ಬ್ರೇಕಿಂಗ್ ನ್ಯೂಸ್
16-01-24 10:51 pm Mangalore Correspondent ಕರಾವಳಿ
ಮಂಗಳೂರು, ಜ.16: ಈ ಬಾರಿಯ ಮಂಗಳೂರು ಲಿಟ್ ಫೆಸ್ಟ್ 19ರಿಂದ 21ರ ವರೆಗೆ ನಗರದ ಟಿಎಂಎ ಪೈ ಕನ್ವೆನ್ಶನ್ ಹಾಲ್ ನಲ್ಲಿ ನಡೆಯಲಿದ್ದು, ಇದರ ಪ್ರಚಾರಾರ್ಥ ಸಹ್ಯಾದ್ರಿ ಕಾಲೇಜಿನ ಎಂಬಿಎ ವಿದ್ಯಾರ್ಥಿಗಳು ಬೀದಿ ನಾಟಕ ಪ್ರದರ್ಶನ ಮಾಡಿದ್ದಾರೆ.
ಮಂಗಳೂರು ಸಾಹಿತ್ಯ ಹಬ್ಬ ಎನ್ನುವ ಹೆಸರಲ್ಲಿ 2018ರಲ್ಲಿ ಆರಂಭಗೊಂಡ ಲಿಟ್ ಫೆಸ್ಟ್ ಹಿನ್ನೆಲೆ ಮತ್ತು ಉದ್ದೇಶ ಏನು ಅನ್ನೋದರ ಬಗ್ಗೆ ಸಾಮಾನ್ಯ ಜನರಿಗೆ ತಲುಪಿಸುವುದಕ್ಕಾಗಿ ನಗರದ ಸ್ಟೇಟ್ ಬ್ಯಾಂಕ್ ಬಸ್ ನಿಲ್ದಾಣದಲ್ಲಿ ಬೀದಿ ನಾಟಕ ಹಮ್ಮಿಕೊಂಡಿದ್ದರು. ವಿದ್ಯಾರ್ಥಿಗಳು ತುಳು, ಕನ್ನಡ ಭಾಷೆಯಲ್ಲಿ ಸೇರಿದ್ದ ನೂರಾರು ಮಂದಿಯ ಮನ ಮುಟ್ಟುವಂತೆ ಅಭಿನಯಿಸಿ, ಸಾಹಿತ್ಯ ಹಬ್ಬಕ್ಕೆ ಬರುವಂತೆ ಕರೆಕೊಟ್ಟಿದ್ದಾರೆ.



ರಾಷ್ಟ್ರ ಮಟ್ಟದ ಚಿಂತಕರು, ಬರಹಗಾರರು ಬರಲಿದ್ದು, ಸಾಮಾನ್ಯ ಜನರ ಜೊತೆಗೂ ಸಂವಾದ ನಡೆಸಲಿದ್ದಾರೆ. ಇದಲ್ಲದೆ, ಸಾಹಿತ್ಯ ಅಭಿರುಚಿ ಉಳ್ಳವರನ್ನು ಸೇರಿಸಿ ಹರಟೆ ಹಬ್ಬ ಎನ್ನುವ ಪರಿಕಲ್ಪನೆಯೂ ಇದೆ. 2018ರಲ್ಲಿ ಅದ್ದೂರಿಯಾಗಿ ನಡೆದಿದ್ದ ಲಿಟ್ ಫೆಸ್ಟ್ ಹಬ್ಬವನ್ನು ಸರಸ್ವತಿ ಸಮ್ಮಾನ್ ಪುರಸ್ಕೃತ ಎಸ್.ಎಲ್ ಭೈರಪ್ಪ ಉದ್ಘಾಟಿಸಿದ್ದರು ಅನ್ನುವುದನ್ನು ಹಿಡಿದು ಪ್ರತಿವರ್ಷ ಲಿಟ್ ಫೆಸ್ಟ್ ಗೆ ಬಂದು ಹೋದ ಸಾಹಿತ್ಯ ದಿಗ್ಗಜರ ಹೆಸರು ಸಹಿತ ಲಿಟ್ ಫೆಸ್ಟ್ ನಲ್ಲಿ ಸಾಮಾನ್ಯ ಜನರೂ ಪಾಲ್ಗೊಳ್ಳಬಹುದು. ಭಾರತ್ ಫೌಂಡೇಶನ್ ಸಂಸ್ಥೆಯ ವತಿಯಿಂದ ಈ ಸಾಹಿತ್ಯ ಹಬ್ಬವನ್ನು ಸರಕಾರದ ಸಹಾಯ ಇಲ್ಲದೆ ನಡೆಸಿಕೊಂಡು ಬರಲಾಗುತ್ತಿದೆ ಎಂದು ಬೀದಿ ನಾಟಕದ ಮೂಲಕ ತಿಳಿಸಿದ್ದಾರೆ.
ಜನವರಿ 16 ಮತ್ತು 17ರಂದು ಈ ಬೀದಿ ನಾಟಕ ಮಂಗಳೂರು ನಗರದ ಪ್ರಮುಖ ಪ್ರದೇಶಗಳಲ್ಲಿ ನಡೆಯಲಿದೆ. ಒಟ್ಟು ತಂಡವನ್ನು ಕಲಾವಿದೆ ದಿಶಾ ಶೆಟ್ಟಿ ಮುನ್ನಡೆಸುತ್ತಿದ್ದು, ಬೀದಿ ನಾಟಕದ ನಿರ್ದೇಶನವನ್ನು ಗೋವಿಂದದಾಸ ಕಾಲೇಜಿನ ಕಲ್ಚರಲ್ ಡೈರೆಕ್ಟರ್ ವಿನೋದ್ ಶೆಟ್ಟಿ ಕೃಷ್ಣಾಪುರ ಮಾಡಿದ್ದಾರೆ. ಲಿಟ್ ಫೆಸ್ಟ್ ಪೂರ್ವಭಾವಿಯಾಗಿ ಬೀದಿ ನಾಟಕ ಹಮ್ಮಿಕೊಂಡಿದ್ದು, ಸಾಹಿತ್ಯ ಹಬ್ಬಗಳು ಎಲ್ಲ ವರ್ಗದ ಜನರನ್ನೂ ತಲುಪಬೇಕು ಎನ್ನುವ ದೃಷ್ಟಿ ಇಟ್ಟುಕೊಂಡು ರೂಪಿಸಲಾಗಿದೆ.
The MBA students of Sahyadri College staged a street play to promote this year's Lit Fest to be held at TMA Pai Convention Hall in mangaluru from January 19 to 21.
18-12-25 12:37 pm
HK News Desk
ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು ; ಸದನಕ್ಕ...
17-12-25 10:30 pm
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
18-12-25 10:52 am
Mangalore Correspondent
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm