ಬ್ರೇಕಿಂಗ್ ನ್ಯೂಸ್
18-01-24 11:49 am Mangaluru Correspondent ಕರಾವಳಿ
ಮಂಗಳೂರು, ಜ.18: ಮರಳು ಮಾಫಿಯಾಗಳೊಂದಿಗೆ ಶಾಮೀಲಾಗಿದ್ದಾರೆ ಮತ್ತು ಮೇಲಧಿಕಾರಿಗಳ ಜೊತೆಗೆ ಉಡಾಫೆಯಾಗಿ ವರ್ತಿಸಿದ್ದಾರೆಂದು ಕಂಕನಾಡಿ ನಗರ ಠಾಣೆಯ ಇನ್ಸ್ ಪೆಕ್ಟರ್ ಎಸ್.ಎಚ್. ಭಜಂತ್ರಿ ಅವರನ್ನು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಕರ್ತವ್ಯದಿಂದ ಅಮಾನತು ಮಾಡಿದ್ದಾರೆ.
ಇತ್ತೀಚೆಗೆ ಜಪ್ಪಿನಮೊಗರು ಕಡೆಕಾರಿನಲ್ಲಿ ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದಾಗ ಎಸಿಪಿ ಧನ್ಯಾ ನಾಯಕ್ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿದ್ದರು. ತಲಪಾಡಿ ಗ್ರಾಪಂ ಸದಸ್ಯ, ಕಾಂಗ್ರೆಸ್ ಪುಢಾರಿಗೆ ಸೇರಿದ್ದೆನ್ನಲಾದ ಎಂಟು ಟಿಪ್ಪರ್ ಗಳನ್ನು ಪೊಲೀಸರು ವಶಕ್ಕೆ ಪಡೆದು ಕೇಸು ದಾಖಲಿಸಿದ್ದರು. ಮರಳು ಮತ್ತು ಟಿಪ್ಪರ್ ವಾಹನಗಳನ್ನು ಮುಂದಿನ ತನಿಖೆಗೆ ಗಣಿ ಮತ್ತು ಭೂವಿಜ್ಞಾನ ಇಲಾಖೆಗೆ ಹಸ್ತಾಂತರ ಮಾಡಿದ್ದರು. ಕಂಕನಾಡಿ ನಗರ ಠಾಣೆ ವ್ಯಾಪ್ತಿಯಲ್ಲಿ ವ್ಯಾಪಕ ಮರಳುಗಾರಿಕೆ ನಡೆಯುತ್ತಿದ್ದರಿಂದ ಎಸಿಪಿ ಧನ್ಯಾ ನಾಯಕ್ ಕಾರ್ಯಾಚರಣೆ ನಡೆಸಲು ಸೂಚಿಸಿದ್ದರೂ, ಇನ್ಸ್ ಪೆಕ್ಟರ್ ಭಜಂತ್ರಿ ನಿರ್ಲಕ್ಷ್ಯ ವಹಿಸಿದ್ದರು. ಈ ವೇಳೆ, ಭಜಂತ್ರಿಯವರು ತನ್ನ ಮೇಲಧಿಕಾರಿ ಎಸಿಪಿ ಜೊತೆಗೆ ಉಡಾಫೆಯಿಂದ ಮಾತನಾಡಿದ್ದರು ಎನ್ನಲಾಗಿದೆ.
ಮರಳು ಮಾಫಿಯಾಗಳೊಂದಿಗೆ ಶಾಮೀಲಾಗಿರುವುದು ಮತ್ತು ತನ್ನೊಂದಿಗೆ ಉಡಾಫೆಯಾಗಿ ವರ್ತಿಸಿದ ಬಗ್ಗೆ ಎಸಿಪಿ ಧನ್ಯಾ ನಾಯಕ್, ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಅವರಿಗೆ ವರದಿ ನೀಡಿದ್ದರು. ಇದಲ್ಲದೆ, ಇತ್ತೀಚೆಗೆ ಭಜಂತ್ರಿ ಅವರ ನಿವಾಸದ ಬಳಿಯ ಕೆಲವರು ಪೊಲೀಸ್ ಆಯುಕ್ತರನ್ನು ಭೇಟಿಯಾಗಿ, ತಮ್ಮೊಂದಿಗೆ ದರ್ಪ ತೋರುತ್ತಿದ್ದಾರೆಂದು ಹೇಳಿದ್ದರಂತೆ. ಈ ಬಗ್ಗೆ ಕಮಿಷನರ್ ಪ್ರಶ್ನೆ ಮಾಡಿದಾಗ, ನಾವು ಬದುಕೋದು ಹೇಗೆ ಸ್ವಾಮಿ ಎಂದು ಅವರೊಂದಿಗೂ ಸೋಗಿನ ಮಾತುಗಳನ್ನಾಡಿದ್ದರು ಎನ್ನಲಾಗುತ್ತಿದೆ. ಭಜಂತ್ರಿ ಈ ಹಿಂದೆ ಕಂಕನಾಡಿ ಗ್ರಾಮಾಂತರ ಠಾಣೆಯಲ್ಲಿದ್ದಾಗಲೂ ಮೇಲಧಿಕಾರಿಗಳ ಜೊತೆಗೆ ಉಡಾಫೆಯಿಂದ ವರ್ತಿಸಿ ಸಸ್ಪೆಂಡ್ ಆಗಿದ್ದರು.
ಸ್ಪೀಕರ್ ಯುಟಿ ಖಾದರ್ ಆಪ್ತನಾಗಿರುವ ಕಾಂಗ್ರೆಸ್ ಪುಢಾರಿ ಕೊಣಾಜೆ, ಉಳ್ಳಾಲ ಭಾಗದಲ್ಲಿ ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದು ಪೊಲೀಸರಿಗೆ ಮಾಹಿತಿಯಿದ್ದರೂ ನಿರ್ಲಕ್ಷ್ಯ ವಹಿಸಿದ್ದರು. ಈ ಹಿಂದೊಮ್ಮೆ ತಲಪಾಡಿಯಲ್ಲಿ ವೈಭವದ ಇಸ್ಪೀಟ್ ಜೂಜಾಟ ನಡೆಯುವಲ್ಲಿಗೆ ಪೊಲೀಸರು ದಾಳಿ ನಡೆಸಿದ್ದರು. ಎಂಟು ಮಂದಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದರೂ, ಪ್ರಮುಖ ಆರೋಪಿಯಾಗಿದ್ದ ಈ ಪುಢಾರಿ ಪರಾರಿಯಾಗಿದ್ದ. ಇದೀಗ ಮರಳುಗಾರಿಕೆಯಲ್ಲಿ ಆತನದ್ದೇ ಕೈವಾಡ ಎಂದು ಹೇಳುತ್ತಿದ್ದರೂ, ಪೊಲೀಸರು ಆ ವ್ಯಕ್ತಿಯ ಮೇಲೆ ಪ್ರಕರಣ ದಾಖಲಿಸಿಲ್ಲ.
Police Inspector Siddagowda H Bhajantri of the Mangalore Kankanady town police was suspended due to his unprofessional conduct towards a senior police official and his endorsement of illicit sand mining. Additionally, Bhajantri is allegedly impolite to regular citizens who visit the police station, according to locals.
01-08-25 11:34 pm
Mangaluru Correspondent
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
Rape Case, Prajwal Revanna Verdict : ಮೈಸೂರಿನ...
01-08-25 02:55 pm
ಧರ್ಮ 'ಸ್ಥಳ' ಕೇಸ್ ; ಪಾಯಿಂಟ್ ನಂ.1ರಲ್ಲಿ ಸಿಕ್ಕ...
01-08-25 01:31 pm
01-08-25 10:48 pm
HK News Desk
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
02-08-25 03:51 pm
Mangaluru Correspondent
Inspector Manjunath Gowda, SIT, Dharmasthala:...
02-08-25 02:31 pm
Dharmasthala Case, UDR, SIT Police News; ಧರ್ಮ...
02-08-25 01:46 pm
Kerala Comes to Mangalore: Feast at Coral, Th...
02-08-25 01:40 pm
Forensic Expert Dr Mahabala Shetty, Dharmasth...
01-08-25 10:02 pm
01-08-25 05:05 pm
Mangalore Correspondent
13 ವರ್ಷದ ಬಾಲಕನ ಕಿಡ್ನಾಪ್ ; 5 ಲಕ್ಷ ರೂ. ಹಣ ತರುವಷ...
01-08-25 04:27 pm
Tumakuru Crime, Principal Arrest: ತುಮಕೂರು ; ಹ...
01-08-25 02:31 pm
Mangalore Crime, Police: ಅಪ್ರಾಪ್ತ ಬಾಲಕಿಯನ್ನು...
31-07-25 06:04 pm
Bangalore Cyber Fraud: ಉದ್ಯೋಗಿಯನ್ನ ನಂಬಿ ಲ್ಯಾಪ...
30-07-25 10:42 pm