ಬ್ರೇಕಿಂಗ್ ನ್ಯೂಸ್
17-01-24 09:16 pm Mangalore Correspondent ಕರಾವಳಿ
ಮಂಗಳೂರು, ಜ.17: ಮಂಗಳೂರು ಮಹಾನಗರ ಪಾಲಿಕೆಯ ವಿವಿಧ ಪ್ರದೇಶದ ರಸ್ತೆ ಬದಿಗಳಲ್ಲಿ ಕೆಲವೊಂದು ಜಾಹೀರಾತು ಸಂಸ್ಥೆಯವರು ಹಾಗೂ ಖಾಸಗಿ ವ್ಯಕ್ತಿಗಳು ವಾಣಿಜ್ಯ ಉದ್ದೇಶಗಳಿಗಾಗಿ ಹಾಗೂ ಹಾಗೂ ರಾಜಕೀಯ, ಧಾರ್ಮಿಕ ಮತ್ತು ಕೆಲವೊಂದು ಖಾಸಗಿ ಸಮಾರಂಭಗಳ ನಿಮಿತ್ತ ಅನಧಿಕೃತ ಬ್ಯಾನರ್ಗಳು, ಕಟೌಟ್, ಬಂಟಿಂಗ್ಸ್, ಮತ್ತು ಪ್ಲೆಕ್ಸ್ ಇತ್ಯಾದಿಗಳನ್ನು ವ್ಯಾಪಕವಾಗಿ ಅಳವಡಿಸುತ್ತಿರುವುದು ಕಂಡುಬಂದಿದೆ.
ಪಾದಚಾರಿಗಳಿಗೆ ಮತ್ತು ವಾಹನ ಸವಾರರಿಗೆ ಇದರಿಂದ ತೀವ್ರ ತೊಂದರೆಯಾಗುತ್ತಿದ್ದು, ಅಪಘಾತ ಪ್ರಕರಣಗಳು ಹೆಚ್ಚಾಗುವ ಸಾಧ್ಯತೆಗಳಿರುವುದಲ್ಲದೆ ಸಾರ್ವಜನಿಕ ಸ್ಥಳಗಳನ್ನು ವಿರೂಪಗೊಳಿಸಿದಂತಾಗುತ್ತಿದೆ. ಅಲ್ಲದೇ, ವಿದ್ಯುತ್ ಅವಘಡಗಳು ಉಂಟಾಗಿ ಪ್ರಾಣಹಾನಿ ಸಂಭವಿಸುವ ಸಾಧ್ಯತೆ ಇದೆ. ಕೆಲವೊಂದು ವಿವಾದಾತ್ಮಕ ಮತ್ತು ದ್ವೇಷ ಸಂದೇಶ ಸಾರುವ ಫ್ಲೆಕ್ಸ್ ಗಳನ್ನು ಅಳವಡಿಸುತ್ತಿರುವುದರಿಂದ ಶಾಂತಿ ಸುವ್ಯವಸ್ಥೆಗೆ ದಕ್ಕೆಯಾಗಿ ಅಹಿತಕರ ಘಟನೆಗಳು ಸಂಭವಿಸುವ ಸಾಧ್ಯತೆಗಳ ಬಗ್ಗೆ ಪೊಲೀಸ್ ಇಲಾಖೆಯಿಂದ ಆಕ್ಷೇಪ ವ್ಯಕ್ತವಾಗುತ್ತಿದೆ.
ಆದ್ದರಿಂದ ಎಲ್ಲಾ ರೀತಿಯ ಅನಧಿಕೃತ ಬ್ಯಾನರ್, ಕಟೌಟ್, ಬಂಟಿಂಗ್ ಮತ್ತು ಫ್ಲೆಕ್ಸ್ ಇತ್ಯಾದಿ ಅಳವಡಿಸುತ್ತಿರುವುದನ್ನು ಈ ಕೂಡಲೇ ಸ್ಥಗಿತಗೊಳಿಸಬೇಕು. ಮಹಾನಗರಪಾಲಿಕೆ ಅಧೀನದಲ್ಲಿ ಸರ್ಕಾರಿ ಮತ್ತು ಖಾಸಗಿ ಸ್ಥಳಗಳಲ್ಲಿ ಒಟ್ಟು 1084 ಅಧಿಕೃತ ಜಾಹೀರಾತು ಫಲಕಗಳಿದ್ದು, ಈ ಜಾಹೀರಾತು ಫಲಕಗಳನ್ನು ಬಳಕೆ ಮಾಡಿ ಜಾಹೀರಾತುಗಳನ್ನು ಪ್ರಕಟಿಸುವಂತೆ ಸಾರ್ವಜನಿಕರಿಗೆ ಕೋರಲಾಗಿದೆ.
ಅನಧಿಕೃತ ಪ್ಲೆಕ್ಸ್, ಬ್ಯಾನರ್ ಇತ್ಯಾದಿಗಳನ್ನು ಅಳವಡಿಸಿರುವುದು ಕಂಡುಬಂದಲ್ಲಿ ಸಾರ್ವಜನಿಕ ತೆರೆದ ಸ್ಥಳಗಳ ವಿರೂಪಗೊಳಿಸುವಿಕೆ ಕಾಯ್ದೆ, 1981ರ ಪ್ರಕಾರ ಹಾಗೂ ಅನಧಿಕೃತ ಫಲಕಗಳ ಮೂಲಕ ಯಾವುದಾದರೂ ಶಾರ್ಟ್ ಸರ್ಕಿಟ್ ಅಥವಾ ವಿದ್ಯುತ್ ಅವಘಡಗಳಾಗಿ ಪ್ರಾಣಹಾನಿ ಸಂಭವಿಸಿದಲ್ಲಿ ಸಂಬಂಧಪಟ್ಟ ಸಂಸ್ಥೆ ಅಥವಾ ವ್ಯಕ್ತಿ ಅಥವಾ ಪ್ರಕಟಣೆಗೆ ಕಾರಣರಾದವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಮಹಾನಗರ ಪಾಲಿಕೆ ಆಯುಕ್ತರು ಎಚ್ಚರಿಸಿದ್ದಾರೆ.
Mangalore illegal banner and cutouts, criminal case to be implemented says MCC.
06-04-26 08:51 pm
HK News Staffer
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
06-04-26 06:16 pm
HK News Staffer
ಗಲ್ಫ್ ಯುದ್ಧ ಎಫೆಕ್ಟ್ ; ಇಸ್ರೇಲ್ ಗೆ ಏರ್ ಇಂಡಿಯಾ ವ...
06-04-26 06:09 pm
ಯುಎಇಯಿಂದ ಪಾಕಿಸ್ತಾನಕ್ಕೆ ಬಿಗ್ ಶಾಕ್ ; 2 ಬಿಲಿಯನ್...
05-04-26 12:37 pm
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
06-04-26 07:58 pm
HK News Staffer
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
06-04-26 05:40 pm
HK News Staffer
ಆತ್ಮಹತ್ಯೆ ಮಾಡಿಕೊಂಡ ಪತ್ನಿಯನ್ನು ನೋಡಲು ಆಸ್ಪತ್ರೆಗ...
06-04-26 02:34 pm
ಹಂದಿ ಬೇಟೆಗಾಗಿ ತೋಟದಲ್ಲಿ ಇಟ್ಟಿದ್ದ ನಾಡಬಾಂಬ್ ಸ್ಫೋ...
05-04-26 11:03 am
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm