ಬ್ರೇಕಿಂಗ್ ನ್ಯೂಸ್
18-01-24 05:28 pm Mangalore Correspondent ಕರಾವಳಿ
ಮಂಗಳೂರು, ಜ.18: ಮೋದಿಯನ್ನು ಮತ್ತೆ ಪ್ರಧಾನಿ ಮಾಡುವುದಕ್ಕಾಗಿ ಮಂಗಳೂರಿನಲ್ಲಿ ಮತ್ತೊಂದು ಮೋದಿ ಬ್ರಿಗೇಡ್ ಆರಂಭಗೊಂಡಿದೆ. ಹಿಂದು ಸಂಘಟನೆಯಲ್ಲಿದ್ದವರೇ ಒಂದಷ್ಟು ಮಂದಿ ಸೇರಿ ಹೊಸ ಬ್ರಿಗೇಡ್ ಮಾಡಿಕೊಂಡಿದ್ದಾರೆ. ಜನವರಿ 21ರಂದು ನಗರದ ಟಿವಿ ರಮಣ್ ಪೈ ಸಭಾಂಗಣದಲ್ಲಿ ಮೋದಿ ಬ್ರಿಗೇಡ್ ಉದ್ಘಾಟನೆ ಕಾರ್ಯಕ್ರಮ ನಡೆಯಲಿದೆ ಎಂದು ಆಯೋಜಕರು ಸುದ್ದಿಗೋಷ್ಟಿಯಲ್ಲಿ ತಿಳಿಸಿದ್ದಾರೆ.
ಈಗಾಗಲೇ ನಮೋ ಬ್ರಿಗೇಡ್ ಇರುವಾಗ ಮೋದಿ ಬ್ರಿಗೇಡ್ ಅಗತ್ಯ ಏನಿದೆ ಎಂದು ಕೇಳಿದಾಗ, ನಮಗೆ ಅಗತ್ಯ ಇದೆ. ಮೋದಿಯನ್ನು ಮತ್ತೆ ಪ್ರಧಾನಿ ಮಾಡುವುದಕ್ಕಾಗಿ ಅಭಿಯಾನ ನಡೆಸುತ್ತೇವೆ ಎಂದರು. ಅದಕ್ಕೆ ಬಿಜೆಪಿಯವರು ಇದ್ದಾರಲ್ಲಾ, ನೀವು ಯಾಕೆ ಮಾಡೋದು ಎಂದು ಕೇಳಿದ್ದಕ್ಕೆ, ನಾವು ಕೂಡ ಪ್ರತ್ಯೇಕವಾಗಿ ಮಾಡುತ್ತೇವೆ ಎಂದರು. ಬಿಜೆಪಿಯಲ್ಲಿ ಲೈಟ್ ಕಂಬ ನಿಲ್ಲಿಸಿದರೂ ಗೆಲ್ಲುತ್ತಾರೆ ಎನ್ನುವ ಭಾವನೆ ಇದೆಯಲ್ಲಾ, ನೀವೇನು ಹೇಳುತ್ತೀರಿ ಎಂದು ಕೇಳಿದ್ದಕ್ಕೆ, ನಾವು ಅಭ್ಯರ್ಥಿ ಯಾರಾದ್ರೂ ಗೆಲ್ಲಿಸಲು ಶ್ರಮಿಸುತ್ತೇವೆ, ಯಾವ ಲೈಟ್ ಕಂಬ ನಿಲ್ಲಿಸಿದರೂ ನಾವು ಮತ ಕೇಳುತ್ತೇವೆ ಎಂದರು.
ಅಭ್ಯರ್ಥಿ ಬದಲಾವಣೆ ಬಗ್ಗೆ ಬಿಜೆಪಿಯಲ್ಲೇ ಅಭಿಯಾನ ನಡೆಸುತ್ತಿದ್ದಾರಲ್ಲಾ ಎಂದು ಕೇಳಿದ್ದಕ್ಕೆ, ನಾವು ಬಿಜೆಪಿ ಕೇಂದ್ರ ಸಮಿತಿ ಯಾರನ್ನು ಅಭ್ಯರ್ಥಿ ಮಾಡುತ್ತದೋ ಅವರಿಗೆ ಬೆಂಬಲ ನೀಡುತ್ತೇವೆ ಎಂದರು. ನೀವು ಬಿಜೆಪಿಯಲ್ಲಿದ್ದೀರಾ ಎಂಬ ಪ್ರಶ್ನೆಗೆ, ನಾವು ಯಾರೂ ಬಿಜೆಪಿಯಲ್ಲಿ ಪ್ರತಿನಿಧಿಗಳಾದವರು ಇಲ್ಲ. ಬಜರಂಗದಳ, ಹಿಂದು ಜಾಗರಣಾ ವೇದಿಕೆಯಲ್ಲಿದ್ದೇವೆ ಎಂದರು. ಚುನಾವಣೆ ಕಾರಣಕ್ಕೆ ಮೋದಿ ಬ್ರಿಗೇಡ್ ಮಾಡುತ್ತಿದ್ದೀರಾ, ನೀವು ಮೋದಿಯ ಯಾವ ವಿಚಾರವನ್ನು ಹೆಚ್ಚು ಲೈಕ್ ಮಾಡುತ್ತೀರಿ ಎಂದು ಕೇಳಿದ್ದಕ್ಕೆ, ಮೋದಿಯ ಯೋಜನೆಗಳನ್ನು ಲೈಕ್ ಮಾಡುತ್ತೇವೆ, ಜನಧನ್ ಖಾತೆಗಳನ್ನು ಮಾಡಿ ಎಲ್ಲರಿಗೂ ಬ್ಯಾಂಕ್ ಖಾತೆ ಮಾಡಿಸಿದ್ದಾರೆ ಎಂದಾಗ, ಜನಧನ್ ಖಾತೆಯಲ್ಲಿ ಸ್ಕ್ಯಾಮ್ ಆಗಿದೆಯೆಂಬ ಆರೋಪ ಇದೆಯಲ್ಲ ಎಂದು ಮರು ಪ್ರಶ್ನೆ ಹಾಕಿದರು.
ನೀವು ಇಲ್ಲಿನ ಸಂಸದರ ಕೆಲಸವನ್ನೇ ಹೇಳಬೇಕಲ್ಲಾ ಎಂದು ಹೇಳಿದಾಗ, ಹೌದು.. ಸಂಸದರು ಒಳ್ಳೆಯ ಕೆಲಸ ಮಾಡಿದ್ದಾರೆ, ಅದನ್ನು ಹೇಳುತ್ತೇವೆ ಎಂದರು. ಪತ್ರಕರ್ತರ ಉಲ್ಟಾ ಪ್ರಶ್ನೆಗಳಿಗೆ ಉತ್ತರಿಸಲಾಗದೆ ಎಡವಿದ್ದೂ ಆಯಿತು. ಸುದ್ದಿಗೋಷ್ಟಿಯಲ್ಲಿ ಟಿಕ್ಕಿ ರವಿ, ಶಿವಪ್ರಸಾದ್, ಪದ್ಮನಾಭ, ದಿನೇಶ್ ಕೆ. ಮತ್ತಿತರರು ಇದ್ದರು.
Another Modi Brigade to be inaugurated in Mangalore, says we will make modi win for sure.
06-04-26 08:51 pm
HK News Staffer
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
06-04-26 06:16 pm
HK News Staffer
ಗಲ್ಫ್ ಯುದ್ಧ ಎಫೆಕ್ಟ್ ; ಇಸ್ರೇಲ್ ಗೆ ಏರ್ ಇಂಡಿಯಾ ವ...
06-04-26 06:09 pm
ಯುಎಇಯಿಂದ ಪಾಕಿಸ್ತಾನಕ್ಕೆ ಬಿಗ್ ಶಾಕ್ ; 2 ಬಿಲಿಯನ್...
05-04-26 12:37 pm
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
06-04-26 07:58 pm
HK News Staffer
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
06-04-26 05:40 pm
HK News Staffer
ಆತ್ಮಹತ್ಯೆ ಮಾಡಿಕೊಂಡ ಪತ್ನಿಯನ್ನು ನೋಡಲು ಆಸ್ಪತ್ರೆಗ...
06-04-26 02:34 pm
ಹಂದಿ ಬೇಟೆಗಾಗಿ ತೋಟದಲ್ಲಿ ಇಟ್ಟಿದ್ದ ನಾಡಬಾಂಬ್ ಸ್ಫೋ...
05-04-26 11:03 am
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm