ಬ್ರೇಕಿಂಗ್ ನ್ಯೂಸ್
17-01-24 06:56 pm Mangalore Correspondent ಕರಾವಳಿ
ಪುತ್ತೂರು, ಜ.17: ಬಿಜೆಪಿ ಮುಖಂಡ, ಕುಂಬ್ರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಪ್ರಕಾಶ್ಚಂದ್ರ ರೈ ಕೈಕಾರ ಅವರ ಪತ್ನಿ ಶುಭಲಕ್ಷ್ಮಿ(50) ಅಸಹಜ ರೀತಿಯಲ್ಲಿ ನೀರಿನ ತೊಟ್ಟಿಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ.
ಒಳಮೊಗ್ರು ಗ್ರಾಮದ ಕೈಕಾರದಲ್ಲಿ ಇವರ ಮನೆಯಿದ್ದು ಬುಧವಾರ ಮಧ್ಯಾಹ್ನ ಮನೆ ಸಮೀಪದ ನೀರಿನ ತೊಟ್ಟಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ಮನೆಯ ಗುಡ್ಡದ ಮೇಲೆ ಮಣ್ಣಿನ ಟ್ಯಾಂಕಿ ನಿರ್ಮಿಸಿದ್ದು ಅದಕ್ಕೆ ಟಾರ್ಪಾಲು ಹಾಕಿ ನೀರು ನಿಲ್ಲಿಸಲಾಗಿತ್ತು. ಬೆಳಗ್ಗೆ ಹನ್ನೊಂದು ಗಂಟೆ ವರೆಗೆ ಪ್ರಕಾಶ್ಚಂದ್ರ ರೈ ಮನೆಯಲ್ಲಿದ್ದು ಆನಂತರ ಹೊರಗೆ ತೆರಳಿದ್ದರು. ಮಧ್ಯಾಹ್ನ ಒಂದೂವರೆ ಗಂಟೆ ವೇಳೆಗೆ ಹೋಗಿ ನೋಡಿದಾಗ ಪತ್ನಿ ಇರಲಿಲ್ಲ. ಹುಡುಕಾಟದ ವೇಳೆ ತೊಟ್ಟಿಯಲ್ಲಿ ಶವ ಪತ್ತೆಯಾಗಿದೆ. ಮಗಳು ಕಾಲೇಜಿಗೆ ಹೋಗಿದ್ದು ಮನೆಯಲ್ಲಿ ಕೆಲಸದವರು ಇದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಕಾಲುಜಾರಿ ನೀರಿನ ತೊಟ್ಟಿಗೆ ಬಿದ್ದಿದ್ದು, ಆ ಸಂದರ್ಭದಲ್ಲಿ ಯಾರೂ ಇಲ್ಲದ ಕಾರಣ ಅಲ್ಲಿಯೇ ಮೃತಪಟ್ಟಿದ್ದಾರೆ ಎಂದು ಪತಿ ಪ್ರಕಾಶ್ಚಂದ್ರ ರೈ ಗ್ರಾಮಾಂತರ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಆತ್ಮಹತ್ಯೆಯೋ, ಘಟನೆ ಹೇಗಾಗಿದೆ ಎನ್ನುವ ಬಗ್ಗೆ ತನಿಖೆ ನಡೆಸುತ್ತೇವೆ ಎಂದು ಸಂಪ್ಯ ಎಸ್ಐ ತಿಳಿಸಿದ್ದಾರೆ. ಮರಣೋತ್ತರ ಪರೀಕ್ಷೆ ಸಂದರ್ಭದಲ್ಲಿ ಆಸ್ಪತ್ರೆಗೆ ಸಂಸದ ನಳಿನ್ ಕುಮಾರ್ ಕಟೀಲ್, ಮಾಜಿ ಶಾಸಕ ಸಂಜೀವ ಮಠಂದೂರು, ಬಿಜೆಪಿ ಮುಖಂಡರಾದ ಗೋಪಾಲಕೃಷ್ಣ ಹೇರಳೆ, ಸಾಜ ರಾಧಾಕೃಷ್ಣ ಆಳ್ವ, ಶಶಿಕುಮಾರ್ ರೈ ಬಾಲ್ಯೊಟ್ಟು ಮತ್ತಿತರರು ಭೇಟಿ ನೀಡಿದ್ದರು.
Mangalore Kumbra society president wife Shublakshmi (50) dies after falling to pond in Puttur.
07-08-26 10:42 pm
HK News Desk
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
ತಂದೆಯನ್ನು ವೃದ್ಧಾಶ್ರಮಕ್ಕೆ ಸೇರಿಸಿ ಸಾವಿಗೂ ಬಾರದ ಪ...
06-08-26 03:49 pm
ಕಲಬುರಗಿಯಲ್ಲಿ SIR ಪರಿಷ್ಕರಣೆ ಶಾಕ್ ; 5.36 ಲಕ್ಷ...
06-08-26 02:19 pm
'ಮಂತ್ರಿ ಸ್ಥಾನಕ್ಕೆ ಕೋಟಿ ಕೋಟಿ ಡೀಲ್?' ಮಾಜಿ ಸಚಿವರ...
05-08-26 10:56 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
07-08-26 10:13 pm
HK News Desk
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
BC Road Accident, Mangalore: ಬಿಸಿ ರೋಡ್ ಬಳಿ ಟಿ...
06-08-26 11:03 pm
ಅಯೋಧ್ಯೆ ಕಾಣಿಕೆ ಹಣ ಕಳವು ತೀವ್ರ ಆಘಾತಕಾರಿ, ಯಾವುದೇ...
06-08-26 10:22 pm
ಹಿಂದೂ ದೇವಸ್ಥಾನಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ...
06-08-26 09:33 pm
07-08-26 10:37 pm
HK News Desk
ಮುಡಿಪು ಬಳಿ ಹಾಡಹಗಲೇ ಒಂಟಿ ವೃದ್ಧೆಯ ಮೇಲೆ ಹಲ್ಲೆ ನಡ...
07-08-26 09:23 pm
ಉಡುಪಿಯ ಯುವ ಮಾಡೆಲ್ ಮನೆಯಲ್ಲೇ ಆತ್ಮಹತ್ಯೆ ; ಖಾಸಗಿ...
07-08-26 08:44 pm
Udupi Murder, David Dsouza: ಕುಂದಾಪುರ ಶೂಟೌಟ್ ಮ...
07-08-26 06:00 pm
ಬಟ್ಟೆ ವಿಚಾರಕ್ಕೆ ಸಹೋದರಿಯರ ಸಣ್ಣ ಜಗಳ; ತಾಯಿ ಬೈದಿದ...
07-08-26 04:22 pm