ಬ್ರೇಕಿಂಗ್ ನ್ಯೂಸ್
20-01-24 08:47 pm Mangalore Correspondent ಕರಾವಳಿ
ಮಂಗಳೂರು, ಜ.20: ತೆಂಕು ಬಡಗು ಕಲಾ ಸವ್ಯಸಾಚಿ ನಾಟ್ಯ ಮಯೂರ ರಕ್ಷಿತ್ ಶೆಟ್ಟಿ ಪಡ್ರೆ ಅವರು ಪ್ರತಿಷ್ಠಿತ ಕುಂದೇಶ್ವರ ಸಮ್ಮಾನ್ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಕಾರ್ಕಳದ ಹಿರ್ಗಾನ ಶ್ರೀ ಕುಂದೇಶ್ವರ ದೇವಸ್ಥಾನದ ವರ್ಷಾವಧಿ ಉತ್ಸವ ಸಂದರ್ಭ ಜ.21ರಂದು ರಾತ್ರಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಶಾಸಕ ವಿ. ಸುನಿಲ್ ಕುಮಾರ್ ಹಾಗೂ ಚಲನಚಿತ್ರ ನಟ ವಿಘ್ನೇಶ್ ಎಂ. ಉಪಸ್ಥಿತರಿರಲಿದ್ದಾರೆ. ಈ ಸಂದರ್ಭ ರಕ್ಷಿತ್ ಪಡ್ರೆ ಅವರು ಅಭಿನಯಿಸುವ ಶ್ವೇತಕುಮಾರ ಚರಿತ್ರೆ ಯಕ್ಷನಾಟಕ ಪ್ರದರ್ಶನಗೊಳ್ಳಲಿದೆ ಎಂದು ಕಾರ್ಯಕ್ರಮ ಸಂಯೋಜಕ ಜಿತೇಂದ್ರ ಕುಂದೇಶ್ವರ ತಿಳಿಸಿದ್ದಾರೆ.
ಬಪ್ಪನಾಡು, ಸಸಿಹಿತ್ಲು, ಹೊಸನಗರ, ಎಡನೀರು ಮೇಳದಲ್ಲಿ ಕಲಾಸೇವೆ ಮಾಡಿ ಈಗ ಹನುಮಗಿರಿ ಮೇಳದಲ್ಲಿ ತಿರುಗಾಟ ಮಾಡುತ್ತಿರುವ ನಾಟ್ಯ ಮಯೂರ, ಯಕ್ಷ ಚೈತನ್ಯ ಬಿರುದಾಂಕಿತ ಪಡ್ರೆ ಅವರು, 20 ಕಡೆ ಮಕ್ಕಳಿಗಾಗಿ ಯಕ್ಷಗಾನ ತರಗತಿ ನಡೆಸುವ ಮೂಲಕ ಯಕ್ಷಗಾನ ಸೇವಾ ಕೈಂಕರ್ಯದಲ್ಲಿ ತೊಡಗಿಸಿದ್ದಾರೆ.
ಸುದರ್ಶನ, ಅಭಿಮನ್ಯು, ಮೇನಕೆ, ಭ್ರಮರ ಕುಂತಳೆ, ಸುಭದ್ರೆ, ಪ್ರಭಾವತಿ, ಕೃಷ್ಣ, ಶ್ರೀದೇವಿ, ಅಶ್ವತ್ಥಾಮ, ಸೀತೆ, ಮೋಹಿನಿ, ಮೀನಾಕ್ಷಿ ಇವರಿಗೆ ಪ್ರಸಿದ್ಧಿ ತಂದುಕೊಟ್ಟ ಪಾತ್ರಗಳು. ಎಂಎಸ್ಸಿ ಕಂಪ್ಯೂಟರ್ ಸೈನ್ಸ್ ಪದವೀಧರ ಪಡ್ರೆ ಅವರು ಭರತನಾಟ್ಯ ಪ್ರವೀಣ. ಗ್ಲಾಸ್ ಪೇಂಟಿಂಗ್, ರಂಗೋಲಿಯಲ್ಲೂ ನೈಪುಣ್ಯ ಸಾಧಿಸಿದ್ದಾರೆ.
ಜ.21 ರಂದು ರಾತ್ರಿ 7.30ರಿಂದ ಸಾಯಿಶಕ್ತಿ ಕಲಾ ಬಳಗ ಮಂಗಳೂರು ತಂಡದಿಂದ ಶ್ವೇತ ಕುಮಾರ ಚರಿತ್ರೆ ಎಂಬ ವಿಶಿಷ್ಟ ಯಕ್ಷನಾಟಕ ಪ್ರದರ್ಶನಗೊಳ್ಳಲಿದೆ. 22ರಂದು ಕುಂದೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆ ನಡೆಯಲಿದೆ.
Tenku Badagu Kala Savyasachi Natya Mayura Rakshit Shetty Padre has been selected for the prestigious Kundeshwar Samman award.
07-08-26 10:42 pm
HK News Desk
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
ತಂದೆಯನ್ನು ವೃದ್ಧಾಶ್ರಮಕ್ಕೆ ಸೇರಿಸಿ ಸಾವಿಗೂ ಬಾರದ ಪ...
06-08-26 03:49 pm
ಕಲಬುರಗಿಯಲ್ಲಿ SIR ಪರಿಷ್ಕರಣೆ ಶಾಕ್ ; 5.36 ಲಕ್ಷ...
06-08-26 02:19 pm
'ಮಂತ್ರಿ ಸ್ಥಾನಕ್ಕೆ ಕೋಟಿ ಕೋಟಿ ಡೀಲ್?' ಮಾಜಿ ಸಚಿವರ...
05-08-26 10:56 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
07-08-26 10:13 pm
HK News Desk
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
BC Road Accident, Mangalore: ಬಿಸಿ ರೋಡ್ ಬಳಿ ಟಿ...
06-08-26 11:03 pm
ಅಯೋಧ್ಯೆ ಕಾಣಿಕೆ ಹಣ ಕಳವು ತೀವ್ರ ಆಘಾತಕಾರಿ, ಯಾವುದೇ...
06-08-26 10:22 pm
ಹಿಂದೂ ದೇವಸ್ಥಾನಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ...
06-08-26 09:33 pm
07-08-26 10:37 pm
HK News Desk
ಮುಡಿಪು ಬಳಿ ಹಾಡಹಗಲೇ ಒಂಟಿ ವೃದ್ಧೆಯ ಮೇಲೆ ಹಲ್ಲೆ ನಡ...
07-08-26 09:23 pm
ಉಡುಪಿಯ ಯುವ ಮಾಡೆಲ್ ಮನೆಯಲ್ಲೇ ಆತ್ಮಹತ್ಯೆ ; ಖಾಸಗಿ...
07-08-26 08:44 pm
Udupi Murder, David Dsouza: ಕುಂದಾಪುರ ಶೂಟೌಟ್ ಮ...
07-08-26 06:00 pm
ಬಟ್ಟೆ ವಿಚಾರಕ್ಕೆ ಸಹೋದರಿಯರ ಸಣ್ಣ ಜಗಳ; ತಾಯಿ ಬೈದಿದ...
07-08-26 04:22 pm