ಬ್ರೇಕಿಂಗ್ ನ್ಯೂಸ್
16-01-24 10:39 pm Mangalore Correspondent ಕರಾವಳಿ
ಮಂಗಳೂರು, ಜ.16: ಕುಕ್ಕರ್ ಬಾಂಬ್ ಪ್ರಕರಣದಲ್ಲಿ ಸಂತ್ರಸ್ತರಾಗಿದ್ದ ಆಟೋ ಚಾಲಕ ಪುರುಷೋತ್ತಮ ಪೂಜಾರಿ ಅವರಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಎರಡು ಲಕ್ಷ ರೂಪಾಯಿ ನೀಡಲಾಗಿದೆ. ಜ.1ರಂದು ಸಿಎಂ ಪರಿಹಾರ ನಿಧಿಯಿಂದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಖಾತೆಗೆ ಎರಡು ಲಕ್ಷ ರೂ. ಬಿಡುಗಡೆ ಮಾಡಲಾಗಿತ್ತು. ಪರಿಹಾರ ಮೊತ್ತದ ಚೆಕ್ಕನ್ನು ಮಾಜಿ ಎಂಎಲ್ಸಿ ಐವಾನ್ ಡಿಸೋಜ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪುರುಷೋತ್ತಮ ಪೂಜಾರಿಗೆ ನೀಡಲಾಗಿದೆ.
ಆದರೆ ಈ ಕುರಿತು ರಾಜ್ಯ ಸರಕಾರದ ಮುಖ್ಯಮಂತ್ರಿ ಪರಿಹಾರ ನಿಧಿ ಶಾಖೆಯಿಂದ ಸಿಎಂ ಜಂಟಿ ಕಾರ್ಯದರ್ಶಿ ಪಿ.. ಗೋಪಾಲ್ ಹೊರಡಿಸಿದ್ದ ಆದೇಶ ಪತ್ರದಲ್ಲಿ ಕುಕ್ಕರ್ ಬಾಂಬ್ ಪ್ರಕರಣವನ್ನು ಯಾವುದೋ ಮಾಮೂಲಿ ಘಟನೆ ಎನ್ನುವಂತೆ ಉಲ್ಲೇಖಿಸಿದ್ದಾರೆ. ಆದೇಶ ಪತ್ರದಲ್ಲಿ ಪುರುಷೋತ್ತಮ ಪೂಜಾರಿ ಮಂಗಳೂರಿನಲ್ಲಿ ಆಟೋ ಚಾಲಕರಾಗಿ ಜೀವನ ನಡೆಸುತ್ತಿದ್ದು, ಒಮ್ಮೆ ಆಟೋದಲ್ಲಿ ಪ್ರಯಾಣಿಕರೊಬ್ಬರು ಹಿಡಿದುಕೊಂಡಿದ್ದ ಕುಕ್ಕರ್ ಸಿಡಿದು ಆಟೋ ರಿಕ್ಷಾ ನಜ್ಜುಗುಜ್ಜಾಗಿದ್ದಲ್ಲದೆ, ಸದರಿಯವರು ತೀವ್ರ ಸುಟ್ಟ ಗಾಯಕ್ಕೆ ಒಳಗಾಗಿದ್ದರು ಎಂದು ಉಲ್ಲೇಖ ಮಾಡಲಾಗಿದೆ.


ಪುರುಷೋತ್ತಮ ಪೂಜಾರಿ ಅವರಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ನೆರವು ನೀಡುವಂತೆ ಐವಾನ್ ಡಿಸೋಜ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದ್ದರು. ಅದನ್ನು ಪರಿಗಣಿಸಿ ಸಿದ್ದರಾಮಯ್ಯ ಎರಡು ಲಕ್ಷ ಪರಿಹಾರ ನೀಡುವಂತೆ ಆದೇಶ ಮಾಡಿದ್ದಾಗಿ ಹೇಳಿರುವುದಲ್ಲದೆ, ಈ ಮೊತ್ತವನ್ನು ಜ.1ರಂದು ಜಿಲ್ಲಾಧಿಕಾರಿ ಖಾತೆಗೆ ಬಿಡುಗಡೆ ಮಾಡಿದ್ದಾಗಿ ಪರಿಹಾರ ನಿಧಿ ವಿಭಾಗದ ಅಧಿಕಾರಿ ಆದೇಶ ಪತ್ರದಲ್ಲಿ ತಿಳಿಸಿದ್ದರು. ಕುಕ್ಕರ್ ನಲ್ಲಿ ಬಾಂಬ್ ಹಿಡಿದುಕೊಂಡು ಬಂದಿದ್ದ ಮೊಹಮ್ಮದ್ ಶಾರೀಕ್ ಭಯೋತ್ಪಾದಕ ಕೃತ್ಯ ಎಸಗುವುದಕ್ಕಾಗಿಯೇ ತರುತ್ತಿದ್ದೆ ಎಂದು ಒಪ್ಪಿಕೊಂಡಿದ್ದಲ್ಲದೆ, ಘಟನೆ ಬಗ್ಗೆ ಎನ್ಐಎ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿಯನ್ನೂ ಸಲ್ಲಿಸಿದೆ. ಹೀಗಿದ್ದರೂ, ಕುಕ್ಕರ್ ಬಾಂಬ್ ಎಂದು ಒಪ್ಪಿಕೊಳ್ಳದೆ ಅದು ಮಾಮೂಲಿ ಅನ್ನುವಂತೆ ಕುಕ್ಕರ್ ಸಿಡಿದ ಘಟನೆ ಎಂಬಂತೆ ರಾಜ್ಯ ಸರಕಾರ ಆದೇಶ ಪತ್ರದಲ್ಲಿ ಉಲ್ಲೇಖಿಸಿದೆ.
ಈ ಹಿಂದೆ ಬಿಜೆಪಿ ಸರಕಾರ ಇದ್ದಾಗ ಪರಿಹಾರ ಕೊಡಿಸುವುದಾಗಿ ನಾಯಕರು ಹಲವು ಬಾರಿ ಪುರುಷೋತ್ತಮ ಪೂಜಾರಿ ಮನೆಗೆ ಭೇಟಿ ನೀಡಿದ್ದರೂ ಸರಕಾರದಿಂದ ಪರಿಹಾರ ಮೊತ್ತ ಲಭಿಸಿರಲಿಲ್ಲ. ಶಾಸಕ ವೇದವ್ಯಾಸ ಕಾಮತ್ ತನ್ನದೇ ದುಡ್ಡಿನಲ್ಲಿ ಹೊಸತಾಗಿ ಆಟೋ ರಿಕ್ಷಾ ಒದಗಿಸಿದ್ದರೆ, ಬಿಜೆಪಿ ಪಕ್ಷದ ವತಿಯಿಂದ ಐದು ಲಕ್ಷ ರೂ. ನೆರವು ನೀಡಲಾಗಿತ್ತು. ಸರಕಾರದಿಂದ ಪರಿಹಾರ ಮೊತ್ತ ಸಿಕ್ಕಿರಲಿಲ್ಲ. ಅಲ್ಲದೆ, ಚಿಕಿತ್ಸಾ ವೆಚ್ಚವನ್ನೂ ನೀಡಿರಲಿಲ್ಲ. ಈ ಬಗ್ಗೆ ಪುರುಷೋತ್ತಮ ಪೂಜಾರಿ ಕುಟುಂಬ ನೋವು ಹೊಂದಿತ್ತು.
Cooker Bomb in Mangalore, 2 lakhs compensation to Auto driver Purushotham, normal cooker blast says order copy.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am