ಬ್ರೇಕಿಂಗ್ ನ್ಯೂಸ್
20-01-24 08:47 pm Mangalore Correspondent ಕರಾವಳಿ
ಮಂಗಳೂರು, ಜ.20: ತೆಂಕು ಬಡಗು ಕಲಾ ಸವ್ಯಸಾಚಿ ನಾಟ್ಯ ಮಯೂರ ರಕ್ಷಿತ್ ಶೆಟ್ಟಿ ಪಡ್ರೆ ಅವರು ಪ್ರತಿಷ್ಠಿತ ಕುಂದೇಶ್ವರ ಸಮ್ಮಾನ್ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಕಾರ್ಕಳದ ಹಿರ್ಗಾನ ಶ್ರೀ ಕುಂದೇಶ್ವರ ದೇವಸ್ಥಾನದ ವರ್ಷಾವಧಿ ಉತ್ಸವ ಸಂದರ್ಭ ಜ.21ರಂದು ರಾತ್ರಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಶಾಸಕ ವಿ. ಸುನಿಲ್ ಕುಮಾರ್ ಹಾಗೂ ಚಲನಚಿತ್ರ ನಟ ವಿಘ್ನೇಶ್ ಎಂ. ಉಪಸ್ಥಿತರಿರಲಿದ್ದಾರೆ. ಈ ಸಂದರ್ಭ ರಕ್ಷಿತ್ ಪಡ್ರೆ ಅವರು ಅಭಿನಯಿಸುವ ಶ್ವೇತಕುಮಾರ ಚರಿತ್ರೆ ಯಕ್ಷನಾಟಕ ಪ್ರದರ್ಶನಗೊಳ್ಳಲಿದೆ ಎಂದು ಕಾರ್ಯಕ್ರಮ ಸಂಯೋಜಕ ಜಿತೇಂದ್ರ ಕುಂದೇಶ್ವರ ತಿಳಿಸಿದ್ದಾರೆ.
ಬಪ್ಪನಾಡು, ಸಸಿಹಿತ್ಲು, ಹೊಸನಗರ, ಎಡನೀರು ಮೇಳದಲ್ಲಿ ಕಲಾಸೇವೆ ಮಾಡಿ ಈಗ ಹನುಮಗಿರಿ ಮೇಳದಲ್ಲಿ ತಿರುಗಾಟ ಮಾಡುತ್ತಿರುವ ನಾಟ್ಯ ಮಯೂರ, ಯಕ್ಷ ಚೈತನ್ಯ ಬಿರುದಾಂಕಿತ ಪಡ್ರೆ ಅವರು, 20 ಕಡೆ ಮಕ್ಕಳಿಗಾಗಿ ಯಕ್ಷಗಾನ ತರಗತಿ ನಡೆಸುವ ಮೂಲಕ ಯಕ್ಷಗಾನ ಸೇವಾ ಕೈಂಕರ್ಯದಲ್ಲಿ ತೊಡಗಿಸಿದ್ದಾರೆ.
ಸುದರ್ಶನ, ಅಭಿಮನ್ಯು, ಮೇನಕೆ, ಭ್ರಮರ ಕುಂತಳೆ, ಸುಭದ್ರೆ, ಪ್ರಭಾವತಿ, ಕೃಷ್ಣ, ಶ್ರೀದೇವಿ, ಅಶ್ವತ್ಥಾಮ, ಸೀತೆ, ಮೋಹಿನಿ, ಮೀನಾಕ್ಷಿ ಇವರಿಗೆ ಪ್ರಸಿದ್ಧಿ ತಂದುಕೊಟ್ಟ ಪಾತ್ರಗಳು. ಎಂಎಸ್ಸಿ ಕಂಪ್ಯೂಟರ್ ಸೈನ್ಸ್ ಪದವೀಧರ ಪಡ್ರೆ ಅವರು ಭರತನಾಟ್ಯ ಪ್ರವೀಣ. ಗ್ಲಾಸ್ ಪೇಂಟಿಂಗ್, ರಂಗೋಲಿಯಲ್ಲೂ ನೈಪುಣ್ಯ ಸಾಧಿಸಿದ್ದಾರೆ.
ಜ.21 ರಂದು ರಾತ್ರಿ 7.30ರಿಂದ ಸಾಯಿಶಕ್ತಿ ಕಲಾ ಬಳಗ ಮಂಗಳೂರು ತಂಡದಿಂದ ಶ್ವೇತ ಕುಮಾರ ಚರಿತ್ರೆ ಎಂಬ ವಿಶಿಷ್ಟ ಯಕ್ಷನಾಟಕ ಪ್ರದರ್ಶನಗೊಳ್ಳಲಿದೆ. 22ರಂದು ಕುಂದೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆ ನಡೆಯಲಿದೆ.
Tenku Badagu Kala Savyasachi Natya Mayura Rakshit Shetty Padre has been selected for the prestigious Kundeshwar Samman award.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am