ಬ್ರೇಕಿಂಗ್ ನ್ಯೂಸ್
17-01-24 06:56 pm Mangalore Correspondent ಕರಾವಳಿ
ಪುತ್ತೂರು, ಜ.17: ಬಿಜೆಪಿ ಮುಖಂಡ, ಕುಂಬ್ರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಪ್ರಕಾಶ್ಚಂದ್ರ ರೈ ಕೈಕಾರ ಅವರ ಪತ್ನಿ ಶುಭಲಕ್ಷ್ಮಿ(50) ಅಸಹಜ ರೀತಿಯಲ್ಲಿ ನೀರಿನ ತೊಟ್ಟಿಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ.
ಒಳಮೊಗ್ರು ಗ್ರಾಮದ ಕೈಕಾರದಲ್ಲಿ ಇವರ ಮನೆಯಿದ್ದು ಬುಧವಾರ ಮಧ್ಯಾಹ್ನ ಮನೆ ಸಮೀಪದ ನೀರಿನ ತೊಟ್ಟಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ಮನೆಯ ಗುಡ್ಡದ ಮೇಲೆ ಮಣ್ಣಿನ ಟ್ಯಾಂಕಿ ನಿರ್ಮಿಸಿದ್ದು ಅದಕ್ಕೆ ಟಾರ್ಪಾಲು ಹಾಕಿ ನೀರು ನಿಲ್ಲಿಸಲಾಗಿತ್ತು. ಬೆಳಗ್ಗೆ ಹನ್ನೊಂದು ಗಂಟೆ ವರೆಗೆ ಪ್ರಕಾಶ್ಚಂದ್ರ ರೈ ಮನೆಯಲ್ಲಿದ್ದು ಆನಂತರ ಹೊರಗೆ ತೆರಳಿದ್ದರು. ಮಧ್ಯಾಹ್ನ ಒಂದೂವರೆ ಗಂಟೆ ವೇಳೆಗೆ ಹೋಗಿ ನೋಡಿದಾಗ ಪತ್ನಿ ಇರಲಿಲ್ಲ. ಹುಡುಕಾಟದ ವೇಳೆ ತೊಟ್ಟಿಯಲ್ಲಿ ಶವ ಪತ್ತೆಯಾಗಿದೆ. ಮಗಳು ಕಾಲೇಜಿಗೆ ಹೋಗಿದ್ದು ಮನೆಯಲ್ಲಿ ಕೆಲಸದವರು ಇದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಕಾಲುಜಾರಿ ನೀರಿನ ತೊಟ್ಟಿಗೆ ಬಿದ್ದಿದ್ದು, ಆ ಸಂದರ್ಭದಲ್ಲಿ ಯಾರೂ ಇಲ್ಲದ ಕಾರಣ ಅಲ್ಲಿಯೇ ಮೃತಪಟ್ಟಿದ್ದಾರೆ ಎಂದು ಪತಿ ಪ್ರಕಾಶ್ಚಂದ್ರ ರೈ ಗ್ರಾಮಾಂತರ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಆತ್ಮಹತ್ಯೆಯೋ, ಘಟನೆ ಹೇಗಾಗಿದೆ ಎನ್ನುವ ಬಗ್ಗೆ ತನಿಖೆ ನಡೆಸುತ್ತೇವೆ ಎಂದು ಸಂಪ್ಯ ಎಸ್ಐ ತಿಳಿಸಿದ್ದಾರೆ. ಮರಣೋತ್ತರ ಪರೀಕ್ಷೆ ಸಂದರ್ಭದಲ್ಲಿ ಆಸ್ಪತ್ರೆಗೆ ಸಂಸದ ನಳಿನ್ ಕುಮಾರ್ ಕಟೀಲ್, ಮಾಜಿ ಶಾಸಕ ಸಂಜೀವ ಮಠಂದೂರು, ಬಿಜೆಪಿ ಮುಖಂಡರಾದ ಗೋಪಾಲಕೃಷ್ಣ ಹೇರಳೆ, ಸಾಜ ರಾಧಾಕೃಷ್ಣ ಆಳ್ವ, ಶಶಿಕುಮಾರ್ ರೈ ಬಾಲ್ಯೊಟ್ಟು ಮತ್ತಿತರರು ಭೇಟಿ ನೀಡಿದ್ದರು.
Mangalore Kumbra society president wife Shublakshmi (50) dies after falling to pond in Puttur.
13-02-26 10:41 am
HK News Desk
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
12-02-26 10:51 pm
HK News Desk
ನಕಲಿ ಷೇರು ಹೂಡಿಕೆ ಆ್ಯಪ್ ಹೆಸರಲ್ಲಿ ದುಪ್ಪಟ್ಟು ಲಾಭ...
12-02-26 09:31 pm
ಅಮೆರಿಕದಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ...
12-02-26 09:19 pm
260 ಜನರನ್ನು ಬಲಿ ಪಡೆದ ಅಹಮದಾಬಾದ್ ವಿಮಾನ ಪತನ ; ಇಂ...
12-02-26 01:40 pm
ಡಿಕೆ - ಸಿದ್ದು ಪವರ್ ಫೈಟ್ ; ‘ರಾಜಕಾರಣ ಮಾಡೋಕೆ ಬಂದ...
12-02-26 01:09 pm
13-02-26 01:28 pm
Mangalore Correspondent
ಶಾಲಾ ಮಕ್ಕಳನ್ನು ಟಿಪ್ಪರ್ ನಲ್ಲಿ ತುಂಬಿಸಿ ಅಧ್ಯಯನ ಪ...
13-02-26 01:06 am
ಮೋದಿ ಹೆಸರಲ್ಲಿ ಹತ್ತು ನಮೋ ಕುಟೀರ ನಿರ್ಮಾಣ ಯೋಜನೆ ;...
12-02-26 10:36 pm
ಲವ್ ಜಿಹಾದ್ ಆರೋಪ ; ಸುರತ್ಕಲ್ ಲೇಡಿಸ್ ಪಿಜಿಯಲ್ಲಿ ಹ...
12-02-26 05:55 pm
ಕೈಗಾರಿಕೆಗಳ ಮಾಲಿನ್ಯ ತಡೆಯಲು ಅಧಿಕಾರಿಗಳು ವಿಫಲ ; ವ...
12-02-26 04:05 pm
13-02-26 11:52 am
HK News Desk
ರೌಡಿ ಶೀಟರ್ ಬಿಕ್ಲು ಶಿವ ಕೊಲೆ ; ಕೊನೆಗೂ ಭೈರತಿ ಬ...
13-02-26 12:54 am
ವಿಷದ ಲಡ್ಡು ತಿನ್ನಿಸಿ 6 ಜನರ ಹತ್ಯೆ ; ದೆಹಲಿಯಲ್ಲಿ...
12-02-26 02:34 pm
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm
ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಬೆಲೆಯ ಜಮೀನು ಗುಳು...
11-02-26 09:10 pm