ಬ್ರೇಕಿಂಗ್ ನ್ಯೂಸ್
20-01-24 08:47 pm Mangalore Correspondent ಕರಾವಳಿ
ಮಂಗಳೂರು, ಜ.20: ತೆಂಕು ಬಡಗು ಕಲಾ ಸವ್ಯಸಾಚಿ ನಾಟ್ಯ ಮಯೂರ ರಕ್ಷಿತ್ ಶೆಟ್ಟಿ ಪಡ್ರೆ ಅವರು ಪ್ರತಿಷ್ಠಿತ ಕುಂದೇಶ್ವರ ಸಮ್ಮಾನ್ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಕಾರ್ಕಳದ ಹಿರ್ಗಾನ ಶ್ರೀ ಕುಂದೇಶ್ವರ ದೇವಸ್ಥಾನದ ವರ್ಷಾವಧಿ ಉತ್ಸವ ಸಂದರ್ಭ ಜ.21ರಂದು ರಾತ್ರಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಶಾಸಕ ವಿ. ಸುನಿಲ್ ಕುಮಾರ್ ಹಾಗೂ ಚಲನಚಿತ್ರ ನಟ ವಿಘ್ನೇಶ್ ಎಂ. ಉಪಸ್ಥಿತರಿರಲಿದ್ದಾರೆ. ಈ ಸಂದರ್ಭ ರಕ್ಷಿತ್ ಪಡ್ರೆ ಅವರು ಅಭಿನಯಿಸುವ ಶ್ವೇತಕುಮಾರ ಚರಿತ್ರೆ ಯಕ್ಷನಾಟಕ ಪ್ರದರ್ಶನಗೊಳ್ಳಲಿದೆ ಎಂದು ಕಾರ್ಯಕ್ರಮ ಸಂಯೋಜಕ ಜಿತೇಂದ್ರ ಕುಂದೇಶ್ವರ ತಿಳಿಸಿದ್ದಾರೆ.
ಬಪ್ಪನಾಡು, ಸಸಿಹಿತ್ಲು, ಹೊಸನಗರ, ಎಡನೀರು ಮೇಳದಲ್ಲಿ ಕಲಾಸೇವೆ ಮಾಡಿ ಈಗ ಹನುಮಗಿರಿ ಮೇಳದಲ್ಲಿ ತಿರುಗಾಟ ಮಾಡುತ್ತಿರುವ ನಾಟ್ಯ ಮಯೂರ, ಯಕ್ಷ ಚೈತನ್ಯ ಬಿರುದಾಂಕಿತ ಪಡ್ರೆ ಅವರು, 20 ಕಡೆ ಮಕ್ಕಳಿಗಾಗಿ ಯಕ್ಷಗಾನ ತರಗತಿ ನಡೆಸುವ ಮೂಲಕ ಯಕ್ಷಗಾನ ಸೇವಾ ಕೈಂಕರ್ಯದಲ್ಲಿ ತೊಡಗಿಸಿದ್ದಾರೆ.
ಸುದರ್ಶನ, ಅಭಿಮನ್ಯು, ಮೇನಕೆ, ಭ್ರಮರ ಕುಂತಳೆ, ಸುಭದ್ರೆ, ಪ್ರಭಾವತಿ, ಕೃಷ್ಣ, ಶ್ರೀದೇವಿ, ಅಶ್ವತ್ಥಾಮ, ಸೀತೆ, ಮೋಹಿನಿ, ಮೀನಾಕ್ಷಿ ಇವರಿಗೆ ಪ್ರಸಿದ್ಧಿ ತಂದುಕೊಟ್ಟ ಪಾತ್ರಗಳು. ಎಂಎಸ್ಸಿ ಕಂಪ್ಯೂಟರ್ ಸೈನ್ಸ್ ಪದವೀಧರ ಪಡ್ರೆ ಅವರು ಭರತನಾಟ್ಯ ಪ್ರವೀಣ. ಗ್ಲಾಸ್ ಪೇಂಟಿಂಗ್, ರಂಗೋಲಿಯಲ್ಲೂ ನೈಪುಣ್ಯ ಸಾಧಿಸಿದ್ದಾರೆ.
ಜ.21 ರಂದು ರಾತ್ರಿ 7.30ರಿಂದ ಸಾಯಿಶಕ್ತಿ ಕಲಾ ಬಳಗ ಮಂಗಳೂರು ತಂಡದಿಂದ ಶ್ವೇತ ಕುಮಾರ ಚರಿತ್ರೆ ಎಂಬ ವಿಶಿಷ್ಟ ಯಕ್ಷನಾಟಕ ಪ್ರದರ್ಶನಗೊಳ್ಳಲಿದೆ. 22ರಂದು ಕುಂದೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆ ನಡೆಯಲಿದೆ.
Tenku Badagu Kala Savyasachi Natya Mayura Rakshit Shetty Padre has been selected for the prestigious Kundeshwar Samman award.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 10:50 pm
Mangalore Correspondent
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm