ಬ್ರೇಕಿಂಗ್ ನ್ಯೂಸ್
16-01-24 03:09 pm Mangalore Correspondent ಕರಾವಳಿ
ಬೆಳ್ತಂಗಡಿ, ಜ.16: ಮಗ ಆತ್ಮಹತ್ಯೆ ಮಾಡಿಕೊಂಡ 13 ದಿನಕ್ಕೆ ತಂದೆಯೂ ಆತ್ಮಹತ್ಯೆಗೆ ಶರಣಾದ ಘಟನೆ ಉಜಿರೆಯಲ್ಲಿ ನಡೆದಿದೆ. ಉಜಿರೆ ಗ್ರಾಮದ ಪೆರ್ಲ ನಿವಾಸಿ ಯೊಗೀಶ್ ಪೂಜಾರಿ (41) ಆತ್ಮಹತ್ಯೆ ಮಾಡಿಕೊಂಡವರು.
ಜ.4 ರಂದು ಎಂಟನೇ ತರಗತಿ ಓದುತ್ತಿದ್ದ ಮಗ ಯಕ್ಷಿತ್ (14) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದ. ಮಗನ ಉತ್ತರ ಕ್ರಿಯೆ ಜ.14ರಂದು ಭಾನುವಾರ ನಡೆದಿತ್ತು. ಯೋಗಿಶ್ ಪೂಜಾರಿ ಮತ್ತು ರೇಷ್ಮಾ ದಂಪತಿಯ ಪುತ್ರ ಯಕ್ಷಿತ್ (14) ಸಾವಿಗೆ ತಮ್ಮನ ಜೊತೆಗಿನ ಕ್ಷುಲ್ಲಕ ಜಗಳ ಕಾರಣ ಎನ್ನಲಾಗಿತ್ತು.
ಆರು ವರ್ಷದ ತಮ್ಮನ ಜೊತೆ ಪದೇ ಪದೇ ಗಲಾಟೆ ನಡೆದಿತ್ತು. ಈ ಸಲ ಗಲಾಟೆಯಲ್ಲಿ ತಮ್ಮ ಅಣ್ಣನ ಹೊಟ್ಟೆ ಮೇಲೆ ಕಚ್ಚಿ ಗಾಯ ಮಾಡಿದ್ದ. ಇದೇ ವಿಚಾರದಲ್ಲಿ ನೊಂದು ತಮ್ಮನ ಎದುರೇ ಯಕ್ಷಿತ್ ಆತ್ಮಹತ್ಯೆ ಮಾಡಿಕೊಂಡಿದ್ದ ಎನ್ನಲಾಗುತ್ತಿದೆ. ಯಕ್ಷಿತ್ ಉಜಿರೆ ಖಾಸಗಿ ಶಾಲೆಯಲ್ಲಿ 8ನೇ ತರಗತಿಯಲ್ಲಿ ಕಲಿಯುತ್ತಿದ್ದ.
ಮನೆಯ ಕೊಠಡಿಯಲ್ಲೇ ತಾಯಿಯ ಸೀರೆಯನ್ನು ಬಿಗಿದುಕೊಂಡು ನೇಣಿಗೆ ಶರಣಾಗಿದ್ದ. ತಂದೆ -ತಾಯಿ ಕೆಲಸಕ್ಕೆ ಹೋದ ಬಳಿಕ ಬಾಲಕ ದುರಂತ ಸಾವಿಗೀಡಾಗಿದ್ದು ಉಜಿರೆಯ ಜನರ ಮನ ಕಲಕಿತ್ತು. ಬೆಳ್ತಂಗಡಿ ಪೊಲೀಸರು ಸ್ಥಳ ಪರಿಶೀಲಿಸಿ ಆತ್ಮಹತ್ಯೆ ಪ್ರಕರಣ ದಾಖಲಿಸಿದ್ದರು. ಇದೀಗ ಮಗನ ಉತ್ತರ ಕ್ರಿಯೆ ನಡೆದು ಎರಡೇ ದಿನದಲ್ಲಿ ತಂದೆಯೂ ಸಾವಿಗೆ ಶರಣಾಗಿದ್ದಾರೆ.
41 year old father commits suicide after his 13 year old committed suicide at Belthangady.
18-12-25 12:37 pm
HK News Desk
ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು ; ಸದನಕ್ಕ...
17-12-25 10:30 pm
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
18-12-25 10:52 am
Mangalore Correspondent
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm