ಬ್ರೇಕಿಂಗ್ ನ್ಯೂಸ್
15-01-24 01:10 pm Mangalore Correspondent ಕರಾವಳಿ
ಮಂಗಳೂರು, ಜ.15: ಖಾಸಗಿ ಬಸ್ಸಿನಲ್ಲಿ ತಾಯಿ ಮಗಳು ತೆರಳುತ್ತಿದ್ದಾಗ ಬಸ್ ಚಾಲಕ ಹಠಾತ್ ಬ್ರೇಕ್ ಹಾಕಿದ್ದರಿಂದ 65 ವರ್ಷದ ತಾಯಿ ಬಸ್ಸಿನಿಂದ ಹೊರಕ್ಕೆ ಬಿದ್ದು ಚಕ್ರದಡಿಗೆ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಸುರತ್ಕಲ್ ಬಳಿಯ ಜೋಕಟ್ಟೆಯಲ್ಲಿ ನಡೆದಿದೆ.
ಉತ್ತರ ಕರ್ನಾಟಕ ಮೂಲದ ಕೂಲಿ ಕಾರ್ಮಿಕ ಮಹಿಳೆ ಈರಮ್ಮ (65) ಮೃತರು. ಇವರು ತನ್ನ ಮಗಳ ಜೊತೆಗೆ ಬೆಳಗ್ಗೆ ಹತ್ತು ಗಂಟೆ ಸುಮಾರಿಗೆ ಖಾಸಗಿ ಬಸ್ಸಿನಲ್ಲಿ ತೆರಳುತ್ತಿದ್ದರು. ಬಸ್ ಜೋಕಟ್ಟೆ ಕ್ರಾಸ್ ತಲುಪಿದಾಗ ಚಾಲಕ ಹಠಾತ್ ಬ್ರೇಕ್ ಹಾಕಿದ್ದು ಡ್ರೈವರ್ ಹಿಂಬದಿ ಸೀಟಿನಲ್ಲಿದ್ದ ಈರಮ್ಮ ಮುಂದಕ್ಕೆ ಬಿದ್ದು ಬಸ್ಸಿನಿಂದ ಹೊರಕ್ಕೆ ಬಿದ್ದಿದ್ದಾರೆ.
ಬಸ್ಸಿನಿಂದ ಹೊರಕ್ಕೆ ಬಿದ್ದ ಈರಮ್ಮ ತಲೆಯ ಮೇಲಿನಿಂದಲೇ ಬಸ್ಸಿನ ಚಕ್ರ ಸಾಗಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆ ಬಗ್ಗೆ ಸಂಚಾರಿ ಉತ್ತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಾಲಕನ ವಿರುದ್ಧ 304 ಎ ಮತ್ತು 279 ಅಡಿ ಕೇಸು ದಾಖಲಿಸಿ, ಬಂಧನ ಮಾಡಲಾಗಿದೆ. ಸ್ಟೇಟ್ ಬ್ಯಾಂಕ್ - ಜೋಕಟ್ಟೆ ನಡುವೆ ಸಾಗುತ್ತಿದ್ದ ಖಾಸಗಿ ಬಸ್ಸನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
Mangalore accident, woman killed in bus accident at Surathkal.Eramma, seated on the front seat next to the driver, was traveling with her daughter. The bus driver, identified as Anil John Lobo, abruptly applied the brakes at the service station near Jokatte Cross. The sudden stop resulted in Eramma falling from the bus.
07-08-26 10:42 pm
HK News Desk
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
ತಂದೆಯನ್ನು ವೃದ್ಧಾಶ್ರಮಕ್ಕೆ ಸೇರಿಸಿ ಸಾವಿಗೂ ಬಾರದ ಪ...
06-08-26 03:49 pm
ಕಲಬುರಗಿಯಲ್ಲಿ SIR ಪರಿಷ್ಕರಣೆ ಶಾಕ್ ; 5.36 ಲಕ್ಷ...
06-08-26 02:19 pm
'ಮಂತ್ರಿ ಸ್ಥಾನಕ್ಕೆ ಕೋಟಿ ಕೋಟಿ ಡೀಲ್?' ಮಾಜಿ ಸಚಿವರ...
05-08-26 10:56 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
07-08-26 10:13 pm
HK News Desk
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
BC Road Accident, Mangalore: ಬಿಸಿ ರೋಡ್ ಬಳಿ ಟಿ...
06-08-26 11:03 pm
ಅಯೋಧ್ಯೆ ಕಾಣಿಕೆ ಹಣ ಕಳವು ತೀವ್ರ ಆಘಾತಕಾರಿ, ಯಾವುದೇ...
06-08-26 10:22 pm
ಹಿಂದೂ ದೇವಸ್ಥಾನಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ...
06-08-26 09:33 pm
07-08-26 10:37 pm
HK News Desk
ಮುಡಿಪು ಬಳಿ ಹಾಡಹಗಲೇ ಒಂಟಿ ವೃದ್ಧೆಯ ಮೇಲೆ ಹಲ್ಲೆ ನಡ...
07-08-26 09:23 pm
ಉಡುಪಿಯ ಯುವ ಮಾಡೆಲ್ ಮನೆಯಲ್ಲೇ ಆತ್ಮಹತ್ಯೆ ; ಖಾಸಗಿ...
07-08-26 08:44 pm
Udupi Murder, David Dsouza: ಕುಂದಾಪುರ ಶೂಟೌಟ್ ಮ...
07-08-26 06:00 pm
ಬಟ್ಟೆ ವಿಚಾರಕ್ಕೆ ಸಹೋದರಿಯರ ಸಣ್ಣ ಜಗಳ; ತಾಯಿ ಬೈದಿದ...
07-08-26 04:22 pm