ಬ್ರೇಕಿಂಗ್ ನ್ಯೂಸ್
19-01-24 08:50 pm Mangalore Correspondent ಕರಾವಳಿ
ಮಂಗಳೂರು, ಜ.19; ಕೇರಳ ಮೂಲದ ನರ್ಸಿಂಗ್ ವಿದ್ಯಾರ್ಥಿಗಳಾದ ಯುವಕ- ಯುವತಿ ಕದ್ರಿ ಪಾರ್ಕಿಗೆ ಬಂದಿದ್ದಾಗ, ಯುವಕರ ಗುಂಪು ಯುವ ಜೋಡಿಯನ್ನು ಹಿಂದು- ಮುಸ್ಲಿಂ ಅನ್ಕೊಂಡು ಹಲ್ಲೆಗೈದು ನೈತಿಕ ಪೊಲೀಸ್ ಗಿರಿ ನಡೆಸಿದ ಘಟನೆ ನಡೆದಿದೆ.
ದೇರಳಕಟ್ಟೆಯ ಯೆನಪೋಯ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿನಿ ಮತ್ತು ನಂತೂರಿನ ಜಿಎನ್ಎಂ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿ ಜೊತೆಗೆ ಶುಕ್ರವಾರ ಬೆಳಗ್ಗೆ ಕದ್ರಿ ಪಾರ್ಕಿಗೆ ಆಗಮಿಸಿದ್ದರು. ಅವರು ಬಸ್ಸಿನಲ್ಲಿ ಬರುತ್ತಿದ್ದಾಗಲೇ ಹಿಂಬಾಲಿಸಿದ್ದ ಇತರೇ ವಿದ್ಯಾರ್ಥಿಗಳ ತಂಡ ಕದ್ರಿ ಪಾರ್ಕ್ ಬರುತ್ತಲೇ ಅಡ್ಡಗಟ್ಟಿ ಪ್ರಶ್ನೆ ಮಾಡಿದ್ದಾರೆ. ಯುವಕ- ಯುವತಿ ಕೇರಳ ಮೂಲದವರಾಗಿದ್ದು ಮಲೆಯಾಳಂ ಮಾತನಾಡುತ್ತಿದ್ದರು. ಹಿಂದು ಯುವತಿ ಮತ್ತು ಮುಸ್ಲಿಂ ಯುವಕ ಅನ್ಕೊಂಡು ಪ್ರಶ್ನೆ ಮಾಡಿ, ಇಬ್ಬರ ಮೇಲೂ ಹಲ್ಲೆಗೆ ಯತ್ನಿಸಿದ್ದಾರೆ. ಅಲ್ಲದೆ, ಅವರ ವಿಡಿಯೋ, ಫೋಟೋ ರೆಕಾರ್ಡ್ ಮಾಡಿದ್ದಾರೆ.
ಅಷ್ಟರಲ್ಲಿ ಕದ್ರಿ ಪೊಲೀಸರು ಸ್ಥಳಕ್ಕೆ ಬಂದು ಯುವಕ- ಯುವತಿಯನ್ನು ರಕ್ಷಿಸಿದ್ದು, ಹಲ್ಲೆಗೆ ಮುಂದಾಗಿದ್ದ ಮೂವರು ಯುವಕರನ್ನು ಅರೆಸ್ಟ್ ಮಾಡಿದ್ದಾರೆ. ಆರೋಪಿತರನ್ನು ನಿತಿನ್(18) ಮತ್ತು ಹರ್ಷ (18) ಎಂದು ಗುರುತಿಸಿದ್ದು, ಇನ್ನೊಬ್ಬ 17 ವರ್ಷದವನು. ಈ ಮೂವರು ಕೂಡ ವಿದ್ಯಾರ್ಥಿಗಳಾಗಿದ್ದು, ಹಲ್ಲೆಗೆ ಯತ್ನಿಸಿ ಪೊಲೀಸ್ ಕೇಸು ಎದುರಿಸುತ್ತಿದ್ದಾರೆ. ಕದ್ರಿ ಠಾಣೆಯಲ್ಲಿ ಇವರ ವಿರುದ್ಧ 341, 504, 509, 354ಬಿ, 354ಡಿ ಸೆಕ್ಷನ್ ಅಡಿ ಕೇಸು ದಾಖಲಾಗಿದೆ. ಹಲ್ಲೆಗೀಡಾದ ವಿದ್ಯಾರ್ಥಿ ಅಖಿಲ್ ಎಂಬಾತನಾಗಿದ್ದು, ಆತ ಕ್ರಿಸ್ತಿಯನ್ ಧರ್ಮೀಯನಾಗಿದ್ದ.
Moral Policing in Mangalore, three arrested for assulting couple at Kadri Park. Those who attacked the students are also said to be students. Kadri police who came to the spot have arrested three.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm