ಬ್ರೇಕಿಂಗ್ ನ್ಯೂಸ್
20-01-24 10:38 pm Udupi Correspondent ಕರಾವಳಿ
ಉಡುಪಿ, ಜ.20: ಸ್ಯಾಂಡಲ್ ವುಡ್ ನಟ ರಕ್ಷಿತ್ ಶೆಟ್ಟಿ ತನ್ನ ಮೂಲ ಮನೆಯಲ್ಲಿ ದೈವದ ಕೋಲದಲ್ಲಿ ಭಾಗಿಯಾಗಿದ್ದು ಈ ವೇಳೆ ಸ್ವತಃ ದೈವದ ಮುಖವಾಡವನ್ನು ಹೊತ್ತು ದೈವದ ಕೆಲಸ ಮಾಡಿದ್ದಾರೆ. ಕುಟುಂಬದ ಮೂಲ ಮನೆಯಲ್ಲಿ ನಡೆದ ದೈವದ ಉತ್ಸವದಲ್ಲಿ ಸ್ವತಃ ತಾವೇ ನಿಂತು ದೈವದ ಮುಖವಾಡವನ್ನು ಹೊತ್ತು ಸೇವೆ ಮಾಡಿದ್ದಾರೆ.
ರಕ್ಷಿತ್ ಶೆಟ್ಟಿ ನಟನಾಗಿ ಹೆಸರು ಮಾಡಿದ್ದರೂ ತುಳುನಾಡಿನ ದೈವಗಳ ಕಾರಣಿಕ ಅರಿತು ಸೇವೆಯನ್ನು ತಪ್ಪಿಸಿಲ್ಲ. ಉಡುಪಿ ಜಿಲ್ಲೆಯ ಅಲೆವೂರು ದೊಡ್ಡ ಮನೆ ಇವರ ಮೂಲಮನೆಯಾಗಿದ್ದು ಸದ್ಯ ದೈವಗಳ ಆರಾಧನೆ ನಡೆಯುತ್ತಿದೆ. ಗುತ್ತಿನ ಮನೆಯ ಪ್ರತಿಯೊಬ್ಬರಿಗೂ ಈ ಆಚರಣೆಯಲ್ಲಿ ಜವಾಬ್ದಾರಿಗಳಿರುತ್ತವೆ. ತುಳುನಾಡಿನಲ್ಲಿ ಮಾತೃ ಪ್ರಧಾನ ವ್ಯವಸ್ಥೆ ಇದ್ದರೂ, ರಕ್ಷಿತ್ ಶೆಟ್ಟಿ ತನ್ನ ತಂದೆಯ ಮನೆಯ ದೈವದ ಚಾಕರಿಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಾರೆ. ದೈವದ ಮನೆಯಲ್ಲಿ ಪ್ರತಿಷ್ಠಾಪನೆಯ ವೇಳೆ ಮುಖವಾಡವನ್ನು ತಾನೇ ಕೈಯಾರೆ ಹಿಡಿದು ಸೇವೆ ನಡೆಸಿದ್ದಾರೆ. ಕಳೆದ ಮೂರು ದಿನಗಳಿಂದ ವಿವಿಧ ಪೂಜೆಗಳು ನಡೆಯುತ್ತಿದ್ದು ಪ್ರತಿ ಕೆಲಸದಲ್ಲೂ ಹಾಜರಿದ್ದು ಮನೆ ಮಗನ ಕರ್ತವ್ಯ ನಿಭಾಯಿಸಿದ್ದಾರೆ.




ರಕ್ಷಿತ್ ಶೆಟ್ಟಿಯ ತಂದೆ ಶ್ರೀಧರ ಶೆಟ್ಟಿ ಅವರು ಈ ದೊಡ್ಡ ಮನೆ ಕುಟುಂಬಕ್ಕೆ ಸೇರಿದವರು. ಸುಮಾರು ಏಳು ಶತಮಾನಗಳ ಇತಿಹಾಸ ಇರುವ ಈ ಗುತ್ತಿನ ಮನೆಯಲ್ಲಿ ಪಂಜುರ್ಲಿ, ಧೂಮಾವತಿ ಸೇರಿದಂತೆ ಅನೇಕ ದೈವಗಳು ಇವೆ. ವರ್ಷಂಪ್ರತಿ ಇಲ್ಲಿ ದೈವಗಳ ಉತ್ಸವ ನಡೆಯುತ್ತದೆ. ಈಗ ದೈವದ ಗುಡಿ ಮತ್ತು ಗುತ್ತಿನ ಮನೆ ಜೀರ್ಣಾವಸ್ಥೆ ತಲುಪಿದ ಕಾರಣ ಕುಟುಂಬಿಕರೆಲ್ಲ ಸೇರಿ ನೂತನ ಕಟ್ಟಡ ನಿರ್ಮಿಸಿದ್ದಾರೆ.
ಮೂಲ ಮನೆಯಲ್ಲೀಗ ದೈವಗಳ ಕೋಲ ನಡೆಯುತ್ತಿದ್ದು ಹೆತ್ತವರ ಜೊತೆಗೆ ಮನೆ ಮಗನಾಗಿ ರಕ್ಷಿತ್ ಶೆಟ್ಟಿ ದೈವದ ಕೈಂಕರ್ಯ ನಡೆಸಿದ್ದಾರೆ.
Sandalwood actor Rakshit Shetty, who participated in the deity's kola at his original home, performed the divine work by carrying the mask of the deity himself. He stood by himself at the deity's festival held at the family's original home and served with the mask of the deity.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am