ ಹುದ...
02-02-25 01:43 pm
ಆಂಧ್ರ, ಬಿಹಾರಕ್ಕೆ ಒತ್ತು ಕೊಟ್ಟಿದ್ದಾರೆ, ಕರ್ನಾಟಕಕ...
01-02-25 05:12 pm
ಕಾಂಗ್ರೆಸ್ ನಿಂದ ಬಿಜೆಪಿ ಹೋದವರಿಗೆ ಅಲ್ಲಿ ಯಾವ ಸ್ಥಾ...
31-01-25 10:10 pm
Sriramulu, BJP, B. Y. Vijayendra: ವಿಜಯೇಂದ್ರ ಸ...
31-01-25 08:03 pm
01-02-25 09:51 pm
HK News Desk
ಎರ್ನಾಕುಲಂ ಜಿಲ್ಲೆಯಲ್ಲಿ ಒಂದೇ ದಿನ 27 ಬಾಂಗ್ಲಾ ದೇಶ...
01-02-25 09:35 pm
2025ರ ಕೇಂದ್ರ ಬಜೆಟ್ ಗುಂಡಿನ ಗಾಯಕ್ಕೆ ಹಾಕಿದ ಬ್ಯಾಂ...
01-02-25 05:51 pm
ಕೇಂದ್ರ ಬಜೆಟ್ ಮಂಡನೆ ; ಕೃಷಿಕರು, ಮಧ್ಯಮ ವರ್ಗಕ್ಕೆ...
01-02-25 02:10 pm
Sonia Gandhi, president Murmu: ರಾಷ್ಟ್ರಪತಿ ಬಗ್...
31-01-25 09:10 pm
02-02-25 09:49 pm
Mangalore Correspondent
Kotekar Bank Robbery, Shashi Tevar, update: ಬ...
02-02-25 05:02 pm
Air India Express, Mangalore Delhi flight: ಮಂ...
01-02-25 07:47 pm
Kotekar Bank Robbery, Murgan D Devar: ಕೋಟೆಕಾರ...
01-02-25 02:32 pm
Mangalore builder Jitendra Kottary, prasanna...
31-01-25 11:05 pm
02-02-25 09:00 pm
Bangalore Correspondent
Mangalore Crime, Bantwal Toll, Kodikere Gang:...
01-02-25 10:11 pm
Attack on Bus, Hassan, Crime: ಬೆಂಗಳೂರಿನಿಂದ ಮಂ...
31-01-25 10:22 am
Mangalore court, Rape, Crime: 15 ವರ್ಷದ ಬಾಲಕಿ...
30-01-25 11:37 am
Ankola, Mangalore Car, Cash, Crime: ಅಂಕೋಲಾದಲ್...
29-01-25 04:12 pm