ಬ್ರೇಕಿಂಗ್ ನ್ಯೂಸ್
20-01-24 12:22 pm HK News Desk ಕರಾವಳಿ
ಚಿತ್ರದುರ್ಗ, ಜ 20: ಚಲಿಸುತ್ತಿದ್ದ ಕಾರು ಪಲ್ಟಿಯಾದ ಪರಿಣಾಮ ಮೂವರು ಮೃತಪಟ್ಟು ಮತ್ತೆ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಚಿತ್ರದುರ್ಗದ ಮೊಳಕಾಲ್ಮೂರು ತಾಲೂಕಿನ ರಾಂಪುರ ಬಳಿ ಸಂಭವಿಸಿದೆ. ಮೃತರೆಲ್ಲರೂ ಬಳ್ಳಾರಿಯ ಸಿರುಗುಪ್ಪ ಮೂಲದವರೆಂದು ತಿಳಿದು ಬಂದಿದೆ.
ಘಟನೆಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ರಾಂಪುರ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮೃತರು ಬೆಂಗಳೂರಿನಿಂದ ಅಜ್ಜಿಯ ಶವವನ್ನು ಸಿರುಗುಪ್ಪಗೆ ಕೊಂಡೊಯ್ಯುತ್ತಿದ್ದರು. ರಾಂಪುರ ಬಳಿಯ ಗ್ರ್ಯಾಂಡ್ ಪೋರ್ಡ್ ಹೋಟೆಲ್ ಬಳಿ ಕಾರಿನ ಟೈರ್ ಇದ್ದಕ್ಕಿದ್ದಂತೆ ಬ್ಲಾಸ್ಟ್ ಆಗಿ ಕಾರು ಪಲ್ಟಿಯಾಗಿದೆ. ಪರಿಣಾಮ ಅಜ್ಜಿಯ ಮೂವರು ಮೊಮ್ಮಕ್ಕಳು ಕೂಡ ಹೆದ್ದಾರಿಯಲ್ಲಿ ದಾರುಣವಾಗಿ ಸಾವನ್ನಪ್ಪಿದ್ದಾರೆ. ಅಜ್ಜಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಸುದ್ದಿ ತಿಳಿದು ಸ್ಥಳಕ್ಕೆ ಬಂದ ಪಿಎಸ್ಐ ಪರಶುರಾಮ್ ಲಮಾಣಿ ಪರಿಶೀಲನೆ ನಡೆಸಿದರು. ರಾಂಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಇದಕ್ಕೂ ಮುನ್ನ ಚಿತ್ರದುರ್ಗ ತಾಲೂಕಿನ ಮದಕರಿಪುರ ಗ್ರಾಮದ ಸಮೀಪ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಟ್ಯಾಂಕರ್ ಲಾರಿಗೆ ಕಾರು ಡಿಕ್ಕಿಯಾದ ಪರಿಣಾಮ ಇಬ್ಬರು ಮಹಿಳೆಯರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ನಡೆದಿತ್ತು. ಮೃತಪಟ್ಟ ಮಹಿಳೆಯರನ್ನು ಬೆಂಗಳೂರಿನ ನಿರ್ಮಲಾ(55), ವಿನುತಾ(40) ಎಂದು ಗುರುತಿಸಲಾಗಿತ್ತು. ಗಾಯಾಳುಗಳಾದ ಫಣಿರಾಜ್ (36), ರಶ್ಮಿ(32) ಮತ್ತು ಯಶಸ್(2) ಎಂಬವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಗಳೂರಿಂದ ಹೊಸಪೇಟೆಗೆ ತೆರಳುತ್ತಿದ್ದಾಗ ಅಪಘಾತ ನಡೆದಿದೆ. ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಸ್ತೆ ಅಪಘಾತದಿಂದ ಶುಕ್ರವಾರ ಒಂದೇ ದಿನ ಜಿಲ್ಲೆಯಲ್ಲಿ ಒಟ್ಟು ಐದು ಜನ ಸಾವನ್ನಪ್ಪಿದ್ದಾರೆ.
Chitradruga accident, three killed on spot after car tyre blast. The three were carrying the dead body of the grand mother to home town.
07-08-26 10:42 pm
HK News Desk
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
ತಂದೆಯನ್ನು ವೃದ್ಧಾಶ್ರಮಕ್ಕೆ ಸೇರಿಸಿ ಸಾವಿಗೂ ಬಾರದ ಪ...
06-08-26 03:49 pm
ಕಲಬುರಗಿಯಲ್ಲಿ SIR ಪರಿಷ್ಕರಣೆ ಶಾಕ್ ; 5.36 ಲಕ್ಷ...
06-08-26 02:19 pm
'ಮಂತ್ರಿ ಸ್ಥಾನಕ್ಕೆ ಕೋಟಿ ಕೋಟಿ ಡೀಲ್?' ಮಾಜಿ ಸಚಿವರ...
05-08-26 10:56 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
07-08-26 10:13 pm
HK News Desk
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
BC Road Accident, Mangalore: ಬಿಸಿ ರೋಡ್ ಬಳಿ ಟಿ...
06-08-26 11:03 pm
ಅಯೋಧ್ಯೆ ಕಾಣಿಕೆ ಹಣ ಕಳವು ತೀವ್ರ ಆಘಾತಕಾರಿ, ಯಾವುದೇ...
06-08-26 10:22 pm
ಹಿಂದೂ ದೇವಸ್ಥಾನಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ...
06-08-26 09:33 pm
07-08-26 10:37 pm
HK News Desk
ಮುಡಿಪು ಬಳಿ ಹಾಡಹಗಲೇ ಒಂಟಿ ವೃದ್ಧೆಯ ಮೇಲೆ ಹಲ್ಲೆ ನಡ...
07-08-26 09:23 pm
ಉಡುಪಿಯ ಯುವ ಮಾಡೆಲ್ ಮನೆಯಲ್ಲೇ ಆತ್ಮಹತ್ಯೆ ; ಖಾಸಗಿ...
07-08-26 08:44 pm
Udupi Murder, David Dsouza: ಕುಂದಾಪುರ ಶೂಟೌಟ್ ಮ...
07-08-26 06:00 pm
ಬಟ್ಟೆ ವಿಚಾರಕ್ಕೆ ಸಹೋದರಿಯರ ಸಣ್ಣ ಜಗಳ; ತಾಯಿ ಬೈದಿದ...
07-08-26 04:22 pm