ಬ್ರೇಕಿಂಗ್ ನ್ಯೂಸ್
16-01-24 03:09 pm Mangalore Correspondent ಕರಾವಳಿ
ಬೆಳ್ತಂಗಡಿ, ಜ.16: ಮಗ ಆತ್ಮಹತ್ಯೆ ಮಾಡಿಕೊಂಡ 13 ದಿನಕ್ಕೆ ತಂದೆಯೂ ಆತ್ಮಹತ್ಯೆಗೆ ಶರಣಾದ ಘಟನೆ ಉಜಿರೆಯಲ್ಲಿ ನಡೆದಿದೆ. ಉಜಿರೆ ಗ್ರಾಮದ ಪೆರ್ಲ ನಿವಾಸಿ ಯೊಗೀಶ್ ಪೂಜಾರಿ (41) ಆತ್ಮಹತ್ಯೆ ಮಾಡಿಕೊಂಡವರು.
ಜ.4 ರಂದು ಎಂಟನೇ ತರಗತಿ ಓದುತ್ತಿದ್ದ ಮಗ ಯಕ್ಷಿತ್ (14) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದ. ಮಗನ ಉತ್ತರ ಕ್ರಿಯೆ ಜ.14ರಂದು ಭಾನುವಾರ ನಡೆದಿತ್ತು. ಯೋಗಿಶ್ ಪೂಜಾರಿ ಮತ್ತು ರೇಷ್ಮಾ ದಂಪತಿಯ ಪುತ್ರ ಯಕ್ಷಿತ್ (14) ಸಾವಿಗೆ ತಮ್ಮನ ಜೊತೆಗಿನ ಕ್ಷುಲ್ಲಕ ಜಗಳ ಕಾರಣ ಎನ್ನಲಾಗಿತ್ತು.
ಆರು ವರ್ಷದ ತಮ್ಮನ ಜೊತೆ ಪದೇ ಪದೇ ಗಲಾಟೆ ನಡೆದಿತ್ತು. ಈ ಸಲ ಗಲಾಟೆಯಲ್ಲಿ ತಮ್ಮ ಅಣ್ಣನ ಹೊಟ್ಟೆ ಮೇಲೆ ಕಚ್ಚಿ ಗಾಯ ಮಾಡಿದ್ದ. ಇದೇ ವಿಚಾರದಲ್ಲಿ ನೊಂದು ತಮ್ಮನ ಎದುರೇ ಯಕ್ಷಿತ್ ಆತ್ಮಹತ್ಯೆ ಮಾಡಿಕೊಂಡಿದ್ದ ಎನ್ನಲಾಗುತ್ತಿದೆ. ಯಕ್ಷಿತ್ ಉಜಿರೆ ಖಾಸಗಿ ಶಾಲೆಯಲ್ಲಿ 8ನೇ ತರಗತಿಯಲ್ಲಿ ಕಲಿಯುತ್ತಿದ್ದ.
ಮನೆಯ ಕೊಠಡಿಯಲ್ಲೇ ತಾಯಿಯ ಸೀರೆಯನ್ನು ಬಿಗಿದುಕೊಂಡು ನೇಣಿಗೆ ಶರಣಾಗಿದ್ದ. ತಂದೆ -ತಾಯಿ ಕೆಲಸಕ್ಕೆ ಹೋದ ಬಳಿಕ ಬಾಲಕ ದುರಂತ ಸಾವಿಗೀಡಾಗಿದ್ದು ಉಜಿರೆಯ ಜನರ ಮನ ಕಲಕಿತ್ತು. ಬೆಳ್ತಂಗಡಿ ಪೊಲೀಸರು ಸ್ಥಳ ಪರಿಶೀಲಿಸಿ ಆತ್ಮಹತ್ಯೆ ಪ್ರಕರಣ ದಾಖಲಿಸಿದ್ದರು. ಇದೀಗ ಮಗನ ಉತ್ತರ ಕ್ರಿಯೆ ನಡೆದು ಎರಡೇ ದಿನದಲ್ಲಿ ತಂದೆಯೂ ಸಾವಿಗೆ ಶರಣಾಗಿದ್ದಾರೆ.
41 year old father commits suicide after his 13 year old committed suicide at Belthangady.
07-08-26 10:42 pm
HK News Desk
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
ತಂದೆಯನ್ನು ವೃದ್ಧಾಶ್ರಮಕ್ಕೆ ಸೇರಿಸಿ ಸಾವಿಗೂ ಬಾರದ ಪ...
06-08-26 03:49 pm
ಕಲಬುರಗಿಯಲ್ಲಿ SIR ಪರಿಷ್ಕರಣೆ ಶಾಕ್ ; 5.36 ಲಕ್ಷ...
06-08-26 02:19 pm
'ಮಂತ್ರಿ ಸ್ಥಾನಕ್ಕೆ ಕೋಟಿ ಕೋಟಿ ಡೀಲ್?' ಮಾಜಿ ಸಚಿವರ...
05-08-26 10:56 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
07-08-26 10:13 pm
HK News Desk
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
BC Road Accident, Mangalore: ಬಿಸಿ ರೋಡ್ ಬಳಿ ಟಿ...
06-08-26 11:03 pm
ಅಯೋಧ್ಯೆ ಕಾಣಿಕೆ ಹಣ ಕಳವು ತೀವ್ರ ಆಘಾತಕಾರಿ, ಯಾವುದೇ...
06-08-26 10:22 pm
ಹಿಂದೂ ದೇವಸ್ಥಾನಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ...
06-08-26 09:33 pm
07-08-26 10:37 pm
HK News Desk
ಮುಡಿಪು ಬಳಿ ಹಾಡಹಗಲೇ ಒಂಟಿ ವೃದ್ಧೆಯ ಮೇಲೆ ಹಲ್ಲೆ ನಡ...
07-08-26 09:23 pm
ಉಡುಪಿಯ ಯುವ ಮಾಡೆಲ್ ಮನೆಯಲ್ಲೇ ಆತ್ಮಹತ್ಯೆ ; ಖಾಸಗಿ...
07-08-26 08:44 pm
Udupi Murder, David Dsouza: ಕುಂದಾಪುರ ಶೂಟೌಟ್ ಮ...
07-08-26 06:00 pm
ಬಟ್ಟೆ ವಿಚಾರಕ್ಕೆ ಸಹೋದರಿಯರ ಸಣ್ಣ ಜಗಳ; ತಾಯಿ ಬೈದಿದ...
07-08-26 04:22 pm