ಬ್ರೇಕಿಂಗ್ ನ್ಯೂಸ್
16-01-24 09:36 pm Mangalore Correspondent ಕರಾವಳಿ
ಮಂಗಳೂರು, ಜ.16: ರೇಶನ್ ಕಾರ್ಡ್ ಸಿಕ್ಕಿಲ್ಲವೆಂದು ಆಕ್ರೋಶಗೊಂಡ ವ್ಯಕ್ತಿಯೊಬ್ಬ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಅವಹೇಳನಕಾರಿ ವಿಡಿಯೋ ಮಾಡಿ ಜಾಲತಾಣದಲ್ಲಿ ಹರಿಯಬಿಟ್ಟ ಘಟನೆ ನಡೆದಿದೆ. ಈ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆಶಿಯನ್ನು ಅವಾಚ್ಯವಾಗಿ ನಿಂದಿಸಿ ವಿಡಿಯೋ ಮಾಡಲಾಗಿತ್ತು. ರೇಶನ್ ಕಾರ್ಡ್ ಸಿಗುತ್ತಿಲ್ಲ. ಬಿಪಿಎಲ್ ರೇಶನ್ ಕಾರ್ಡ್ ಪಡೆಯಲು ವ್ಯವಸ್ಥೆ ಮಾಡಿ. ನಿಮ್ಮ ಹತ್ತು ಕೇಜಿ ಉಚಿತ ಅಕ್ಕಿ ಬೇಕಾಗಿಲ್ಲ. ನಮಗೆ ದುಡಿದು ತಿನ್ನಲು ಶರೀರ ಗಟ್ಟಿಯಿದೆ. ರೇಶನ್ ಕಾರ್ಡ್ ವ್ಯವಸ್ಥೆ ಮಾಡಲಾಗದ ನಿಮ್ಮ ಸರ್ಕಾರವೆಂದು ಇಬ್ಬರನ್ನೂ ಅವಾಚ್ಯವಾಗಿ ನಿಂದಿಸಿ ವಿಡಿಯೋ ಮಾಡಿದ್ದ. ವಿಡಿಯೋ ವೈರಲ್ ಆಗುತ್ತಿದ್ದಂತೆ ಎನ್ಎಸ್ ಯುಐ ಜಿಲ್ಲಾಧ್ಯಕ್ಷ ಸುಹಾನ್ ಆಳ್ವ ಮಂಗಳೂರು ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದರು.

ಸುರತ್ಕಲ್ ಠಾಣೆಯಲ್ಲಿ ದೂರು ಸ್ವೀಕರಿಸಿದ ಪೊಲೀಸರು ಆರೋಪಿ ಅನಿಲ್ ಕುಮಾರ್ (34)ನನ್ನು ಬಂಧಿಸಿದ್ದಾರೆ. ಅನಿಲ್ ಮೂಲತಃ ಶಿರಸಿ ನಿವಾಸಿಯಾಗಿದ್ದು, 12 ವರ್ಷಗಳಿಂದ ಸುರತ್ಕಲ್ ಬಳಿ ಬಾಡಿಗೆ ಮನೆಯೊಂದರಲ್ಲಿ ಕುಟುಂಬದ ಜೊತೆಗೆ ವಾಸವಿದ್ದಾನೆ. ಸರ್ಕಾರಿ ಸೌಲಭ್ಯ ಪಡೆಯಲು ರೇಶನ್ ಕಾರ್ಡ್ ಪಡೆಯುವುದಕ್ಕಾಗಿ ಅಲೆದಾಡಿದ್ದ. ಸರ್ವರ್ ಸಮಸ್ಯೆಯಿಂದ ರೇಶನ್ ಕಾರ್ಡ್ ಸಿಗದೆ ಹತಾಶೆಗೊಂಡು ವಿಡಿಯೋ ಮಾಡಿದ್ದ ಎಂದು ಪೊಲೀಸರ ತನಿಖೆಯಲ್ಲಿ ತಿಳಿದುಬಂದಿದೆ. ಆರೋಪಿ ವಿರುದ್ಧ 153ಎ, 505, 504 ಸೆಕ್ಷನ್ ಅಡಿ ಕೇಸು ದಾಖಲು ಮಾಡಲಾಗಿದೆ.
Mangalore Surathkal man arrested for talking derogatory words against cm Siddaramaiah and Dk Shivakumar. The arrested has been identified as Anil Kumar. The arrest was made after Suhan Alva from congress filed a police complaint.
13-02-26 10:41 am
HK News Desk
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
12-02-26 10:51 pm
HK News Desk
ನಕಲಿ ಷೇರು ಹೂಡಿಕೆ ಆ್ಯಪ್ ಹೆಸರಲ್ಲಿ ದುಪ್ಪಟ್ಟು ಲಾಭ...
12-02-26 09:31 pm
ಅಮೆರಿಕದಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ...
12-02-26 09:19 pm
260 ಜನರನ್ನು ಬಲಿ ಪಡೆದ ಅಹಮದಾಬಾದ್ ವಿಮಾನ ಪತನ ; ಇಂ...
12-02-26 01:40 pm
ಡಿಕೆ - ಸಿದ್ದು ಪವರ್ ಫೈಟ್ ; ‘ರಾಜಕಾರಣ ಮಾಡೋಕೆ ಬಂದ...
12-02-26 01:09 pm
13-02-26 01:28 pm
Mangalore Correspondent
ಶಾಲಾ ಮಕ್ಕಳನ್ನು ಟಿಪ್ಪರ್ ನಲ್ಲಿ ತುಂಬಿಸಿ ಅಧ್ಯಯನ ಪ...
13-02-26 01:06 am
ಮೋದಿ ಹೆಸರಲ್ಲಿ ಹತ್ತು ನಮೋ ಕುಟೀರ ನಿರ್ಮಾಣ ಯೋಜನೆ ;...
12-02-26 10:36 pm
ಲವ್ ಜಿಹಾದ್ ಆರೋಪ ; ಸುರತ್ಕಲ್ ಲೇಡಿಸ್ ಪಿಜಿಯಲ್ಲಿ ಹ...
12-02-26 05:55 pm
ಕೈಗಾರಿಕೆಗಳ ಮಾಲಿನ್ಯ ತಡೆಯಲು ಅಧಿಕಾರಿಗಳು ವಿಫಲ ; ವ...
12-02-26 04:05 pm
13-02-26 11:52 am
HK News Desk
ರೌಡಿ ಶೀಟರ್ ಬಿಕ್ಲು ಶಿವ ಕೊಲೆ ; ಕೊನೆಗೂ ಭೈರತಿ ಬ...
13-02-26 12:54 am
ವಿಷದ ಲಡ್ಡು ತಿನ್ನಿಸಿ 6 ಜನರ ಹತ್ಯೆ ; ದೆಹಲಿಯಲ್ಲಿ...
12-02-26 02:34 pm
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm
ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಬೆಲೆಯ ಜಮೀನು ಗುಳು...
11-02-26 09:10 pm